ಕೆರೆ ಪುನರುಜ್ಜೀವನ ಸಂಕಲ್ಪವಾಗಲಿ
Team Udayavani, Jul 2, 2018, 12:07 PM IST
ಬೆಂಗಳೂರು: ಕೆರೆಗಳ ಪುನರುಜ್ಜೀವನ ಈ ಶತಮಾನದ ಸಂಕಲ್ಪವಾಗಬೇಕು ಎಂದು ಕೇಂದ್ರದ ರಾಸಾಯನಿಕ ಮತ್ತು
ರಸಗೊಬ್ಬರ ಸಚಿವ ಅನಂತಕುಮಾರ್ ಹೇಳಿದ್ದಾರೆ.
ಅದಮ್ಯ ಚೇತನ ಸಂಸ್ಥೆಯಿಂದ ಭಾನುವಾರ ಕೆಂಪಾಂಬುಧಿ ಕೆರೆ ಆವರಣದಲ್ಲಿ ಹಮ್ಮಿಕೊಂಡಿದ್ದ 131ನೇ ಹಸಿರು ಭಾನುವಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ಬೆಂಗಳೂರಿನಲ್ಲಿದ್ದ ಕೆರೆಗಳನ್ನು ಗಮನಿಸಿದಾಗ ಬೇಸರವಾಗುತ್ತಿತ್ತು.
ಈಗ ಅವುಗಳ ಪುನರುಜ್ಜೀವನಕ್ಕೆ ಆಡಳಿತ ಯಂತ್ರದೊಂದಿಗೆ ವಿವಿಧ ಸಂಸ್ಥೆಗಳು ಶ್ರಮಿಸುತ್ತಿರುವುದನ್ನು ಗಮನಿಸಿದರೆ ಸಂತಸವಾಗುತ್ತದೆ. ಕೆರೆಗಳ ಪುನರುಜ್ಜೀವನ ಈ ಶತಮಾನದ ಸಂಕಲ್ಪವಾಗಬೇಕು ಎಂದು ಹೇಳಿದರು.
ಕಳೆದ ಒಂದು ಶತಮಾನದಿಂದ ಕೆರೆಗಳನ್ನು ಒತ್ತುವರಿ ಮಾಡಿಕೊಂಡಿದ್ದೇ ಸಾಧನೆ ಎನಿಸಿದೆ. ನಗರದಲ್ಲಿರುವ
ಕೆರೆಗಳ ಒತ್ತುವರಿ ತೆರವು ಮಾಡಿ, ಮತ್ತೆ ಅವುಗಳ ಗತವೈಭವ ಮರುಕಳುಹಿಸುವಂತೆ ಮಾಡುವುದು ಈ ಶತಮಾನದ ಸಾಧನೆ ಮತ್ತು ಗುರಿಯಾಗಬೇಕು. ಈ ನಿಟ್ಟಿನಲ್ಲಿ ರಾಜಕಾರಣಿಗಳು, ಅಧಿಕಾರಿಗಳು ಮತ್ತು ಸಾರ್ವಜನಿಕರು ಸಂಕಲ್ಪ ಮಾಡಬೇಕು ಎಂದು ತಿಳಿಸಿದರು.
ಶಾಸಕ ಉದಯ ಗರುಡಾಚಾರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಸಕ ರವಿ ಸುಬ್ರಹ್ಮಣ್ಯ, ಅದಮ್ಯ
ಚೇತನ ಸಂಸ್ಥೆಯ ತೇಜಸ್ವಿನಿ ಅನಂತಕುಮಾರ್, ಪರಿಸರ ತಜ್ಞ ಆ.ನ.ಯಲ್ಲಪ್ಪ ರೆಡ್ಡಿ, ನಟಿ ಶ್ರುತಿ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