ಹೆಬ್ರಿ: ಅಭಿವೃದ್ಧಿ ಕಾಣದ ನೀರಾಣಿ -ಕುಚ್ಚಾರು ಮುಖ್ಯ ರಸ್ತೆ


Team Udayavani, Jul 4, 2018, 2:50 AM IST

neerani-3-7.jpg

ಹೆಬ್ರಿ: ಕಬ್ಬಿನಾಲೆ ಗ್ರಾಮದ ನೀರಾಣಿ -ಕುಚ್ಚಾರು ಮುಖ್ಯ ರಸ್ತೆಯು ಹಲವಾರು ವರ್ಷಗಳಿಂದ ದುರಸ್ತಿ ಕಾಣದೆ ಸಂಪೂರ್ಣ ಹದಗೆಟ್ಟಿದ್ದು, ಶೀಘ್ರ ದುರಸ್ತಿಗೊಳಿಸುವಂತೆ ಈ ಭಾಗದ ಗ್ರಾಮಸ್ಥರು ಆಗ್ರಹಿಸಿದ್ದಾರೆ. ರಸ್ತೆಗೆ ಹಾಕಿದ್ದ ಜಲ್ಲಿ ಮಣ್ಣು ಮಳೆಯ ನೀರಿನಲ್ಲಿ ಕೊಚ್ಚಿಹೋಗಿದ್ದು ನಡೆದುಕೊಂಡು ಹೋಗುವುದು ಕೂಡ ಕಷ್ಟಕರವಾಗಿದೆ. ತೀರ ಹದಗೆಟ್ಟ ರಸ್ತೆಯನ್ನು ಗ್ರಾ.ಪಂ. ಹಾಗೂ ಗ್ರಾಮಸ್ಥರ ಸಹಕಾರದಿಂದ ಕಳೆದ ಬೇಸಿಗೆಯಲ್ಲಿ ಮಣ್ಣು ಹಾಕಿ ಸಮತಟ್ಟು ಮಾಡಲಾಗಿತ್ತು. ಆದರೆ ಮಳೆಗೆ ಈ ಬಾರಿ ರಸ್ತೆ ಮತ್ತೆ ಕೊಚ್ಚಿಹೋಗಿದೆ.

ಸಂಪರ್ಕ ಕಡಿತಗೊಳ್ಳುವ ಭೀತಿ 
ರಸ್ತೆಯ ಬದಿಯಲ್ಲಿ ಒಂದೆಡೆ ರಸ್ತೆಗೆ ವಾಲಿರುವ ಅಪಾಯಕಾರಿ ಮರಗಳಿದ್ದು ಯಾವುದೇ ಸಂದರ್ಭ ಬೀಳಬಹುದಾಗಿದೆ. ಅಲ್ಲದೆ ವಿಪರೀತ ಮಳೆಗೆ ಗುಡ್ಡಗಳು ಕುಸಿಯುತ್ತಿದ್ದು ಸಂಪರ್ಕ ಕಡಿತಗೊಳ್ಳುವ ಭೀತಿಯಲ್ಲಿ ಈ ಭಾಗದ ಜನರಿದ್ದಾರೆ.

ಕಾಂಕ್ರೀಟ್‌ ಒಂದೇ ಪರಿಹಾರ 
ಈ ಭಾಗದ ಪ್ರದೇಶ ಗುಡ್ಡ – ಕಾಡುಗಳಿಂದ ಆವೃತವಾಗಿದ್ದು ವಿಪರೀತ ಮಳೆ ಸುರಿಯುವ ಪರಿಣಾಮ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ರಸ್ತೆ ಕಾಂಕ್ರೀಟೀಕರಣಗೊಳಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಸಂಪೂರ್ಣ ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕೆ ಕನಿಷ್ಠ 2ರಿಂದ 3 ಕೋಟಿ ರೂ. ಅನುದಾನದ ಆವಶ್ಯಕತೆ ಇದೆ.

