ದೇಶಕ್ಕೆಲ್ಲ ನಮ್ಮ ಮೆಟ್ರೋನೇ ಮೇಷ್ಟ್ರು


Team Udayavani, Jul 5, 2018, 11:25 AM IST

blore-1.jpg

ಬೆಂಗಳೂರು: ದೇಶದ ವಿವಿಧ ಮಹಾನಗರಗಳಲ್ಲಿ ಚಾಲ್ತಿಯಲ್ಲಿರುವ ಮೆಟ್ರೋ ಯೋಜನೆಗಳಿಗೆ ಅಗತ್ಯ
ಸಿಬ್ಬಂದಿಯನ್ನು ಸಜ್ಜುಗೊಳಿಸುವ ಕಾರ್ಖಾನೆ ಈಗ “ನಮ್ಮ ಮೆಟ್ರೋ’! ಹೌದು, ನಮ್ಮ ಮೆಟ್ರೋ ಮೊದಲ ಹಂತ ಪೂರ್ಣಗೊಂಡು ಈಗಷ್ಟೇ ಒಂದು ವರ್ಷ ಆಗಿದೆ. ಆದರೆ, ಈ ಅಲ್ಪಾವಧಿಯಲ್ಲಿ ದೇಶದ ಪ್ರಮುಖ ಮೆಟ್ರೋ ಯೋಜನೆಗಳ ಸಿಬ್ಬಂದಿಗೆ ಬೆಂಗಳೂರು ಮೆಟ್ರೋ ರೈಲು ನಿಗಮದ (ಬಿಎಂಆರ್‌ಸಿಎಲ್‌) ತರಬೇತಿ ಸಂಸ್ಥೆಯೇ ತರಬೇತಿ ನೀಡುತ್ತಿದ್ದು, ಈ ಮೂಲಕ ದೇಶದಲ್ಲಿ ನಡೆಯುತ್ತಿರುವ ಬಹುತೇಕ ಎಲ್ಲ ಮೆಟ್ರೋ ಯೋಜನೆಗಳ ಸಿಬ್ಬಂದಿಗೆ ನಮ್ಮ ಮೆಟ್ರೋನೇ ಮೇಷ್ಟ್ರು ಆಗಿದೆ.

ಇದಕ್ಕೆ ಪ್ರಮುಖ ಕಾರಣ, ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ತರಬೇತಿ ಹಾಗೂ “ಥರ್ಡ್‌ ರೈಲ್‌’ (ಹಳಿ ಪಕ್ಕದಿಂದಲೇ ವಿದ್ಯುತ್‌ ಸಂಪರ್ಕ) ವ್ಯವಸ್ಥೆ ಹೊಂದಿರುವುದು ಎನ್ನಲಾಗಿದೆ. ಅಹಮದಾಬಾದ್‌ನ ಮೆಗಾ ಮೆಟ್ರೋ, ಕೊಲ್ಕತ್ತ ಸೇರಿದಂತೆ ದಕ್ಷಿಣ ಭಾರತದಲ್ಲಿ ನಡೆಯುತ್ತಿರುವ ಹೈದರಾಬಾದ್‌, ಕೊಚ್ಚಿ, ಚೆನ್ನೈ ಮೆಟ್ರೋ ಯೋಜನೆಗಳ ಸಿಬ್ಬಂದಿಗೆ ಬೈಯಪ್ಪನಹಳ್ಳಿಯಲ್ಲಿರುವ “ಮೆಟ್ರೋ ಸ್ಕೂಲ್‌’ನಲ್ಲಿ ಪಾಠ
ಹೇಳಿಕೊಡಲಾಗುತ್ತಿದೆ. ದೇಶದಲ್ಲಿ ಮೊದಲ ಬಾರಿಗೆ ಮೆಟ್ರೋ ರೈಲು ಬಂದಿದ್ದು ದೇಶದ ರಾಜಧಾನಿ ದೆಹಲಿಯಲ್ಲಿ. ಆದರೆ, ಅಲ್ಲಿ “ಓವರ್‌ ಹೆಡ್‌’ ಅಂದರೆ ರೈಲಿನ ಮೇಲಿನ ತುದಿಯಿಂದ ವಿದ್ಯುತ್‌ ಸಂಪರ್ಕ
ಕಲ್ಪಿಸಲಾಗಿದೆ. ಥರ್ಡ್‌ ರೈಲ್‌ ವ್ಯವಸ್ಥೆ ಮೊದಲ ಬಾರಿಗೆ ಅಳವಡಿಕೆಯಾಗಿದ್ದು ಬೆಂಗಳೂರು ಮೆಟ್ರೋ
ಯೋಜನೆಯಲ್ಲಿ. ಈಗ ಚಾಲ್ತಿಯಲ್ಲಿರುವ ಬಯುತೇಕ ಮೆಟ್ರೋ ಯೋಜನೆಗಳು ಈ ಮುಂದುವರಿದ ವ್ಯವಸ್ಥೆಯನ್ನು ಅನುಸರಿಸುತ್ತಿವೆ.

