ಅನುಚಿತ ವರ್ತನೆ: ಕ್ಯಾಬ್ ಚಾಲಕ ಬಂಧನ
Team Udayavani, Jul 6, 2018, 11:57 AM IST
ಬೆಂಗಳೂರು: ಮದ್ಯದ ಅಮಲಿನಲ್ಲಿ ಮಹಿಳಾ ಪ್ರಯಾಣಿಕರ ಜತೆ ಅನುಚಿತವಾಗಿ ವರ್ತಿಸಿದ ಓಲಾ ಕ್ಯಾಬ್ ಚಾಲಕನನ್ನು ಚಿಕ್ಕಜಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುರೇಶ್ ಬಂಧಿತ. ಮುಂಬೈ ಹೋರಟಿದ್ದ ಸಂತ್ರಸ್ತೆ, ಮಂಗಳವಾರ ಬೆಳಗ್ಗೆ 2 ಗಂಟೆ ಸುಮಾರಿಗೆ ಓಲಾ ಕ್ಯಾಬ್ ಬುಕ್ ಮಾಡಿದ್ದಾರೆ.
ಅದರಂತೆ ಮನೆಯಿಂದ ವಿಮಾನ ನಿಲ್ದಾಣಕ್ಕೆ ಕರೆದೊಯ್ಯುತ್ತಿದ್ದ ಕ್ಯಾಬ್ ಚಾಲಕ ಸುರೇಶ್, ಮಾರ್ಗ ಮಧ್ಯೆ ವಿಮಾನ ನಿಲ್ದಾಣಕ್ಕೆ ಹೋಗುವ ಬದಲು ಹೈದ್ರಾಬಾದ್ ಮಾರ್ಗದ ಕಡೆ ಕರೆದೊಯ್ದಿದ್ದಾನೆ. ಇದನ್ನು ಗಮನಿಸಿದ ಸಂತ್ರಸ್ತೆ ಹಲವು ಬಾರಿ ಚಾಲಕನಿಗೆ ಎಚ್ಚರಿಸಿದ್ದಾರೆ. ಆದರೆ, ಆರೋಪಿ ಸಂತ್ರಸ್ತೆ ಜತೆ ಅನುಚಿತವಾಗಿ ವರ್ತಿಸಿ, ಬೆದರಿಸಿದ್ದಾನೆ.
ಬಳಿಕ ಟೋಲ್ಗೇಟ್ ಬಳಿ ಹೋಗುತ್ತಿದ್ದಂತೆ ಸಂತ್ರಸ್ತೆ ನೆರವಿಗಾಗಿ ಜೋರಾಗಿ ಕೂಗಿಕೊಂಡಿದ್ದಾರೆ. ಸ್ಥಳದಲ್ಲಿದ್ದ ಟೋಲ್ ಸಿಬ್ಬಂದಿ ಸಂತ್ರಸ್ತೆಯನ್ನು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಅಪಹರಣ ಯತ್ನ ಹಾಗೂ ಅನುಚಿತ ವರ್ತನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಪ್ರಕರಣ ಚಿಕ್ಕಜಾಲ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ
ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!
Bengaluru Road: ಮಳೆ ನಿಂತ ನಂತರ ರಸ್ತೆ ಗುಂಡಿ ದುರಸ್ತಿ ಶುರು
ಹೊಯ್ಸಳ ಪೊಲೀಸರನ್ನು ಕಳ್ಳ ಕಳ್ಳ ಎಂದು ಬೆನ್ನಟ್ಟಿದ ಸಾರ್ವಜನಿಕರು!
Bengaluru: 13 ವರ್ಷದ ಅಪ್ರಾಪ್ತ ಸಹೋದರನಿಂದಲೇ 3 ತಿಂಗಳ ಗರ್ಭಿಣಿಯಾದ ತಂಗಿ!