318 ಅಂಗನವಾಡಿ ಕೇಂದ್ರಗಳಿಗಿಲ್ಲ ಸ್ವಂತ ಕಟ್ಟಡ


Team Udayavani, Jul 1, 2018, 12:55 PM IST

ray-2.jpg

ಯಾದಗಿರಿ: ಜಿಲ್ಲೆಯಲ್ಲಿ 1386 ಅಂಗನವಾಡಿ ಕೇಂದ್ರಗಳ ಪೈಕಿ 944 ಕೇಂದ್ರಗಳಿಗೆ ಸ್ವಂತ ಕಟ್ಟಡ ಸೌಕರ್ಯವಿದ್ದು, 318 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿಲ್ಲದೆ ಇರುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಕಾಳಜಿವಹಿಸುವ ಇಲಾಖೆಗೆ ಜಿಲ್ಲೆಯಲ್ಲಿ ಮೂಲಸೌಕರ್ಯಗಳ ಕೊರತೆಯುಂಟಾಗಿದೆ.

ಸುಮಾರು ವರ್ಷಗಳಿಂದ ನಿರ್ಮಿತಿ ಕೇಂದ್ರ ಮತ್ತು ಪಿಆರ್‌ಇಗೆ ವಹಿಸಿರುವ ಕಾಮಗಾರಿಗಳು ಹಲವೆಡೆ ಪ್ರಾರಂಭವಾಗದೇ ಇರುವುದು ತಿಂಗಳಿಗೊಮ್ಮೆ ಕೇವಲ ಕಟ್ಟಡಗಳ ಬಾಡಿಗೆಯೇ ಲಕ್ಷಾಂತರ ರೂಪಾಯಿ ವ್ಯಯಿಸಬೇಕಾಗಿರುವ ಪರಿಸ್ಥಿತಿ ಇಲಾಖೆಗೆ ಎದುರಾಗಿದೆ.

ಜಿಲ್ಲೆಯ ಶಹಾಪುರ ತಾಲೂಕಿಗೆ 386 ಅಂಗನವಾಡಿ ಕೇಂದ್ರಗಳು ಮತ್ತು 9 ಮಿನಿ ಅಂಗನವಾಡಿ ಕೇಂದ್ರಗಳು ಮಂಜೂರಾಗಿವೆ. 279 ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸಿದರೆ, ಪಂಚಾಯಿತಿ ಕಟ್ಟಡದಲ್ಲಿ 12, ಸಮುದಾಯ ಭವನದಲ್ಲಿ 12 ಹಾಗೂ ಶಾಲೆ ಕಟ್ಟಡದಲ್ಲಿ 16 ಕೇಂದ್ರಗಳನ್ನು ತೆರೆಯಲಾಗಿದ್ದು, 76 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳನ್ನು ಅವಲಂಭಿಸಿವೆ.

ಸುರಪುರ ತಾಲೂಗೆ 451 ಅಂಗನವಾಡಿ ಮತ್ತು 23 ಮಿನಿ ಅಂಗನವಾಡಿ ಕೇಂದ್ರಗಳು ಮಂಜೂರಾಗಿವ. ಇದರಲ್ಲಿ 315 ಅಂಗನವಾಡಿಗಳು ಸ್ವಂತ ಕಟ್ಟದಲ್ಲಿ ನಡೆಯುತ್ತಿವೆ. ಸಮುದಾಯ ಭವನದಲ್ಲಿ 16, ಶಾಲಾ ಕಟ್ಟಡದಲ್ಲಿ 27 ಕೇಂದ್ರಗಳಿದ್ದರೆ 116 ಅಂಗನವಾಡಿಗಳಿಗೆ ಬಾಡಿಗೆ ಕಟ್ಟಡಗಳೇ ದಿಕ್ಕು ಎನ್ನುವಂತಿದೆ.

ಯಾದಗಿರಿ ತಾಲೂಕಿನಲ್ಲಿ 239 ಅಂಗನವಾಡಿ, 4 ಮಿನಿ ಅಂಗನವಾಡಿ ಕೇಂದ್ರಗಳು ಮಂಜೂರಾಗಿವೆ. 158 ಸ್ವಂತ ಕಟ್ಟಡ ಹೊಂದಿದ್ದರೆ ಪಂಚಾಯಿತಿ ಕಟ್ಟಡದಲ್ಲಿ 3, ಸಮುದಾಯ ಭವನದಲ್ಲಿ 4, ಶಾಲಾ ಕಟ್ಟಡದಲ್ಲಿ 8 ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿವೆ. 

ಇನ್ನೂ 70 ಅಂಗನವಾಡಿಗಳಿಗೆ ಸ್ವಂತ ಕಟ್ಟಡದ ಭಾಗ್ಯ ಕರುಣಿಸಬೇಕಿದೆ. ಇನ್ನೂ ಯಾದಗಿರಿ ತಾಲೂಕಿನಿಂದ ವಿಭಜನೆಗೊಂಡ ನೂತನ ಗುರುಮಠಕಲ್‌ನಲ್ಲಿ ಕೂಡ ಇಂತಹದ್ದೇ ಸಮಸ್ಯೆ ಇದೆ. 260 ಅಂಗನವಾಡಿ, 14 ಮಿನಿ ಅಂಗನವಾಡಿ ಕೇಂದ್ರಗಳು ಗುರುಮಠಕಲ್‌ ತಾಲೂಕಿಗೆ ಮಂಜೂರಾಗಿದ್ದು, 192 ಕೇಂದ್ರಗಳು ಸ್ವಂತ ಕಟ್ಟಡದಲ್ಲಿದೆ. 5 ಪಂಚಾಯಿತಿ ಕಟ್ಟಡದಲ್ಲಿ, 5 ಸಮುದಾಯ ಭವನಗಳಲ್ಲಿ ಹಾಗೂ 16 ಶಾಲಾ ಕಟ್ಟಡಗಳಲ್ಲಿ ಮಕ್ಕಳಿಗೆ ಪೂರ್ವ ಪ್ರಾಥಮಿಕ ಅಕ್ಷರ ಜ್ಞಾನ ನೀಡುತ್ತಿದ್ದು, 56 ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿಯೇ ನಡೆಯುತ್ತಿವೆ.

ಸರ್ಕಾರ ಮಹಿಳೆಯರು ಮತ್ತು ಮಕ್ಕಳಿಗಾಗಿ ಜಾರಿಗೆ ತರುವ ಹಲವು ಯೋಜನೆಗಳ ಅನುಷ್ಠಾನಕ್ಕೆ ಅಂಗನವಾಡಿ ಕೇಂದ್ರಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತಹದ್ದರಲ್ಲಿ ನಿರ್ಮಿತಿ ಕೇಂದ್ರಕ್ಕೆ ವಹಿಸಿರುವ ಅಂಗನವಾಡಿ ಕೇಂದ್ರಗಳ
ಕಟ್ಟಡಗಳ ನಿರ್ಮಾಣದಲ್ಲಿ ಜಿಲ್ಲಾಡಳಿತವೂ ಆಸಕ್ತಿವಹಿಸದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ 

„ಅನೀಲ ಬಸೂದೆ

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.