ಪ್ರಬಲ ಸಾಕ್ಷ್ಯ ಇದ್ದರಷ್ಟೇ ಅಪರಾಧಿಗೆ ಶಿಕ್ಷೆ
Team Udayavani, Jul 6, 2018, 4:26 PM IST
ಚಿತ್ರದುರ್ಗ: ಕಾನೂನು ಚೌಕಟ್ಟಿನಲ್ಲಿ ಸಾಕ್ಷಿಗಳನ್ನು ಕಟ್ಟಿ ಹಾಕಿದಾಗ ಮಾತ್ರ ಅಪರಾಧಿಗಳನ್ನು ಮಟ್ಟ ಹಾಕಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಬಿ. ವಸ್ತ್ರಮಠ ಹೇಳಿದರು.
ಹಿರಿಯೂರು ತಾಲೂಕಿನ ಐಮಂಗಲ ಪೊಲೀಸ್ ತರಬೇತಿ ಶಾಲೆಯಲ್ಲಿ ದಾವಣಗೆರೆ ಪೂರ್ವ ವಲಯ ಮತ್ತು ಹುಬ್ಬಳ್ಳಿ-ಧಾರವಾಡ ನಗರದ ಸೇವಾನಿರತ ಮುಖ್ಯಪೇದೆಗಳಿಗೆ ಗುರುವಾರ ಆರಂಭಗೊಂಡ ಪುನಶ್ಚೇತನ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಪರಾಧ ಕೃತ್ಯಗಳಾದ ಮೋಸ, ವಂಚನೆ, ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಇವು ಯಾವಾಗ ಯಾವ ರೀತಿಯಲ್ಲಿ ಆಗುತ್ತವೆ ಎಂಬುದನ್ನು ನಿರೀಕ್ಷೆ ಮಾಡಲು ಆಗುವುದಿಲ್ಲ. ಹಾಗಾಗಿ ಎಲ್ಲಿ ಏನೇ ಅನಾಹುತಗಳು ನಡೆದಾಗ ಕೂಡಲೇ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಬೇಕು. ಆರೋಪಿಗಳು ಪೊಲೀಸರಿಗಿಂತಲೂ ಚಾಣಾಕ್ಷರಿರುತ್ತಾರೆ.
ಅದಕ್ಕಾಗಿ ಎಲ್ಲವನ್ನು ಸಂಶಯದ ದೃಷ್ಟಿಯಿಂದ ನೋಡಿ ವಿಚಾರಣೆ ನಡೆಸಬೇಕು. ಅಗತ್ಯ ಸಾಕ್ಷ್ಯಾಗಳನ್ನು ನ್ಯಾಯಾಲಯಕ್ಕೆ ಒದಗಿಸಿದಾಗ ಮಾತ್ರ ಅಪರಾಧಿಗಳಿಗೆ ಶಿಕ್ಷೆ ವಿಧಿಸಬಹುದು. ಇಲ್ಲವಾದಲ್ಲಿ ಶಿಕ್ಷೆಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆಗಳಿರುತ್ತದೆ ಎಂದು ಎಚ್ಚರಿಸಿದರು. ಸರ್ಕಾರಿ ಕೆಲಸಕ್ಕೆ ಸೇರಿದ ಮೇಲೆ ಎಲ್ಲವೂ ಮುಗಿಯಿತೆಂದು ಸುಮ್ಮನೆ ಕೂರಬಾರದು.
