ಆರೋಗ್ಯಕ್ಕೂ-ಅಂದಕ್ಕೂ ಬೀಟ್‌ರೂಟ್‌


Team Udayavani, Jul 6, 2018, 6:00 AM IST

u-15.jpg

ಬೀಟ್‌ರೂಟ್‌ನಲ್ಲಿ ಹೇರಳವಾಗಿರುವ ಕಬ್ಬಿಣದಂಶವು ರಕ್ತಹೀನತೆ ಬಾರದಂತೆ ತಡೆಯುತ್ತದೆ. ಇದನ್ನು ಪ್ರತಿದಿನ ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ. ರಕ್ತಪ್ರಸಾರ ಸುಗಮವಾಗುತ್ತದೆ. ಬೀಟ್‌ರೂಟ್‌ ರಕ್ತವನ್ನು ಶುದ್ಧಿಗೊಳಿಸುವ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್‌ ಒತ್ತಡವನ್ನು ನಿಯಂತ್ರಣದಲ್ಲಿಟ್ಟು ಜೀರ್ಣಕ್ರಿಯೆಯ ವೇಗ ಹೆಚ್ಚಿಸುತ್ತದೆ.

.ಒಂದು ಟೇಬಲ್‌ ಸ್ಪೂನ್‌ ನೆನೆಸಿಟ್ಟ ಅಕ್ಕಿ, ನಾಲ್ಕೈದು ಬೀಟ್‌ರೂಟ್‌ ಚೂರುಗಳನ್ನು ಸೇರಿಸಿ ಚೆನ್ನಾಗಿ ರುಬ್ಬಿಕೊಳ್ಳಿ. ಅದರಲ್ಲಿ ಒಂದು ಚಮಚ ಜೇನುತುಪ್ಪ , ಹಾಲು ಬೆರೆಸಿ ಅದನ್ನು ಮುಖಕ್ಕೆ ಲೇಪಿಸಿಕೊಳ್ಳಿ. ಹಾಗೆ ಐದು ನಿಮಿಷ ಬಿಟ್ಟು ಹಾಲಿನಿಂದ ಮುಖವನ್ನು ನಿಧಾನವಾಗಿ ಮರ್ದನ ಮಾಡಿರಿ. ಈ ರೀತಿ ಹತ್ತು ನಿಮಿಷಗಳ ಕಾಲ ಮಾಡಿ ಉರುಗು ಬೆಚ್ಚಗಿರುವ ನೀರಿನಿಂತ ತೊಳೆದರೆ ಮುಖದ ಚರ್ಮವು ಹೊಳಪನ್ನು ಪಡೆಯುತ್ತದೆ. ಬೀಟ್‌ರೂಟ್‌ನಲ್ಲಿರುವ ಸಿಲಿಕಾನ್‌ ಖನಿಜ ಚರ್ಮ ತಾಜಾವಾಗಿರುವಂತೆ ಮಾಡುತ್ತದೆ. ಕೂದಲು, ಉಗುರು ಬೆಳವಣಿಗೆಯಲ್ಲೂ ಮಹತ್ವದ ಪಾತ್ರ ವಹಿಸುತ್ತದೆ.

.ಬೀಟ್‌ರೂಟ್‌ ರಸವನ್ನು ತಲೆಗೆ ಹಚ್ಚಿ ಒಂದೆರಡು ಗಂಟೆಗಳ ಕಾಲ ಹಾಗೇ ಬಿಟ್ಟರೆ ಸಹಜ ಸಿದ್ಧವಾದ ಡೈ ಹಾಕಿಕೊಂಡಂತೆ ಇರುತ್ತದೆ. ಅದೇ ರೀತಿ ಹೆನ್ನಾ ಕಲಸುವಾಗ ಮೆಹಂದಿ ಪುಡಿಯನ್ನು  ಬೀಟ್‌ರೂಟ್‌ ರಸದಲ್ಲಿ ಕಲಸಿ ಕೇಶಕ್ಕೆ ಲೇಪಿಸಿದರೆ ಉತ್ತಮ ಬಣ್ಣವನ್ನು ಪಡೆಯಬಹುದು.

.ಬೀಟ್‌ರೂಟ್‌ ರಸಕ್ಕೆ ಒಂದು ಚಮಚ ಬಾದಾಮಿ ಎಣ್ಣೆ , ಒಂದು ಹನಿ ಜೇನು ಸೇರಿಸಿ ತುಟಿಗಳಿಗೆ ಲೇಪಿಸಿ. ಈ ರೀತಿ ವಾರದಲ್ಲಿ ಎರಡು ಬಾರಿ ಮಾಡಿದರೆ ಕಪ್ಪಗಿರುವ ತುಟಿಯು ಗುಲಾಬಿ ಬಣ್ಣವನ್ನು ಪಡೆಯುತ್ತದೆ. ಮೃತಜೀವಕೋಶಗಳು ದೂರವಾಗಬೇಕೆಂದರೆ ರುಬ್ಬಿದ ಬೀಟ್‌ರೂಟ್‌ಗೆ ಚಿಟಿಕೆ ಸಕ್ಕರೆ ಸೇರಿಸಿ ಆ ಮಿಶ್ರಣವನ್ನು ತುಟಿಗಳ ಮೇಲೆ ಉಜ್ಜಬೇಕು. ಈ ರೀತಿ ಮಾಡುವುದರಿಂದ ಅಧರಗಳು ಮೃದು ಹಾಗೂ ತಾಜಾತನ ಹೊಂದುತ್ತವೆ.

.ಸದಾ ದಣಿವೆಂದು ಅನ್ನಿಸುತ್ತಿದ್ದರೆ ಬೀಟ್‌ರೂಟ್‌ ರಸವನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಬೇಕು. ಎರಡು ಅಥವಾ ಮೂರು ದಿನಗಳಿಗೊಮ್ಮೆ ಒಂದು ಲೋಟ ಬೀಟ್‌ರೂಟ್‌ ಜ್ಯೂಸ್‌ ಕುಡಿದರೆ ಸಾಕು ಕೆಲವು ದಿನಗಳಲ್ಲಿ ಸಮಸ್ಯೆಯಿಂದ ಹೊರಬರಬಹುದು. ಇದರ ಸೇವನೆಯಿಂದ ದೇಹಕ್ಕೆ ಅಗತ್ಯವಾದ ಸಕ್ಕರೆ ದೊರೆತು ದಣಿವು ಹತ್ತಿರ ಸುಳಿಯದು. “ಬಿ’, “ಸಿ’ ವಿಟಮಿನ್‌ ಹೇರಳವಾಗಿ ಸಿಗುತ್ತದೆ. ಮತ್ತು ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ.

ಸುಮಾ

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.