ಕಾಶ್ಮೀರ:ಉಗ್ರರಿಂದ ಕಾನ್ಸ್ಟೇಬಲ್ ಹತ್ಯೆ,ಇಮಾಮ್ ಮೇಲೆ ಫೈರಿಂಗ್
Team Udayavani, Jul 6, 2018, 9:53 AM IST
ಶ್ರೀನಗರ : ಕಣಿವೆ ರಾಜ್ಯದಲ್ಲಿ ಆಪರೇಷನ್ ಆಲೌಟ್ಗೆ ಪ್ರತಿತಂತ್ರ ಹೂಡಿರುವ ಉಗ್ರರು ವಿಧ್ವಂಸಕ ಕೃತ್ಯಗಳನ್ನು ನಡೆಸಿ ಅಟ್ಟಹಾಸ ಮೆರೆಯುತ್ತಿದ್ದಾರೆ. ಗುರುವಾರ ಪೊಲೀಸ್ ಪೇದೆಯೊಬ್ಬರನ್ನು ಅಪಹರಿಸಿ ಹತ್ಯೆಗೈದಿದ್ದು, ಶುಕ್ರವಾರ ಬೆಳಗಿನ ಜಾವ ಇಮಾಮ್ ವೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿವೆ.
ಶೋಪಿಯಾನ್ನಲ್ಲಿ ಗುರುವಾರ ಸಂಜೆ ಉಗ್ರರಿಂದ ಅಪಹರಣಕ್ಕೊಳಗಾದ ಕಾನ್ಸ್ಟೇಬಲ್ ಕುಲ್ಗಾಮ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಕರ್ತವ್ಯ ನಿರತರಾಗಿದ್ದ ಜಾವೀದ್ ಅಹಮದ್ ದಾರ್ ಅವರನ್ನು ಕಾರಿನಲ್ಲಿ ಬಂದಿದ್ದ ಶಸ್ತ್ರಧಾರಿ ಉಗ್ರರು ಗನ್ಪಾಯಿಂಟ್ನಲ್ಲಿ ಅಪಹರಣ ಗೈದಿದ್ದರು.
ಅಪಹರಣ ಗಮನಕ್ಕೆ ಬರುತ್ತಿದ್ದಂತೆ ಪೊಲೀಸರು ಮತ್ತು ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದ್ದರು.
ಪುಲ್ವಾಮಾದಲ್ಲಿ 45 ರ ಹರೆಯದ ಇಮಾಮ್ ಮೇಲೆ ಉಗ್ರರ ಗುಂಪು ಗುಂಡಿನ ದಾಳಿ ನಡೆಸಿ ಪರಾರಿಯಾಗಿದೆ. ಈ ಕುರಿತು ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಜೂನ್ 14 ರಂದು ಸೇನಾ ಯೋಧ ಔರಂಗಜೇಬ್ ಅವರನ್ನು ಅಪಹರಿಸಿದ್ದ ಉಗ್ರರು ಬರ್ಬರವಾಗಿ ಹತ್ಯೆಗೈದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?