ಶಿಕ್ಷಣದಿಂದ ಅಭಿವೃದ್ಧಿ ಸಾಧಿಸಿ
Team Udayavani, Jul 2, 2018, 3:44 PM IST
ತುಮಕೂರು: ತಿಗಳ ಸಮಾಜ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಬಹಳ ಹಿಂದುಳಿದಿದ್ದು ಈ ಸಮುದಾಯ ಆರ್ಥಿಕವಾಗಿ ಸದೃಢವಾಗಬೇಕಾದರೆ ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಪ್ರಗತಿ ಸಾಧಿಸಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಹೇಳಿದರು.
ನಗರದ ಸರಪಳಿ ಸ್ವಾಮಿ ಮಠದ ಆವರಣದಲ್ಲಿ ಭಾನುವಾರ ಮಹಾಲಕ್ಷ್ಮೀ ತಿಗಳರ ಮಹಾ ಸಂಸ್ಥಾನ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಗಣ್ಯರಿಗೆ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ತಿಗಳ ಸಮುದಾಯ ಶೋಷಿತ ವರ್ಗಕ್ಕೆ ಸೇರಿದ ಸಮಾಜ ಈ ಸಮಾಜದಲ್ಲಿ ಬಹಳಷ್ಟು ಶ್ರಮ ಜೀವಿಗಳಿದ್ದಾರೆ. ಕರ್ನಾಟಕ ಅಷ್ಟೇ ಅಲ್ಲ ದೇಶದಲ್ಲಿ ತೋಟಗಾರಿಕೆ ಉಳಿದಿದ್ದರೆ ಈ ಸಮುದಾಯದಿಂದ ಮಾತ್ರ ಎಂದು ಹೇಳಿದರು.
ಕೃಷಿ ಮೂಲ ಉದ್ಯೋಗ: ಚಿಕ್ಕ ಜಾಗ ಸಿಕ್ಕಿದರು ತೋಟಗಾರಿಗೆ ಕೃಷಿ ಮಾಡುವುದು ಇವರ ರಕ್ತಗತವಾಗಿ ಬಂದಿದ್ದು. ತೋಟಗಾರಿಕೆ ಬೆಳೆ ಬೆಳೆದು ಯಶಸ್ಸು ಕಾಣಬೇಕಾಗಿದೆ. ತೋಟಗಾರಿಕೆ ಬೆಳೆಗಳಿಗೆ ದೇಶದ ಬೇರೆ ಬೇರೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇದೆ ಎಂದು ಹೇಳಿದರು.
ರೈತರಿಗೆ ಸರ್ಕಾರ ಹಲವಾರು ಸೌಲಭ್ಯ ಕೊಡುತ್ತಿದೆ. ಈ ಹಿಂದಿನ ಸರ್ಕಾರವೂ ನೀಡಿದೆ ಈಗಿನ ಸಮ್ಮಿಶ್ರ ಸರ್ಕಾರವೂ ರೈತರಿಗೆ ಅನುಕೂಲವನ್ನು ಒದಗಿಸುತ್ತದೆ ರೈತರು ಸರ್ಕಾರದಿಂದ ಬರುವ ಸೌಲಭ್ಯ ಗಳನ್ನು ಪಡೆದು ಕೃಷಿ ತೋಟಗಾರಿಕೆ ಕ್ಷೇತ್ರದಲ್ಲಿ ಪ್ರಗತಿ ಕಂಡು ಆರ್ಥಿಕವಾಗಿ ಸದೃಢವಾಗಬೇಕು. ಇದರ ಜೊತೆ ಜೊತೆಗೆ ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ಕೊಡಿಸಬೇಕು ಎಂದು ಹೇಳಿದರು.
ಸರ್ಕಾರದ ನೆರವು: ತಿಗಳ ಸಮುದಾಯಕ್ಕೆ ಸರ್ಕಾರ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲಿದೆ. ಹನುಮಂತಗಿರಿಗೆ 50 ಲಕ್ಷ ಅನುದಾನ ನೀಡಿದ್ದೆ. ಎಂಎಲ್ಸಿ ಅನುದಾನದಲ್ಲಿ 10 ಲಕ್ಷ ರೂ. ನೀಡಿದ್ದೆ ಈ ಹಿಂದಿನ ಸರ್ಕಾರದಲ್ಲಿ ಸರಪಳಿ ಮಠಕ್ಕೆ 3 ಕೋಟಿ ರೂ. ನೀಡಲಾಗಿತ್ತು. ಸರ್ಕಾರದ ಆದೇಶವೂ ಆಗಿತ್ತು ಚುನಾವಣೆ ಬಂದಿದ್ದರಿಂದ ಆ ಹಣ ಬಿಡುಗಡೆಯಾಗಿಲ್ಲ ಈ ಸಂಬಂಧವಾಗಿ ಮುಖ್ಯಮಂತ್ರಿಗಳ ಮನವೊಲಿಸಿ ಹಣವನ್ನು ಬಿಡುಗಡೆ ಮಾಡಿಸುವ ಭರವಸೆ ನೀಡಿದರು.
ಶಿಕ್ಷಣಕ್ಕೆ ಹಣ ಕೇಳುತ್ತಿಲ್ಲ: ಸಂಸದ ಎಸ್.ಪಿ. ಮುದ್ದಹನುಮೇಗೌಡ ಮಾತನಾಡಿ, ಎಲ್ಲಾ ಸಮಾಜದ ಸಮುದಾಯಗಳು ಸಮುದಾಯ ಭವನವನ್ನು ಕಟ್ಟಲು ಹಣವನ್ನು ಕೇಳುತ್ತಾರೆ ಆದರೆ ಮಕ್ಕಳ ಶೈಕ್ಷಣಿಕಾಭಿವೃದ್ಧಿಗಾಗಿ ಯಾರು ಸಹ ಹಣವನ್ನು ಕೇಳುತ್ತಿಲ್ಲ ಎಂದು ವಿಷಾದಿಸಿದರು.
