ಯುವ ಜನತೆ ಹೊರ ಜಗತ್ತಿನ ಕಡೆಗೆ ಬರಲಿ: ತಿಮಕ್ಕ 


Team Udayavani, Jul 4, 2018, 10:17 AM IST

4-july-1.jpg

ಅಕ್ಷರ ಜ್ಞಾನ ವಿಲ್ಲದಿದ್ದರೂ ನೂರಾರು ಗಿಡ-ಮರಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನೇ ತಮ್ಮ ಮಕ್ಕಳಂತೆ ಸಾಕಿ ಪರಿಸರ ಪ್ರೀತಿಗೆ ಮಾದರಿ ಎನಿಸಿಕೊಂಡಿರುವ ಮಹಿಳೆ ಸಾಲು ಮರದ ತಿಮ್ಮಕ್ಕ. ಈಗ ಅವರಿಗೆ ವಯಸ್ಸು 107. ಆದರೆ, ಈ ಇಳಿ ವಯಸ್ಸಿನಲ್ಲಿಯೂ ಊರೂರು ತಿರುಗಿ ಪರಿಸರ- ಗಿಡ- ಮರಗಳನ್ನು ನೆಟ್ಟು ಬೆಳೆಸುವಂತೆ ಜನರಿಗೆ ಸ್ಫೂರ್ತಿ ನೀಡುತ್ತಿದ್ದಾರೆ. ತಾವು ಹೋದ ಕಡೆಗಳಲ್ಲೆಲ್ಲ ಗಿಡ ನೆಟ್ಟು ಪರಿಸರದ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಸಾಲುಮರದ ತಿಮ್ಮಕ್ಕ ಅವರು ‘ಉದಯವಾಣಿ ಸುದಿನ’ ಸಂದರ್ಶನದಲ್ಲಿ ನವೀನ್‌ ಭಟ್‌ ಇಳಂತಿಲ ಜತೆ ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ.

ನಿಮ್ಮ ಪ್ರಕಾರ ಯುವ ಪೀಳಿಗೆಯಲ್ಲಿ ಪರಿಸರ ಕಾಳಜಿ ಇದೆಯೇ?
ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿಯೂ ಪರಿಸರದ ಬಗ್ಗೆ ಕಾಳಜಿ ಮೂಡುತ್ತಿದೆ. ಆದರೂ ಶಾಲಾ ಹಂತದಲ್ಲಿಯೇ ಶಿಕ್ಷಕರು, ಪರಿಸರ ಹೋರಾಟಗಾರರು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಮಾರ್ಗದರ್ಶನ ನೀಡಬೇಕು. ಯುವ ಜನತೆ ಕೂಡ ಸಾಮಾಜಿಕ ಜಾಲ ತಾಣದಿಂದ ಹೊರ ಜಗತ್ತಿನ ಕಡೆಗೆ ಬರಬೇಕಾಗಿದೆ.

ಈಗಿನ ಪರಿಸರವಾದಿಗಳ ಬಗ್ಗೆ ನಿಮ್ಮ ಅಭಿಪ್ರಾಯವೇನು?
ಈಗಿನ ಕೆಲವು ಪರಿಸರ ಹೋರಾಟಗಾರರನ್ನು ನೋಡಿದರೆ ನಿಜಕ್ಕೂ ಮನಸ್ಸಿಗೆ ನೋವಾಗುತ್ತದೆ. ಒಂದೆಡೆ ಪರಿಸರ ಹಾಳಾಗುತ್ತಿದೆ. ಪರಿಸರವಾದಿಗಳೆಂದು ಕರೆಸಿಕೊಳ್ಳುವವರ ಪೈಕಿ ಹೆಚ್ಚಿನವರು ಕೇವಲ ಪ್ರಚಾರ, ಪ್ರಶಸ್ತಿಗೋಸ್ಕರ ಕೆಲಸ ಮಾಡುವವರಾಗಿದ್ದಾರೆ. ನಾನು ಅಂತಹವರನ್ನು ಇಷ್ಟಪಡುವುದಿಲ್ಲ. ಪರಿಸರ ಸೇವೆಯನ್ನು ತನ್ನ ತಾಯಿ ಸೇವೆ ಎಂದು ಎಲ್ಲರೂ ನಿಸ್ವಾರ್ಥ ಮನೋಭಾವದಿಂದ ಕೆಲಸ ಮಾಡಬೇಕು.