ಜೀವನದಲ್ಲಿ ಕಲಿಯುವುದು ಸಾಕಷ್ಟಿದೆ. ವಕೀಲರು, ಪೊಲೀಸರು, ನ್ಯಾಯಾಧಿಧೀಶರು, ಅಧಿಕಾರಿಗಳು ದಿನವೂ ಕಲಿಯುವುದಿದೆ. ಜ್ಞಾನವನ್ನು ಬೆಳೆಸಿಕೊಂಡು ಎತ್ತರಕ್ಕೆ ಏರಿದಾಗ ಮಾತ್ರ ಸಮಾಜದ ವೇಗಕ್ಕೆ ಹೊಂದಿಕೊಂಡು
ಕೆಲಸ ಮಾಡಲು ನೆರವಾಗಲಿದೆ. ಇಲ್ಲವಾದಲ್ಲಿ ನಗೆಪಾಟಲಿಗೆ ಈಡಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಆಧುನಿಕ ಸಮಾಜದಲ್ಲಿ ಜ್ಞಾನವನ್ನು ಹೆಚ್ಚಿಸಿಕೊಂಡು ಕೆಲಸ ಮಾಡದಿದ್ದರೆ ಸಮಾಜದಲ್ಲಿ ಮೋಸ ವಂಚನೆಗೆ ಬಲಿಯಾಗಬೇಕಾಗುತ್ತದೆ. ಇಲ್ಲವಾದಲ್ಲಿ ಯಾಮಾರಿಸುವವರು ಇದ್ದೇ ಇರುತ್ತಾರೆ. ಭಾರತದಲ್ಲಿ ಎಷ್ಟೊಂದು ಅನ್ಯಾಯ, ಮೋಸ, ವಂಚನೆ ನಡೆಯುತ್ತದೆ ಎಂದು ಹಿಂದೆಯೇ ಇಂಗ್ಲೆಂಡಿನವರಿಗೆ ತಿಳಿದಿತ್ತು. ಹಾಗಾಗಿ ಬ್ರಿಟಿಷರು ನಮ್ಮ ದೇಶದಲ್ಲಿ ಬಿಟ್ಟುಹೋಗಿರುವ ಐಪಿಸಿಯನ್ನೇ ಹಿಡಿದುಕೊಂಡು ಹೋಗುತ್ತಿದ್ದೇವೆ.
ಸಮಾಜವನ್ನು ಕಾಯುವ ನಿಮ್ಮ ಮೇಲೆ ಸಾರ್ವಜನಿಕರು ಇಟ್ಟುಕೊಂಡಿರುವ ಗೌರವ ನಂಬಿಕೆಗೆ ಧಕ್ಕೆ ಬಾರದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ನಿಮ್ಮ ಮೇಲಿರುವ ಸಮವಸ್ತ್ರಕ್ಕೆ ಸಿಗುವ ಗೌರವ ಬೇರೆ ಯಾರಿಗೂ
ಇಲ್ಲ. ಇದೊಂದು ಪವಿತ್ರವಾದ ಕೆಲಸ ಎಂದು ಭಾವಿಸಿ. ಯಾವುದೇ ಸಂದರ್ಭಗಳಲ್ಲಿ ನೊಂದು ನ್ಯಾಯ ಬಯಸಿ ಪೊಲೀಸ್ ಠಾಣೆಗೆ ಬರುವವರ ಬಳಿ ಕೆಟ್ಟದಾಗಿ ವರ್ತಿಸಬೇಡಿ. ಸೌಜನ್ಯದಿಂದ ಕಷ್ಟಗಳನ್ನು ಆಲಿಸಿ ಸಾಧ್ಯವಾದಷ್ಟು ನ್ಯಾಯ ಕೊಡಿಸುವ ಕೆಲಸ ಮಾಡಿ ಎಂದು ಮುಖ್ಯಪೇದೆಗಳಿಗೆ ಕಿವಿಮಾತು ಹೇಳಿದರು.
ಐಮಂಗಲ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲ ಹಾಗೂ ಎಸ್ಪಿ ಪಿ. ಪಾಪಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ ಪುನಶ್ಚೇತನ ಕಾರ್ಯಾಗಾರದಲ್ಲಿ ನ್ಯಾಯಾಧೀಶರು, ವಕೀಲರು, ಪೊಲೀಸ್ ಅಧಿಕಾರಿಗಳು ಹಾಗೂ ಸಂಪನ್ಮೂಲ
ವ್ಯಕ್ತಿಗಳು ತಿಳಿಸುವ ವಿಚಾರವನ್ನು ಗಮನವಿಟ್ಟು ಆಲಿಸಬೇಕು. ಅದನ್ನು ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ತಿಳಿಸಿದರು.
ನಿವೃತ್ತ ಡಿವೈಎಸ್ಪಿ ರುದ್ರಮುನಿ, ಸತೀಶ್, ಅಪರಾಧ ಶಾಸ್ತ್ರಜ್ಞ ಪ್ರೊ| ನಟರಾಜ್, ಆಕಾಶವಾಣಿಯ ಪ್ರದೀಪ್ಕುಮಾರ್, ಇನ್ಸಪೆಕ್ಟರ್ ವರದರಾಜ್ ಮತ್ತಿತರರು ಇದ್ದರು. ಅಮೂಲ್ಯ ಪ್ರಾರ್ಥಿಸಿದರು. ಇನ್ಸ್ಪೆಕ್ಟರ್ ಪರಶುರಾಮ ಸ್ವಾಗತಿಸಿದರು. ಸತೀಶ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
MUST WATCH
ಹೊಸ ಸೇರ್ಪಡೆ
Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