ಕಾಪು ಪೇಟೆ: ಮತ್ತೆ ಮುಂದುವರಿದ ಚರಂಡಿ ತೆರೆಯುವ ಕಾಮಗಾರಿ


Team Udayavani, Jul 5, 2018, 6:35 AM IST

0407kpe6.jpg

ಕಾಪು: ಕಾಪು ಪೇಟೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಮುಚ್ಚಿ ಹೋಗಿದ್ದ ಮಳೆ ನೀರು ಹರಿಯುವ ಚರಂಡಿಯನ್ನು ತೆರೆದು ಕೊಡುವ ಮೂಲಕ ಅಸಮರ್ಪಕ ಚರಂಡಿ ವ್ಯವಸ್ಥೆಗೆ ಮುಕ್ತಿ ಕೊಡುವ ಪ್ರಯತ್ನ ಮತ್ತೆ ಮುಂದುವರಿದಿದೆ.

ಕಳೆದ ಮೇ 30 ರಂದು ಸುರಿದ ಮಹಾಮಳೆಯ ಕಾರಣ ಉಂಟಾಗಿದ್ದ ಕೃತಕ ನೆರೆ ಭೀತಿ ಮತ್ತು ಅದರಿಂದಾದ ತೊಂದರೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಪುರಸಭೆ ಕಾಪು ಪೇಟೆಯುದ್ದಕ್ಕೂ ಚರಂಡಿ ಹೂಳೆತ್ತುವಿಕೆ ಕಾಮಗಾರಿಯನ್ನು ನಡೆಸಿತ್ತು. ಆ ಸಂದರ್ಭ ಕೆಲವೊಂದು ಕಡೆಗಳಲ್ಲಿ ಖಾಸಗಿಯವರಿಂದ ಆಕ್ಷೇಪವೂ ವ್ಯಕ್ತವಾಗಿತ್ತು.

ಆದರೂ ಕೂಡಾ ಪುರಸಭೆ ದಿಟ್ಟತೆ ಯಿಂದ ನಾಲ್ಕು ಹಂತಗಳಲ್ಲಿ ಚರಂಡಿ ಹೂಳೆತ್ತುವಿಕೆ ಕಾಮಗಾರಿಯನ್ನು ನಡೆಸಿದ್ದು, ಇದೀಗ ಐದನೇ ಹಂತದ ಕಾಮಗಾರಿ ಭರದಿಂದ ಸಾಗುತ್ತಿದೆ. ಕಾರ್ಮಿಕರನ್ನು ಬಳಸುವಲ್ಲಿ ಕಾರ್ಮಿಕರು ಮತ್ತು ಜೆಸಿಬಿ ಬಳಕೆ ಮಾಡಬೇಕಾದಲ್ಲಿ ಜೆಸಿಬಿ ಮೂಲಕ ಪೇಟೆಯುದ್ದಕ್ಕೂ ಚರಂಡಿ ಬಿಡಿ ಕೊಡಲಾಗುತ್ತಿದೆ. ಚರಂಡಿ ಹೂಳೆತ್ತುವಿಕೆ ಸಂದರ್ಭ ಅಂಗಡಿ ಮುಂಗಟ್ಟುಗಳ ಬಳಿ ಮಾಡಲಾಗಿದ್ದ ಒತ್ತುವರಿಯನ್ನೂ ಪುರಸಭೆ ತೆರವುಗೊಳಿಸಿದೆ.

ಮಳೆ ನೀರು ಹರಿಯುವ  ಚರಂಡಿಯಲ್ಲಿ ಡ್ರೈನೇಜ್‌ ನೀರು ?
ಕಾಪು ಪೇಟೆಯಲ್ಲಿ 16 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಚರಂಡಿ ಬಳಿಕ ಹಂತ ಹಂತವಾಗಿ ಮಣ್ಣು ತುಂಬಿ ಮುಚ್ಚಿ ಹೋಗಿದ್ದು, ಹೊಟೇಲ್‌, ವಸತಿ ಸಂಕೀರ್ಣ ಮತ್ತು ವಾಣಿಜ್ಯ ಸಂಕೀರ್ಣಗಳ ಡ್ರೈನೇಜ್‌ ನೀರು ಮತ್ತು ತ್ಯಾಜ್ಯವನ್ನು ಹರಿಯ ಬಿಟ್ಟಿರುವ ವಿಚಾರವೂ ಚರಂಡಿ ತೆರೆಯುವ ಸಂದರ್ಭ ಬೆಳಕಿಗೆ ಬಂದಿದೆ.

