ಹಕ್ಕುಪತ್ರ ಹೊಂದಿದವರಿಗೆೆ ಇಲಾಖೆ ಕಿರುಕುಳ


Team Udayavani, Jul 5, 2018, 2:05 AM IST

grama-sabhe-4-7.jpg

ಪುಂಜಾಲಕಟ್ಟೆ: ಗ್ರಾ.ಪಂ. ವ್ಯಾಪ್ತಿಯಲ್ಲಿ  ಸುಮಾರು 340 ಬಡಕುಟುಂಬಗಳು 5 ಸೆಂಟ್ಸ್‌  ಸ್ಥಳದಲ್ಲಿ ಕಳೆದ 30 ವರ್ಷಗಳಿಂದ ವಾಸ್ತವ್ಯವಿದ್ದು, ಹಕ್ಕುಪತ್ರ ಹೊಂದಿದ್ದರೂ ಅರಣ್ಯ ಇಲಾಖೆಯ ಸ್ಥಳವೆಂದು ಅಧಿಕಾರಿಗಳು ಕಿರುಕುಳ ನೀಡುವ ಬಗ್ಗೆ ಗ್ರಾಮಸ್ಥರು ಬಡಗಕಜೆಕಾರು ಗ್ರಾಮಸಭೆಯಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಪಾಂಡವರಕಲ್ಲುವಿನಲ್ಲಿರುವ ಬಡಗಕಜೆಕಾರು ಸಮುದಾಯ ಭವನದಲ್ಲಿ ಬುಧವಾರ ಜರಗಿದ ಬಂಟ್ವಾಳ ತಾ| ಬಡಗಕಜೆ ಕಾರು ಗ್ರಾ.ಪಂ.ನ 2018- 19ನೇ ಪ್ರಥಮ ಹಂತದ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಬೇಡಿಕೆಗಳನ್ನು ಮುಂದಿರಿಸಿದರು. ಗ್ರಾಮಸಭೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಗೈರು ಹಾಜರಾಗಿದ್ದು, ತಮ್ಮ ಸಮಸ್ಯೆ ಬಗ್ಗೆ ಸೂಕ್ತ ಉತ್ತರ ದೊರಕದೆ ಗ್ರಾಮಸ್ಥರು ಆಕ್ರೋಶ ವ್ಯಕಪಡಿಸಿದರು. ಈ ಬಗ್ಗೆ ಇಲಾಖಾಧಿಕಾರಿಗಳಿಗೆ ಮಾಹಿತಿ ನೀಡಲು ನಿರ್ಣಯಿಸಲಾಯಿತು. ಗ್ರಾ.ಪಂ. ಅಧ್ಯಕ್ಷ ಬಿ. ವಜ್ರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಕಡ್ಡಾಯ ಶಿಕ್ಷಣ
ನೋಡಲ್‌ ಅಧಿಕಾರಿಯಾಗಿದ್ದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್‌ ಎನ್‌.  ಮಾತನಾಡಿ, ಸರಕಾರಗಳು ಕಡ್ಡಾಯ ಶಿಕ್ಷಣಕ್ಕಾಗಿ ಹಲವಾರು ಉತ್ತಮ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ಸರಕಾರಿ ಶಾಲೆಗಳನ್ನು ಸಮುದಾಯದ ಸಹಭಾಗಿತ್ವದಲ್ಲಿ ಉತ್ತಮಗೊಳಿಸಿದಲ್ಲಿ ಉತ್ತಮ ಶಿಕ್ಷಣ ನೀಡಲು ಸಾಧ್ಯ ಎಂದು ಹೇಳಿದರು.

