ಚಾಮುಂಡಿ ಬೆಟ್ಟಕ್ಕೆ ಏಲಿಯನ್ಸ್‌ …


Team Udayavani, Jul 5, 2018, 5:40 PM IST

mysore-masala-sharmila-ma.jpg

ಕೆಲವು ತಿಂಗಳುಗಳ ಹಿಂದೆ ಸಂಯುಕ್ತಾ ಹೊರನಾಡು, “ನಮ್ಮ ಯುಎಫ್ಓ’ ಎಂಬ ಹೊಸ ಸೈನ್ಸ್‌ ಫಿಕ್ಷನ್‌ ಚಿತ್ರದಲ್ಲಿ ನಟಿಸುತ್ತಿರುವುದಾಗಿ ಹೇಳಿದ್ದರು. ಈ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಪೊಲೀಸ್‌ ಯೂನಿಫಾರ್ಮ್ನಲ್ಲಿ ಕಾಣಿಸಿಕೊಳ್ಳುತ್ತಿರುವುದರ ಜೊತೆಗೆ, ಈ ಚಿತ್ರದಲ್ಲಿ ಚಿತ್ರದಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಏಲಿಯನ್ಸ್‌ ಕಾಣಿಸಿಕೊಳ್ಳುತ್ತವೆ ಎಂದು ಹಿಂಟ್‌ ಕೊಟ್ಟಿದ್ದರು. ಈಗ ಆ ಚಿತ್ರಕ್ಕೆ ಚಾಲನೆ ಸಿಕ್ಕಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಅಷ್ಟೇ ಅಲ್ಲ, ಚಿತ್ರಕ್ಕೆ “ಮೈಸೂರು ಮಸಾಲ’ ಎಂದು ನಾಮಕರಣ ಮಾಡಲಾಗಿದೆ.

ಹೌದು, “ನಮ್ಮ ಯುಎಫ್ಓ’ ಚಿತ್ರಕ್ಕೆ “ಮೈಸೂರು ಮಸಾಲ’ ಎಂಬ ಹೊಸ ಹೆ ಹೆಸರು ಸಿಕ್ಕಿದೆ. ಮುಂಚೆ ಈ ಚಿತ್ರದಲ್ಲಿ ಸಂಯುಕ್ತಾ ಹೊರನಾಡು ಜೊತೆಗೆ ಅನಂತ್‌ ನಾಗ್‌ ಅಭಿನಯಿಸುತ್ತಾರೆ ಎಂದು ಹೇಳಲಾಗಿತ್ತು. ಈಗ ತಾರಾಗಣಕ್ಕೆ ಶರ್ಮಿಳಾ ಮಾಂಡ್ರೆ, ಕಿರಣ್‌ ಶ್ರೀನಿವಾಸ್‌, ಪ್ರಕಾಶ್‌ ಬೆಳವಾಡಿ ಮುಂತಾದವರು ಸೇರಿಕೊಂಡಿದ್ದಾರೆ.

 ಕಳೆದ ವರ್ಷ “ಲೀಡರ್‌’ ಮತ್ತು “ಆಕೆ’ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದ ಶರ್ಮಿಳಾ ಮಾಂಡ್ರೆ, ಆ ನಂತರ ಯಾವೊಂದು ಚಿತ್ರದಲ್ಲೂ ನಟಿಸಿರಲಿಲ್ಲ. ಈಗ “ಮೈಸೂರು ಮಸಾಲ’ ಚಿತ್ರದ ಮೂಲಕ ವಾಪಸ್ಸಾಗುತ್ತಿರುವುದಷ್ಟೇ ಅಲ್ಲ, ಒಂದು ವಿಭಿನ್ನ ಪಾತ್ರದಲ್ಲಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಕಿರಣ್‌ ಶ್ರೀನಿವಾಸ್‌ “ಒಂಥರಾ ಬಣ್ಣಗಳು’ ಎಂಬ ಚಿತ್ರದಲ್ಲಿ ನಟಿಸಿದ್ದು, ಸದ್ಯದಲ್ಲೇ ಆ ಚಿತ್ರ ಬಿಡುಗಡೆಯಾಗಲಿದೆ.

ಅಜಯ್‌ ಸಪೇಶ್‌ಕರ್‌ ಎಂಬುವವರು ಈ ಚಿತ್ರದ ನಿದೇಶಕರು. ಮೂಲತಃ ಟೆಕ್ಕಿಯಾಗಿದ್ದರೂ ಸಿನಿಮಾದ ಆಸಕ್ತಿ ಹೊಂದಿದ್ದ ಅಜಯ್‌, ಹಲವು ಜಾಹೀರಾತು ಹಾಗೂ ಕಿರುಚಿತ್ರಗಳನ್ನು ನಿರ್ಮಿಸಿದ್ದಾರೆ. ಬರೀ ಕನ್ನಡದಲ್ಲಷ್ಟೇ ಅಲ್ಲ ಇಡೀ ಭಾರತದಲ್ಲಿ ಹಲವು ಅತ್ಯುತ್ತಮ ಚಿತ್ರಗಳು ಬರುತ್ತಿತ್ತಾದರೂ ನೈಜ ವಿಜ್ಞಾನ ಆಧಾರಿತ ಸೈ-ಫೈ ಮತ್ತು ಸಾಹಸ ಚಿತ್ರಗಳ ಸಂಖ್ಯೆ ಕಡಿಮೆ ಇದೆ ಎಂದು ಅವರನ್ನು ಗಮನಿಸಿದ್ದರಂತೆ. ಹಾಗಾಗಿ ಯಾರೂ ಪ್ರಯತ್ನಿಸದ ವಿಷಯಗಳ ಮೇಲೆ ಚಿತ್ರ ಮಾಡಬೇಕು ಎಂದು ಅವರು “ಮೈಸೂರು ಮಸಾಲ’ ಕೈಗೆತ್ತಿಕೊಂಡಿದ್ದಾರೆ. “ಮೈಸೂರು ಮಸಾಲ’ ಚಿತ್ರವು ವಿಜ್ಞಾನ ಮತ್ತು ಊಹಾತ್ಮಕ ಅಂಶಗಳ ಮೇಲೆ ಬೆಳಕು ಚೆಲ್ಲಲಿದೆಯಂತೆ. ಈ ಚಿತ್ರವನ್ನು ಎ.ಎಸ್‌.ಎಕ್ಸ್‌ ಫಿಲ್ಮ್ಸ್ ಸಂಸ್ಥೆಯು ನಿರ್ಮಿಸುತ್ತಿದೆ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.