ಇತ್ತೀಚಿನ ದಿನಗಳಲ್ಲಿ ದೇಸಿ ಗಿಡ ಬಿಟ್ಟು, ವಿದೇಶಿ ಗಿಡಗಳನ್ನು ಬೆಳೆಸಲು ಆಸಕ್ತಿ ವಹಿಸುತ್ತಿದ್ದಾರಲ್ಲ ?
ಹೌದು; ನನ್ನ ದೃಷ್ಟಿಯಲ್ಲಿ ಇದು ತಪ್ಪು. ವಿದೇಶಿ ಮರ ಗಳಿಂದ ಅಪಾಯವೇ ಹೆಚ್ಚು. ಸಣ್ಣ ಗಾಳಿ-ಮಳೆ ಬಂದರೆ ಸಾಕು ಅವುಗಳು ಬುಡಮೇಲಾಗಿ ಸಾರ್ವಜನಿಕರಿಗೆ ಅಪಾಯ ಉಂಟುಮಾಡುತ್ತವೆ. ಆದರೆ ನಮ್ಮ ದೇಶೀಯ ತಳಿ ಗಿಡ-ಮರಗಳು ಹೆಚ್ಚು ಬಲಿಷ್ಠ ವಾಗಿದ್ದು, ಹೆಚ್ಚಿನ ಬಾಳ್ವಿಕೆ ಬರುವಂಥದ್ದು. ಇನ್ನು ವಿದೇಶಿ ಮರ ಬೇಗ ಬೆಳೆಯುತ್ತದೆ ನಿಜ; ಆದರೆ, ಇವುಗಳನ್ನು ದನ, ಮೇಕೆ, ಕುರಿ ತಿನ್ನುವುದಿಲ್ಲ ಎಂಬ ಕಾರಣಕ್ಕೆ ಇಂಥಹ ಹೊರ ದೇಶದ ಗಿಡ-ಮರ ಬೆಳೆಸುವುದಕ್ಕೆ ಉತ್ತೇಜಿಸಲಾಗುತ್ತಿದೆ. ಪರಿಸರ ಅಥವಾ ಹಸಿರೀಕರಣದ ದೃಷ್ಟಿಯಿಂದ ಇದು ಒಳ್ಳೆಯದಲ್ಲ.

ಮುಂಗಾರು ಆರಂಭವಾಗಿದ್ದು, ನಿಮ್ಮ ಪ್ರಕಾರ ಈ ಸಮಯದಲ್ಲಿ ಯಾವ ರೀತಿಯ ಗಿಡ ನೆಟ್ಟರೆ ಸೂಕ್ತ? 
ಹಲಸು, ಮಾವು ಬೇವು ಹೊಂಗೆ, ಆಲದ ಮರ ಸೇರಿದಂತೆ ಆಮ್ಲಜನಕವನ್ನು ಹೆಚ್ಚು ನೀಡುವಂತಹ ಗಿಡಗಳಿಗೆ ಪ್ರಾಶಸ್ತ್ಯ ನೀಡಬೇಕು.

ನೀವು ಬೆಳೆಸಿದ ಮರ ಈಗ ದೊಡ್ಡದಾಗಿದೆ. ಅನೇಕ ಮಂದಿಗೆ ನೆರಳು ನೀಡುತ್ತಿದೆ ಇದನ್ನು ಕಂಡಾಗ ಏನೆನಿಸುತ್ತಿದೆ?
ನಿಜಕ್ಕೂ ಖುಷಿಯಾಗುತ್ತದೆ. ಅಂದಿನ ಕಾಲದಲ್ಲಿ ಮರಕ್ಕೆ ನೀರು ಹಾಯಿಸಲು ಸುಮಾರು ನಾಲ್ಕು ಕಿ.ಮೀ. ಕ್ರಮಿಸಿ ನೀರು ತರುತ್ತಿದ್ದೆವು. ಗಿಡ ನೆಟ್ಟರೆ ಎಂದಿಗೂ ನಷ್ಟವಾಗುವುದಿಲ್ಲ. ಮನುಷ್ಯರಿಗೆ ಪಕ್ಷಿಗಳಿಗೆ ನೆರವಾಗುತ್ತದೆ.

ನಿಮ್ಮ ಬದುಕಿನ ಮುಂದಿನ ಆಸೆ ಏನು?
ಹುಲಿಕಲ್‌ನಲ್ಲಿ ಹೆರಿಗೆ ಆಸ್ಪತ್ರೆಯನ್ನು ನಿರ್ಮಿಸುವುದು ಮತ್ತು ನನ್ನ ಮಗ ಉಮೇಶನಿಗೆ ಮದುವೆ ಮಾಡಿಸುವುದು ಸದ್ಯ ನನ್ನ ಜೀವನದಲ್ಲಿ ಇಟ್ಟುಕೊಂಡಿರುವ ದೊಡ್ಡ ಎರಡು ಆಸೆಗಳು.

ಪರಿಸರ ಸಂರಕ್ಷಣೆಯ ಎಲ್ಲ ಯೋಜನೆಗಳು ಸಮರ್ಪಕವಾಗಿ ಜಾರಿಯಾಗುವಂತೆ ಜಿಲ್ಲಾಡಳಿತ ಅಥವಾ ಸ್ಥಳೀಯಾಡಳಿದವರು ನೋಡಿಕೊಳ್ಳಬೇಕು. ಗಿಡ ಬೆಳೆಸಿದರೆ ಸಾಲದು; ಪೋಷಣೆಯತ್ತಲೂ ಗಮನ ನೀಡಬೇಕು. ಪ್ರತಿ ಮನೆ ಮನೆಗೂ ಉಚಿತವಾಗಿ ದೇಶೀಯ ಗಿಡ, ಹಣ್ಣಿನ ಗಿಡ ಕೊಡಬೇಕು. ಜತೆಗೆ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಬೇಕು.
 - ಸಾಲು ಮರದ ತಿಮ್ಮಕ್ಕ

ಟಾಪ್ ನ್ಯೂಸ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

2-sirsi

Sirsi: ತಂಜಾವೂರಿನಲ್ಲಿ ನಡೆಯುವ ಭಾರತದ ರಾಜವಂಶಸ್ಥರ ಬೈಟಕ್ ಗೆ ಸೋಂದಾ

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.