ಖಾಯಂ ಅಧಿಕಾರಿ ನೇಮಕಕ್ಕೆ ಆಗ್ರಹ
ಗ್ರಾ.ಪಂ.ಗೆ ಖಾಯಂ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಖಾಯಂ ಗ್ರಾಮ ಕರಣಿಕರ ನೇಮಕಾತಿ ಆಗಬೇಕು, ಪ್ರಸ್ತುತ ಪಂ.ಅ. ಅಧಿಕಾರಿ ಬಡಗಕಜೆಕಾರು ಗ್ರಾ.ಪಂ. ಸಹಿತ ಬೇರೆ ಕಡೆ ಕರ್ತವ್ಯ ನಿರ್ವಹಿಸುತ್ತಿದ್ದು, ಗ್ರಾ.ಪಂ.ನ ಅಭಿವೃದ್ಧಿ ನಿಟ್ಟಿನಲ್ಲಿ ಖಾಯಂ ಪಂ.ಅ. ಅಧಿ ಕಾರಿ ನೇಮಕ ಅಗತ್ಯ ಎಂದು ಗ್ರಾಮಸ್ಥರು ಆಗ್ರಹಿಸಿದರು.

ಆರ್‌.ಟಿ.ಇ. ದಾಖಲಾತಿಗೂ ಶುಲ್ಕ ವಸೂಲಿ
ಬಡ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರಕಾರ ಆರ್‌. ಟಿ.ಇ. ಯೋಜನೆ ಜಾರಿಗೊಳಿಸಿದ್ದು, ಆ ಪ್ರಕಾರ ಖಾಸಗಿ ಶಾಲೆಗಳಿಗೆ ದಾಖಲಾದ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ ಮಾಡಿರುವ ಬಗ್ಗೆ ಹೆತ್ತವರು  ಶಿಕ್ಷಣಾಧಿಕಾರಿ ಅವರಲ್ಲಿ ದೂರಿದರು. ಈ ಬಗ್ಗೆ ಶಾಲೆ, ಶುಲ್ಕದ ಕುರಿತು ಲಿಖಿತವಾಗಿ ಮಾಹಿತಿ ನೀಡಿದಲ್ಲಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣಾಧಿಕಾರಿ ತಿಳಿಸಿದರು.

ಬೀದಿ ದೀಪ ಸಮಸ್ಯೆ
ಗ್ರಾ.ಪಂ. ವ್ಯಾಪ್ತಿಯಲ್ಲಿ ಅಳವಡಿಸಿದ ಬೀದಿ ದೀಪಗಳು ಕೆಲವೇ ದಿನಗಳಲ್ಲಿ ಕೆಟ್ಟುಹೋಗುತ್ತಿದ್ದು, ಜನರ ತೆರಿಗೆ ಹಣ ಪೋಲಾಗುತ್ತಿದೆ ಎಂದು ಗಿರೀಶ್‌ ಪಾಂಡವರಕಲ್ಲು ಅವರು ದೂರಿದರು. ವಿದ್ಯುತ್‌ ಬಿಲ್‌ ದುಪ್ಪಟ್ಟು ಬಂದಿರುವ ಬಗ್ಗೆ ಮೆಸ್ಕಾಂ ಅಧಿಕಾರಿಗಳ ಗಮನ ಸೆಳೆಯಲಾಯಿತು. ಮಳೆಗಾಲದಲ್ಲಿ ಮರಗಳು ವಿದ್ಯುತ್‌ ತಂತಿಯ ಮೇಲೆ ಬಿದ್ದು ಹಾನಿಯಾಗುವುದರಿಂದ ಅವುಗಳನ್ನು ಮೊದಲೇ ತೆರವುಗೊಳಿಸಬೇಕು ಎಂದು ಪ್ರಕಾಶ್‌ ಕರ್ಲ ಸೂಚಿಸಿದರು. ಈ ಬಗ್ಗೆ ಪರಿಶೀಲಿಸುವುದಾಗಿ ಮೆಸ್ಕಾಂ ಅಧಿಕಾರಿ ನಿತಿನ್‌ ತಿಳಿಸಿದರು.

