ವಾಸ್ತವ ಮಯಂ


Team Udayavani, Jul 6, 2018, 6:00 AM IST

u-27.jpg

ಸಂಬಂಧಗಳ ಕುರಿತು ಅನೇಕ ಚಿತ್ರಗಳು ಬಂದು ಹೋಗಿವೆ. ಬರುತ್ತಲೂ ಇವೆ. ಆ ಸಾಲಿಗೆ “ಅಸತೋಮ ಸದ್ಗಮಯ’ ಚಿತ್ರವೂ ಹೊಸ ಸೇರ್ಪಡೆ ಎನ್ನಬಹುದು. ಈ ವಾರ ಚಿತ್ರ ತೆರೆಗೆ ಬರುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಎರಡು ತಿಂಗಳ ಹಿಂದೆಯೇ ಚಿತ್ರ ಪ್ರೇಕ್ಷಕರ ಎದುರು ಬರಬೇಕಿತ್ತು. ಆದರೆ, ನಿರ್ಮಾಪಕ ಅಶ್ವಿ‌ನ್‌. ಜಿ.ಪರೋರ ಅವರು ಚುನಾವಣೆಯಲ್ಲಿ ತೊಡಗಿಕೊಂಡಿದ್ದರಿಂದ ಚಿತ್ರದ ಬಿಡುಗಡೆ ವಿಳಂಬವಾಗಿ, ಈ ವಾರ ರಾಜ್ಯಾದ್ಯಂತ ಸುಮಾರು 70 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ತೀರ್ಮಾನಿಸಿದ್ದಾರೆ ನಿರ್ಮಾಪಕರು.

ಇದು ಈಗಿನ ವಾಸ್ತವ ಚಿತ್ರಣ ಹೊಂದಿರುವ ಚಿತ್ರ. ಹಿಂದಿನವರು ಸಂಬಂಧಗಳನ್ನು ಇಂದಿಗೂ ಉಳಿಸಿಕೊಂಡಿದ್ದಾರೆ. ಆದರೆ, ಈಗಿನ ಜನರೇಷನ್‌ ಕೇವಲ ವಾಟ್ಸಾಪ್‌, ಫೇಸ್‌ಬುಕ್‌ ಮೂಲಕ ಸಂಬಂಧ ಬೆಸೆಯುತ್ತಿದ್ದಾರೆ. ಆ ಕುರಿತ ವಿಶೇಷ ಅಂಶಗಳು ಚಿತ್ರದ ಹೈಲೆಟ್‌. ಇನ್ನು, ಇಲ್ಲಿ ಹಾರರ್‌ಗೂ ಜಾಗವಿದೆ. ಜೊತೆಗೆ ಶಿಕ್ಷಣ ವ್ಯವಸ್ಥೆ ಕುರಿತಾದ ವಿಷಯವೂ ಇರಲಿದೆ. ಒಟ್ಟಾರೆ ಇಲ್ಲಿ ಭಾವನೆಗಳ ಕುರಿತಾದ ಒಂದು ಮೌಲ್ಯ ಸಾರುವ ಕಥೆ ಇಲ್ಲಿದೆ ಎಂಬುದು ಚಿತ್ರತಂಡದ ಮಾತು.

ಚಿತ್ರಕ್ಕೆ ರಾಜೇಶ್‌ ವೇಣೂರು ನಿರ್ದೇಶಕರು. ಕಥೆ, ಚಿತ್ರಕಥೆ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರೆ. ವಹಾಬ್‌ ಸಲೀಂ ನಾಲ್ಕು ಹಾಡುಗಳಿಗೆ ಸಾಹಿತ್ಯ ರಚಿಸಿ ಸಂಗೀತ ನೀಡಿದ್ದಾರೆ. ರಾಧಿಕಾ ಚೇತನ್‌ ಇಲ್ಲಿ ಮುಖ್ಯ ಆಕರ್ಷಣೆ. ಅವರು ವಿದೇಶದಿಂದ ಭಾರತಕ್ಕೆ ಆಗಮಿಸುವ ಪಾತ್ರವಂತೆ. ಸದಾ ಸೋಷಿಯಲ್‌ ಮೀಡಿಯಾದ ನಂಟು ಬೆಳೆಸಿಕೊಂಡಿರುವ ಹುಡುಗಿಯ ಪಾತ್ರವದು. ಹೊಸ ರೀತಿಯ ಪಾತ್ರ ಮಾಡಿದ್ದಕ್ಕೆ ರಾಧಿಕಾ ಚೇತನ್‌ ಅವರಿಗೂ ಖುಷಿ ಇದೆ. ನಾಯಕ ರಾಜ್‌ ಕಿರಣ್‌ಗೆ ಚಿತ್ರ ಬಿಡುಗಡೆಯಾಗುತ್ತಿರುವುದಕ್ಕೆ ಒಂದು ಕಡೆ ಭಯ, ಇನ್ನೊಂದು ಕಡೆ ಖುಷಿ ಇದೆಯಂತೆ. ಜನರು ಹೇಗೆ ಸ್ವೀಕರಿಸುತ್ತಾರೆ ಎಂಬ ಕುತೂಹಲ ಅವರದು.  ವಿಕ್ರಮ್‌ ಖಳನಾಯಕರಾಗಿ ನಟಿಸಿದ್ದಾರೆ.

 ಚಿತ್ರಕ್ಕೆ ಮಣಿಕಾಂತ್‌ ಕದ್ರಿ ಹಿನ್ನೆಲೆ ಸಂಗೀತ ನೀಡಿದ್ದಾರೆ. ಕಿಶನ್‌ ಛಾಯಗ್ರಹಣವಿದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.