ಲೈಸೆನ್ಸ್‌ ರದ್ಧು ಪಡಿಸುವ ಎಚ್ಚರಿಕೆ
ಹಲವು ಕಡೆಗಳಲ್ಲಿ ಚರಂಡಿ ಹೂಳೆತ್ತುವಿಕೆ ಸಂದರ್ಭ ಮಳೆ ನೀರು ಹರಿಯುವ ಚರಂಡಿಗೆ ಒಳ ಚರಂಡಿಯ ತ್ಯಾಜ್ಯವನ್ನು ಬಿಡುತ್ತಿರುವುದನ್ನು ಪತ್ತೆ ಹಚ್ಚಲಾಗಿದೆ. ಇಂತಹ ಹತ್ತಾರು ಪ್ರಕರಣಗಳು ಬೆಳಕಿಗೆ ಬಂದಿದ್ದು, ಅಂತಹ ಕಟ್ಟಡಗಳು ಮತ್ತು ಹೊಟೇಲ್‌ಗ‌ಳ ಮಾಲಕರಿಗೆ ನೋಟೀಸ್‌ ನೀಡಿ, ಎಚ್ಚರಿಕೆ ನೀಡಲಾಗಿದೆ. ಇನ್ನೂ ಕೂಡಾ ಅದೇ ರೀತಿ ಮುಂದುವರಿದರೆ ಪುರಸಭಾ ಅಧಿನಿಯಮದಂತೆ ಉದ್ಧಿಮೆ ಪರವಾನಿಗೆ ಮತ್ತು ಕಟ್ಟಡ ಲೈಸೆನ್ಸ್‌ ರದ್ದುಪಡಿಸಲು ಅವಕಾಶವಿದೆ ಎಂದು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ತಿಳಿಸಿದ್ದಾರೆ.

ಕಾಪು ಪೇಟೆ – ಹೊಸ ಮಾರಿಗುಡಿ 
ರಸ್ತೆಯಿಂದ ರಾಷ್ಟಿÅàಯ ಹೆದ್ದಾರಿಯವರೆಗೆ ತೆರೆದಿರುವ ಚರಂಡಿ ತಿಂಗಳಾದರೂ ಇನ್ನೂ ಕೂಡಾ ಹಾಗೆಯೇ ಉಳಿದಿದೆ. ಇದ ರಿಂದಾಗಿ ಸಾರ್ವಜನಿಕರಿಗೆ ತೀವ್ರ ತೊಂದರೆಯುಂಟಾಗಿದ್ದು, ವಾಹನ ಸಂಚಾರಕ್ಕೂ ಪದೇ ಪದೇ ಅಡೆತಡೆ ಉಂಟಾಗುತ್ತಿದೆ. ಇಲ್ಲಿನ ಸಮಸ್ಯೆಯನ್ನು ಕೂಡಾ ಶೀಘ್ರದಲ್ಲಿ ಪರಿಹರಿಸುವಂತೆ ಸ್ಥಳೀಯರು ಪುರಸಭೆಯನ್ನು  ಆಗ್ರಹಿಸಿದ್ದಾರೆ.

20 ಲ. ರೂ.ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಕೆ 
ಕಾಪು ಪೇಟೆಯಲ್ಲಿ ಚರಂಡಿಯ ಕೊರತೆಯಿಂದಾಗಿ ಉಂಟಾಗಿದ್ದ ತೊಂದರೆ ಸರಿಪಡಿಸುವ ನಿಟ್ಟಿನಲ್ಲಿ ಹಿಂದಿನ ಮುಖ್ಯಾಧಿಕಾರಿ ಶೀನ ನಾಯ್ಕ ಅವರು ಆರಂಭಿಸಿದ್ದ ಕಾಮಗಾರಿಯನ್ನು ನಾವು ಮುಂದುವರಿದ್ದೇವೆ. ನಾಗರಿಕರಿಗೆ ತೊಂದರೆಯಾಗದ ರೀತಿಯಲ್ಲಿ ಮತ್ತು ಗುತ್ತಿಗೆ ಆಧಾರದಲ್ಲಿ ಚರಂಡಿ ಬಿಡಿಸಲಾಗುತ್ತಿದೆ. ಮಳೆ ಹಾನಿ ಮತ್ತು  ಪ್ರಕೃತಿ ವಿಕೋಪ ನಿಧಿಯಡಿಯಲ್ಲಿ 20 ಲಕ್ಷ ರೂ. ಅನುದಾನ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿಗಳಿಂದ ಪೂರಕ ಸ್ಪಂದನೆ ದೊರಕಿದೆ . 
– ರಾಯಪ್ಪ ಪುರಸಭೆ ಮುಖ್ಯಾಧಿಕಾರಿ

ಟಾಪ್ ನ್ಯೂಸ್

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.