ಕೃಷಿ ಇಲಾಖೆ ಸಹಾಯಕ ಕೃಷಿ ಅಧಿಕಾರಿ ನಾರಾಯಣ ನಾಯ್ಕ, ಕಂದಾಯ ಇಲಾಖೆಯ ಬಡಗಕಜೆಕಾರು ಗ್ರಾಮಲೆಕ್ಕಿಗ ರಾಜು, ಪುಂಜಾಲಕಟ್ಟೆ ಪ್ರಾ. ಆರೋಗ್ಯ ಕೇಂದ್ರದ ಅನ್ವರ್‌ ಹುಸೇನ್‌, ಕಜೆಕಾರು ಸಿ.ಎ. ಬ್ಯಾಂಕ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸರಸ್ವತಿ, ಶಿಕ್ಷಣ ಇಲಾಖೆ ವತಿಯಿಂದ ಪಾಂಡವರಕಲ್ಲು ಶಾಲಾ ಮುಖ್ಯ ಶಿಕ್ಷಕಿ ನವೀನಾ ಕುಮಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿ ಮೊದಲಾದ ಇಲಾಖಾಧಿಕಾರಿಗಳು ಮಾಹಿತಿ ನೀಡಿದರು. ಗ್ರಾ.ಪಂ. ಉಪಾಧ್ಯಕ್ಷೆ ಮೋಹಿನಿ, ಸದಸ್ಯರಾದ ಕೆ. ಜಯ ಬಂಗೇರ, ವಿನೋದಾ, ಲಕ್ಷ್ಮೀ, ಶೋಭಾ, ಸುರೇಖಾ, ವಿದ್ಯಾ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಬಡಗಕಜೆಕಾರು ಗ್ರಾ.ಪಂ.ನ ಪ್ರಭಾರ ಪಂ.ಅ. ಅಧಿಕಾರಿ ಶ್ರೀಧರ ಸ್ವಾಗತಿಸಿ, ವರದಿ ಮಂಡಿಸಿದರು. ಗ್ರಾ.ಪಂ. ಸಿಬಂದಿ ಮೋಹನ ವಂದಿಸಿದರು.

ರಸ್ತೆ ಬದಿ ತ್ಯಾಜ್ಯ
ಪಾಂಡವರಕಲ್ಲು-ಕಕ್ಯಪದವು ರಸ್ತೆ ಬದಿ ರಾತ್ರಿ ಹೊತ್ತು ವಾಹನಗಳಲ್ಲಿ ತ್ಯಾಜ್ಯಗಳನ್ನು ಎಸೆಯುತ್ತಿದ್ದು, ಇವರ ವಿರುದ್ಧ ಪಂ. ಕ್ರಮ ಕೈಗೊಳ್ಳಬೇಕೆಂದು ಲಕ್ಷ್ಮಣ ಮೂಲ್ಯ ದೂರಿದರು. ಕೋಳಿ ಮಾರಾಟ ಅಂಗಡಿಯವರು ಕೋಳಿ ತ್ಯಾಜ್ಯ ಎಸೆಯದಂತೆ ಕ್ರಮ ಕೈಗೊಳ್ಳಬೇಕೆಂದು ಕೆ. ಡೀಕಯ್ಯ ಬಂಗೇರ ಆಗ್ರಹಿಸಿದರು. ನೀರಾರಿ -ಬೆರ್ಕಳ- ಪುಂಜಾಲಕಟ್ಟೆ ರಸ್ತೆ ಹದಗೆಟ್ಟಿದ್ದು, ದುರಸ್ತಿಪಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದರು. ಮಾಡಪಲ್ಕೆಯಿಂದ ಪುಂಜಾಲಕಟ್ಟೆಗೆ ಸರಕಾರಿ ಬಸ್‌ ಬೇಡಿಕೆ, ಗ್ರಾ.ಪಂ.ನಲ್ಲಿ ಆರ್‌.ಟಿ.ಸಿ. ಮತ್ತು ಆಧಾರ್‌ ಲಭ್ಯತೆ, 94ಸಿ ಅರ್ಜಿಗಳ ವಿಲೇವಾರಿ ಮೊದಲಾದ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಟಾಪ್ ನ್ಯೂಸ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.