ಇದೇ ಕಾರಣಕ್ಕೆ “ನಮ್ಮ ಮೆಟ್ರೋ’ ಟ್ರೈನಿಂಗ್‌ ಇನ್‌ ಸ್ಟಿಟ್ಯೂಟ್‌ ಎಲ್ಲರಿಗೂ ಅಚ್ಚುಮೆಚ್ಚು ಆಗುತ್ತಿದೆ. ಬೈಯಪ್ಪನಹಳ್ಳಿಯಲ್ಲಿರುವ ತರಬೇತಿ ಸಂಸ್ಥೆಯು ದಕ್ಷಿಣ ಭಾರತದ ಏಕೈಕ ಮೆಟ್ರೋ ಶಾಲೆಯಾಗಿದೆ. 2011ರಲ್ಲಿ ಒಬ್ಬಿಬ್ಬರು ವಿದ್ಯಾರ್ಥಿಗಳಿಂದ ಆರಂಭಗೊಂಡ ಸಂಸ್ಥೆ, ಈಗ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದೆ. ಕಳೆದ ಏಳು ವರ್ಷಗಳಲ್ಲಿ 2,111 ಮಂದಿ ಇಲ್ಲಿ ತರಬೇತಿ ಪಡೆದಿದ್ದು, ಇದರಲ್ಲಿ 570 ಸಿಬ್ಬಂದಿ ಹೊರರಾಜ್ಯಗಳ ಮೆಟ್ರೋ ಯೋಜನೆಯಲ್ಲಿ ಕೆಲಸ ಮಾಡುವವರು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ) ತರಬೇತಿ ಸಂಸ್ಥೆ ಮುಖ್ಯಸ್ಥರು ಮಾಹಿತಿ ನೀಡಿದರು. 

ಏನೇನು ತರಬೇತಿ?: ಐದು ತಿಂಗಳ ತರಬೇತಿಯಲ್ಲಿ ರೋಲಿಂಗ್‌ ಸ್ಟಾಕ್‌, ಸಿಗ್ನಲಿಂಗ್‌, ಟೆಲಿಕಾಂ, ಎಲೆಕ್ಟ್ರಿಕ್‌ ಆಂಡ್‌ ಮೆಂಟೇನೆನ್ಸ್‌, ಪಿ-ವೇ ಬಗ್ಗೆ ತರಬೇತಿ ನೀಡಲಾಗುತ್ತದೆ. ಜತೆಗೆ ಸಿಮ್ಯುಲೇಟರ್‌ಗಳು ಮತ್ತು ಪ್ರಯಾಣಿಕರನ್ನು ಕೊಂಡೊಯ್ಯುವ ರೈಲುಗಳ ಚಾಲನೆಗೂ ಅವಕಾಶ ನೀಡಲಾಗುವುದು ಎಂದು ಅವರು ವಿವರಿಸಿದರು.

ಸಂಸ್ಥೆ ಮೂಲಕ ಬಂದವರಿಗೆ ಮಾತ್ರ ತರಬೇತಿ ನೀಡುತ್ತಿದ್ದು, 8 ಮಂದಿ ಕಾಯಂ ತರಬೇತುದಾರರು ಸೇರಿ 25 ಜನ ತರಬೇತುದಾರರಿದ್ದಾರೆ. ಒಂದೊಂದು ಬ್ಯಾಚ್‌ನಲ್ಲಿ 20-30 ಅಭ್ಯರ್ಥಿಗಳು ಇರುತ್ತಾರೆ. ಬೆಳಗ್ಗೆ 9ರಿಂದ ಸಂಜೆ 5ರವರೆಗೆ ತರಗತಿಗಳು ನಡೆಯುತ್ತವೆ. ಸಂಸ್ಥೆಯಲ್ಲಿ “ಮೆಟ್ರೋ ಎಂದರೆ
ಏನು?’ ಎಂಬ ಮೊದಲ ಪಾಠದಿಂದ ಹಿಡಿದು ಎಲ್ಲವನ್ನೂ ಹೇಳಿಕೊಡಲಾಗುವುದು. ತರಬೇತಿ ಪಡೆಯುವವರಿಗೆ ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಶೆಟಲ್‌, ಬ್ಯಾಡ್ಮಿಂಟನ್‌ ಸೇರಿದಂತೆ ವಿವಿಧ ಕ್ರೀಡೆಗಳು, ವಾರಕ್ಕೊಮ್ಮೆ ಪರೀಕ್ಷೆ ಇರುತ್ತದೆ. ಮತ್ತೂಂದೆಡೆ ದೆಹಲಿ ಮೆಟ್ರೋ ತರಬೇತಿ ಸಂಸ್ಥೆ ತುಂಬಿ ತುಳುಕುತ್ತಿದೆ.

ಇದೆಲ್ಲದರ ಹಿನ್ನೆಲೆಯಲ್ಲಿ “ನಮ್ಮ ಮೆಟ್ರೋ’ ತರಬೇತಿ ಸಂಸ್ಥೆಗೆ ಹೆಚ್ಚು ಬೇಡಿಕೆ ಬಂದಿದೆ ಎಂದು ಸಂಸ್ಥೆಯ ಮತ್ತೂಬ್ಬ ಅಧಿಕಾರಿ ಸ್ಪಷ್ಟಪಡಿಸಿದರು. “ನಮ್ಮ ಮೆಟ್ರೋ’ ಸಿಬ್ಬಂದಿಗೆ ಆರಂಭದಲ್ಲಿ ದೆಹಲಿ ಮೆಟ್ರೋ ತರಬೇತಿ ನೀಡಿದ್ದರೂ, ಬೈಯಪ್ಪನಹಳ್ಳಿ ತರಬೇತಿ ಸಂಸ್ಥೆಯಲ್ಲಿ ಮತ್ತೂಂದು ಸುತ್ತಿನ ತರಬೇತಿ ನೀಡಲಾಯಿತು ಎಂದೂ ಅವರು ಹೇಳಿದರು. 

ಅಹಮದಾಬಾದ್‌ಗೆ ಕನ್ಸಲ್ಟಂಟ್‌?
ಅಹಮದಾಬಾದ್‌ ಮೆಟ್ರೋ ಯೋಜನೆಗೆ ಕನ್ಸಲ್ಟಂಟ್‌ (ಸಲಹೆಗಾರ) ಆಗಿ ಕಾರ್ಯನಿರ್ವಹಿಸುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ (ಬಿಎಂಆರ್‌ಸಿಎಲ್‌) ಆಹ್ವಾನ ಬಂದಿದೆ. ಈ ಸಂಬಂಧದ ಚರ್ಚೆ
ಪ್ರಾಥಮಿಕ ಹಂತದಲ್ಲಿದ್ದು, ನಿಗಮವು ಕೂಡ ಬಹುತೇಕ ಒಪ್ಪಿಗೆ ಸೂಚಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಹಾಗೊಂದು ವೇಳೆ ನಿಗಮವು ಕನ್ಸಲ್ಟಂಟ್‌ ಆಗಿ ನೇಮಕಗೊಂಡರೆ, ಅಹಮದಾಬಾದ್‌ ಮೆಟ್ರೋ ಯೋಜನೆಯ ಅಂದಾಜು ವೆಚ್ಚ, ನೀಲನಕ್ಷೆ, ಯೋಜನಾ ವರದಿ ಸೇರಿದಂತೆ
ವಿವಿಧ ಹಂತಗಳಲ್ಲಿ ಸಲಹೆಗಳನ್ನು ನೀಡಲಾಗುವುದು. ಇದು ನಿಗಮದ ಮಟ್ಟಿಗೆ ಹೆಗ್ಗಳಿಕೆ ಸಂಗತಿ ಎಂದು ಯೋಜನಾ ವಿಭಾಗದ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ಶೀಘ್ರದಲ್ಲೇ ಸಂಸ್ಥೆ ಮೇಲ್ದರ್ಜೆಗೆ ಮುಂಬರುವ ದಿನಗಳಲ್ಲಿ ಸಂಸ್ಥೆಯನ್ನು ಮೇಲ್ದರ್ಜೆಗೇರಿಸಲು ಚಿಂತನೆ
ನಡೆದಿದೆ. ಅನಿಮೇಷನ್‌ ಮೂಲಕ ಪಾಠ ಹೇಳಿಕೊಡುವುದು, 7 ಕಿ.ಮೀ.ಗೆ ಸೀಮಿತವಾಗಿರುವ ಸಿಮ್ಯುಲೇಟರ್‌ಗಳ ಸಂಚಾರ ಮಾರ್ಗವನ್ನು 20 ಕಿ.ಮೀಗೆ ವಿಸ್ತರಿಸುವುದು, ಟೆಕ್ನಿಕಲ್‌ ಮ್ಯಾನ್ಯುವಲ್‌ಗ‌ಳ ಬಗ್ಗೆ ತಿಳಿಸಿಕೊಡುವ ಯೋಜನೆ ಇದೆ. ಪ್ರಸ್ತುತ ಸಂಸ್ಥೆಯಲ್ಲಿ 120 ವಿದ್ಯಾರ್ಥಿಗಳ ಸಾಮರ್ಥ್ಯ ಇರುವ ಸಭಾಂಗಣ, 20ರಿಂದ 30 ವಿದ್ಯಾರ್ಥಿಗಳು ಕುಳಿತುಕೊಳ್ಳಬಹುದಾದ ಏಳು ಕೊಠಡಿಗಳು, ಸಿಮ್ಯುಲೇಟರ್‌, ಕಂಪ್ಯೂಟರ್‌ ಆಧಾರಿತ ತರಬೇತಿ ಕೊಠಡಿ, ಎಟಿಎ ಸಿಮ್ಯುಲೇಟರ್‌ಗಳ ವ್ಯವಸ್ಥೆ ಇದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.