ಸಣ್ಣ ಕೈಗಾರಿಕಾ ಸಚಿವ ಎಸ್.ಆರ್. ಶ್ರೀನಿವಾಸ್ ಮಾತನಾಡಿ, ನಮ್ಮ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸಿಕೊಂಡು ಶೈಕ್ಷಣಿಕವಾಗಿ ಪ್ರಗತಿಹೊಂದಬೇಕಾದರೆ ಮಠಗಳು ಅಗತ್ಯ ಆದ್ದರಿಂದ ಮಠ ಬೆಳೆಯಲು ಎಲ್ಲರೂ ಕೈಜೋಡಿಸಬೇಕೆಂದು ಹೇಳಿದರು.
ನಿಗಮ, ಮಂಡಳಿ ಸ್ಥಾನ ನೀಡಿ: ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಶ್ರೀ ಮಹಾಲಕ್ಷ್ಮೀ ಮಹಾ ಸಂಸ್ಥಾನ ಪೀಠದ ಜ್ಞಾನಾನಂದಪುರಿ ಸ್ವಾಮೀಜಿ ಮಾತನಾಡಿ, ರಾಜ್ಯದಲ್ಲಿ ತಿಗಳ ಸಮುದಾಯ 40 ಲಕ್ಷಕ್ಕೂ ಹೆಚ್ಚು ಜನರಿದ್ದು ನಮ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು, ನಿಗಮ ಮಂಡಲಿಗಳಿಗೆ ನಮ್ಮ ಸಮುದಾಯದ ಜನರಿಗೆ ಸ್ಥಾನ ನೀಡಬೇಕೆಂದು ಮನವಿ ಮಾಡಿದರು.
ಅಣಪನಹಳ್ಳಿ ಶನೇಶ್ವರ ಮಠದ ನರಸಿಂಹ ಸ್ವಾಮೀಜಿ, ಶಾಸಕ ಜಿ.ಬಿ. ಜ್ಯೋತಿಗಣೇಶ್, ವಿಧಾನ ಪರಿಷತ್ ಸದಸ್ಯ ಪಿ.ಆರ್. ರಮೇಶ್, ಕೆಪೆಕ್ ನಿಗಮದ ಮಾಜಿ ಅಧ್ಯಕ್ಷ ರೇವಣ್ಣ ಸಿದ್ದಯ್ಯ, ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷ ಗುಣಶೇಖರ್, ಬಿಬಿಎಂಪಿ ವಿರೋಧ ಪಕ್ಷದ ನಾಯಕ ಎ.ಎಚ್. ಬಸವರಾಜು, ಬೆಂಗಳೂರು ಕೆಟಿಎಸ್ವಿ ಸಂಘದ ಅಧ್ಯಕ್ಷ ಎಸ್. ಸಿದ್ದಗಂಗಯ್ಯ, ಮಾಜಿ ಶಾಸಕ ನೆ.ಲ. ನರೇಂದ್ರ ಬಾಬು, ನಗರಸಭೆ ಮಾಜಿ ಅಧ್ಯಕ್ಷೆ ಕಮಲಮ್ಮ, ಪಾಲಿಕೆ ಸದಸ್ಯರಾದ ರಾಮಕೃಷ್ಣಯ್ಯ, ವಾಸು, ಜಯಲಕ್ಷ್ಮೀ ನಗರಸಿಂಹರಾಜು, ಬಾಲಕೃಷ್ಣ, ಲಲಿತಾ ರವೀಶ್, ಜಯಮ ಭಾಗವಹಿಸಿದ್ದರು.
ದೇಶದಲ್ಲಿ ಸಾವಿರಾರು ರೈತರು ಸಾಲ ಬಾಧೆ, ಬೆಳೆ ವೈಫಲ್ಯಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ತಿಗಳ ಸಮುದಾಯದ ಒಬ್ಬರೂ ಆತ್ಮಹತ್ಯೆ ಮಾಡಿಕೊಂಡಿಲ್ಲ. ಎಂತಹ ಸಂದರ್ಭ ಬಂದರೂ ಶ್ರಮ ಜೀವನದ ಮೂಲಕ
ಎದುರಿಸುತ್ತೇವೆ ಎನ್ನುವ ಮನಸ್ಥತಿ ತಿಗಳ ಸಮುದಾಯಕ್ಕಿದೆ. ಶೋಷಿತ ವರ್ಗಕ್ಕೆ ಸೇರಿದ ಈ ಸಮುದಾಯಕ್ಕೆ ಯಾರ
ಸಹಕಾರವೂ ಇಲ್ಲ ಎಂದುಕೊಳ್ಳಬೇಡಿ ನನ್ನ ಸಹಕಾರ ಈ ಸಮುದಾಯಕ್ಕೆ ಇರುತ್ತದೆ ನಿಮ್ಮ ಸಮುದಾಯದವರಿಗೆ ರಾಜಕೀಯ ಸ್ಥಾನಮಾನ ನೀಡುತ್ತೇನೆ
ಡಾ. ಜಿ. ಪರಮೇಶ್ವರ್ ಉಪ ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ
Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು
Pavagada: ಸಿಡಿಲಿನ ಪರಿಣಾಮ ಹೊತ್ತಿ ಉರಿದ ದನದ ಕೊಟ್ಟಿಗೆ; ಸ್ಥಳದಲ್ಲಿಯೇ ಹಸು ಸಜೀವ ದಹನ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