ಎರಡು ಗ್ರಾಮಗಳ ಅಭಿವೃದ್ಧಿ 
ಈ ರಸ್ತೆಯು ಗ್ರಾಮದ ಮುಖ್ಯ ರಸ್ತೆಯಾಗಿದ್ದು ದುರಸ್ತಿಗೊಂಡಲ್ಲಿ ಇದಕ್ಕೆ ಹೊಂದಿಕೊಂಡಿರುವ  ಹಲವಾರು ಕೂಡುರಸ್ತೆಗಳ ಸಂಪರ್ಕವಾಗಿ ಆ ಭಾಗದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ನಾಡಾ³ಲು ಗ್ರಾಮಕ್ಕೆ ಇದೇ ಸಂಪರ್ಕ ರಸ್ತೆಯಾದ್ದರಿಂದ ರಸ್ತೆ ಅಭಿವೃದ್ಧಿಯಾದಲ್ಲಿ ನಾಡ್ಪಾಲು ಹಾಗೂ ಕಬ್ಬಿನಾಲೆ ಎರಡೂ ಗ್ರಾಮಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ.

ಆ ಪ್ರದೇಶದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡ ಸೇರಿದಂತೆ ಮಲೆಕುಡಿಯರು ಹೆಚ್ಚಾಗಿ ವಾಸವಿದ್ದು ಶಾಸಕರು ತಮ್ಮ ಶಾಸನಬದ್ಧ  ಅನುದಾನ /ಸರಕಾರದ ವಿಶೇಷ  ಅನುದಾನ /ಪ್ರಾಕೃತಿಕ ವಿಕೋಪ ಅನುದಾನ ಆಥವಾ ಲೋಕಸಭಾ ಸದಸ್ಯರ ಅನುದಾನ ಅಥವಾ ಲೋಕಸಭಾ ಸದಸ್ಯರ ಅನುದಾನ ಮೂಲಕವಾದರೂ ಅನುದಾನವನ್ನು ಬಿಡುಗಡೆಗೊಳಿಸಿ ಈ ಭಾಗದ ಹಲವು ವರ್ಷಗಳ ಬೇಡಿಕೆಯಾದ ರಸ್ತೆ ದುರಸ್ತಿಯನ್ನು ಶೀಘ್ರಗೊಳಿಸಿ ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕೆಂದು ಪಂಚಾಯತ್‌ ಸದಸ್ಯ ಸಂತೋಷ್‌ ಕುಮಾರ್‌ ಶೆಟ್ಟಿ ವಿನಂತಿಸಿದ್ದಾರೆ.

ಪ್ರಸ್ತಾವನೆ ಸಲ್ಲಿಸಲಾಗಿದೆ
ಈ ಭಾಗದ ರಸ್ತೆಯ ಡಾಮರೀಕರಣಗೊಳಿಸಲು ಈಗಾಗಲೇ ಶಾಸಕರು 25ಲಕ್ಷ ರೂ. ಅನುದಾನವನ್ನು ಬಿಡುಗಡೆಗೊಳಿಸುವಂತೆ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಅನುದಾನ ಬಿಡುಗಡೆಗೊಂಡ ಕೂಡಲೇ ಕಾಮಗಾರಿ ಆರಂಭವಾಗಲಿದೆ.
– ಜ್ಯೋತಿ ಹರೀಶ್‌, ಜಿ.ಪಂ. ಸದಸ್ಯರು

ಟಾಪ್ ನ್ಯೂಸ್

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಮೂಳೂರು: ಲಾರಿಯಿಂದ ಬಿದ್ದು ಗಾಯ

Kapu ಮೂಳೂರು: ಲಾರಿಯಿಂದ ಬಿದ್ದು ಗಾಯ

Mandarthi: ಮಳೆಗಾಲದ ಯಕ್ಷಗಾನ

Mandarthi: ಜೂ.18 ರಂದು ಮಳೆಗಾಲದ ಯಕ್ಷಗಾನ ಸೇವೆ ಆಟಕ್ಕೆ ಚಾಲನೆ

udupi-1

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.