ನಾಳೆ ಉಪಸಭಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ
Team Udayavani, Jul 5, 2018, 7:05 AM IST
ಬೆಂಗಳೂರು: ರಾಜ್ಯ ವಿಧಾನಸಭಾ ಉಪಸಭಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಿಗದಿಯಾಗಿದೆ. ಉಪಾಧ್ಯಕ್ಷ ಸ್ಥಾನದ ಚುನಾವಣೆ ಕುರಿತಂತೆ ಅಧ್ಯಕ್ಷ ಕೆ.ಆರ್. ರಮೇಶ್ಕುಮಾರ್ ನಿರ್ದೇಶನದ ಮೇಲೆ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಬುಧವಾರ ಪ್ರಕಟಣೆ ಹೊರಡಿಸಿದ್ದಾರೆ. ಶುಕ್ರವಾರ ಉಪ ಸಭಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಯಾವುದೇ ಸದಸ್ಯರು ಇನ್ನೊಬ್ಬ ಸದಸ್ಯರನ್ನು ಉಪಸಭಾಧ್ಯಕ್ಷರನ್ನಾಗಿ ಆರಿಸಬೇಕೆಂಬ ಒಂದು ಪ್ರಸ್ತಾಪದ ಸೂಚನೆಯನ್ನು ಲಿಖೀತ ರೂಪದಲ್ಲಿ ಕೊಡಬೇಕು. ಈ ಸೂಚನಾ ಪತ್ರಕ್ಕೆ ಮೂರನೇ ಸದಸ್ಯರೊಬ್ಬರು ಅನುಮೋದನೆ ನೀಡಿರಬೇಕು ಮತ್ತು ಉಪ ಸಭಾಧ್ಯಕ್ಷ ಸ್ಥಾನಕ್ಕೆ ಹೆಸರು
ಸೂಚಿಸಲ್ಪಟ್ಟವರು ತಾವು ಆ ಸ್ಥಾನದಲ್ಲಿ ಸೇವೆ ಸಲ್ಲಿಸಲು ಇಷ್ಟ ಉಳ್ಳವನಾಗಿದ್ದೇನೆ ಎಂದು ತಿಳಿಸುವ
ಹೇಳಿಕೆಯನ್ನೂ ಲಗತ್ತಿಸಬೇಕು.
ಈ ಮಾಹಿತಿಯುಳ್ಳ ಸೂಚನಾ ಪತ್ರವನ್ನು ಗುರುವಾರ ಮಧ್ಯಾಹ್ನ 12 ಗಂಟೆಯೊಳಗೆ ಕಾರ್ಯದರ್ಶಿಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು