ತಪ್ಪುಗಳಿಂದ ಅಂತರವಿರಲಿ…


Team Udayavani, Jul 5, 2018, 5:18 PM IST

miovie.jpg

‌ಕನ್ನಡದಲ್ಲಿ ಹೊಸಬರ ಪ್ರಯೋಗ ಹೆಚ್ಚಾಗುತ್ತಿದೆ. ಹೊಸತನದ ಚಿತ್ರದೊಂದಿಗೆ ನೂರೆಂಟು ಕನಸು ಕಟ್ಟಿಕೊಂಡು ಬರುವ ಯುವ ನಿರ್ದೇಶಕರು, ಇಲ್ಲಿ ಗಟ್ಟಿಯಾಗಿ ನಿಲ್ಲಬೇಕೆಂಬ ಕಾರಣಕ್ಕೆ ಆಕರ್ಷಿಸುವ ಶೀರ್ಷಿಕೆ ಜೊತೆ ಅಚ್ಚರಿ ಕಥೆಯೊಂದಿಗೆ ಬರುತ್ತಿದ್ದಾರೆ. ಈಗ “ನಡುವೆ ಅಂತರವಿರಲಿ’
ಎಂಬ ಹೊಸಬರ ತಂಡ ಕೂಡ ಅದೇ ಸಾಲಿನ ಚಿತ್ರ. ಈ ಚಿತ್ರದ ಮೂಲಕ ರವೀನ್‌ ನಿರ್ದೇಶಕರಾಗುತ್ತಿದ್ದಾರೆ. ಯೋಗರಾಜ್‌ ಭಟ್‌ ಸೇರಿದಂತೆ ಹಲವು ನಿರ್ದೇಶಕರ ಜೊತೆ ಕೆಲಸ ಮಾಡಿದ ಅನುಭವ ರವೀನ್‌ ಅವರಿಗಿದೆ. ಇದು ಪಕ್ಕಾ ಯೂಥ್‌ ಸಿನಿಮಾ.

ಹದಿಹರೆಯದ ಪ್ರೇಮಿಗಳು ತಮಗೆ ಗೊತ್ತಿಲ್ಲದೆಯೇ ಮಾಡಿದ ತಪ್ಪಿನಿಂದ ಆಗುವ ಪರಿಣಾಮಗಳ ಕುರಿತ ಕಥೆ ಇದಾಗಿದ್ದು, ಇಲ್ಲಿ ಒಂದಷ್ಟು ಅರಿವು ಮೂಡಿಸುವ ಪ್ರಯತ್ನಕ್ಕೆ ಕೈ ಹಾಕಿದೆ ಚಿತ್ರತಂಡ. ಚಿತ್ರದ ಕಥೆಯ ಗುಟ್ಟು ರಟ್ಟು ಮಾಡದ ನಿರ್ದೇಶಕರು, ಇಲ್ಲಿ ಹೆಚ್ಚು ಮನಕಲಕುವ ಸನ್ನಿವೇಶಗಳನ್ನಿಟ್ಟಿದ್ದಾರಂತೆ. ಕ್ಲೈಮ್ಯಾಕ್ಸ್‌ ವೇಳೆ ನೋಡುವ ಕಣ್ಣುಗಳು ಖಂಡಿತವಾಗಿಯೂ ಒದ್ದೆಯಾಗಿರುತ್ತವೆ ಎಂಬ ಗ್ಯಾರಂಟಿ ಚಿತ್ರತಂಡದ್ದು. ಈಗಿನ ಯುವ ಸಮಾಜ ಎತ್ತ ಸಾಗುತ್ತಿದೆ ಎಂಬ ಕಥೆಯಲ್ಲಿ ಸಾಕಷ್ಟು ಏರಿಳಿತಗಳಿವೆಯಂತೆ.

ಪ್ರಖ್ಯಾತ್‌ ಈ ಚಿತ್ರದ ನಾಯಕ. ಅವರಿಗೆ ತಕ್ಕಂತಹ ಪಾತ್ರ ಸಿಕ್ಕಿದ್ದು ಅವರಿಗೆ ಖುಷಿ ಕೊಟ್ಟಿದೆ. ಇನ್ನು, ಐಶಾನಿ ಶೆಟ್ಟಿ ಈ ಚಿತ್ರದ ನಾಯಕಿ. ಅಂದಹಾಗೆ, ಚಿತ್ರದ ಆಡಿಯೋ ಸಿಡಿ ಬಿಡುಗಡೆ ಕೂಡ ನಡೆದಿದೆ. ಸಂಸದ ಡಿ.ಕೆ.ಸುರೇಶ್‌ ಅವರು ಆಡಿಯೋ ಸಿಡಿ ಬಿಡುಗಡೆ ಮಾಡಿ ಶುಭಕೋರಿದ್ದೂ ಆಗಿದೆ.

ಮಣಿಕಾಂತ್‌ ಕದ್ರಿ ಈ ಚಿತ್ರದ ಸಂಗೀತ ನಿರ್ದೇಶಕರು. ಈ ಚಿತ್ರದ ಆಡಿಯೋ ಹಕ್ಕನ್ನು ಪಿಆರ್‌ಕೆ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಆಡಿಯೋ ಬಿಡುಗಡೆ ಅಂದಮೇಲೆ ಚಿತ್ರರಂಗದ ಒಂದಷ್ಟು ಮಂದಿ ಸಹಜವಾಗಿಯೇ ಇರುತ್ತಾರೆ. “ನಡುವೆ ಅಂತರವಿರಲಿ’ ಆಡಿಯೋ ಸಿಡಿ ಬಿಡುಗಡೆ ವೇಳೆ ನಿರ್ದೇಶಕ ನರ್ತನ್‌, ಉದಯ್‌ ಮೆಹ್ತಾ, ಕೆ.ಪಿ.ಶ್ರೀಕಾಂತ್‌, ಆನಂದ್‌ ಇತರರು ಇದ್ದರು. ಈ ಚಿತ್ರವನ್ನು ರವೀನ್‌ಗೌಡ ಮತ್ತು ಜೆ.ಕೆ.ನಾಗರಾಜ್‌ ನಿರ್ಮಾಣ ಮಾಡಿದ್ದಾರೆ. ಸದ್ಯದಲ್ಲೇ ಚಿತ್ರ ಅಂತರವನ್ನು ಬೆಸೆಯಲಿದೆ. 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.