ಪಿಐಎಲ್‌ ಸಲ್ಲಿಸಿದ ಶಿಕ್ಷಕಗೆ 20 ಸಾವಿರ ರೂ. ದಂಡ!


Team Udayavani, Jul 7, 2018, 2:15 PM IST

highcourt3.jpg

ಬೆಂಗಳೂರು: ಸಾಮಾಜಿಕ ಸಮಸ್ಯೆಗಳ ನೈಜ ಕಾಳಜಿ ಇಲ್ಲದ ಸಾರ್ವಜಿಕ ಹಿತಾಸಕ್ತಿ ಅರ್ಜಿಗಳ ಸಲ್ಲಿಕೆಯಿಂದ ಹೈಕೋರ್ಟ್‌ನ ಅಮೂಲ್ಯ ಸಮಯ ಹಾಳಾಗುತ್ತಿದೆ ಎಂದು ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ನೇತೃತ್ವದ ವಿಭಾಗೀಯ ಪೀಠ ಅಸಮಾಧಾನವ್ಯಕ್ತಪಡಿಸಿದೆ.

ಇತ್ತೀಚೆಗೆ ಅರ್ಜಿಗಳ ವಿಚಾರಣೆ ವೇಳೆಯೇ ಹಲವು ಬಾರಿ ಅನಗತ್ಯ ಪಿಐಎಲ್‌ಗ‌ಳನ್ನು ಸಲ್ಲಿಸಿದ ಅರ್ಜಿದಾರರಿಗೆ ಹಲವು ಬಾರಿ ತರಾಟೆ ತೆಗೆದುಕೊಂಡಿದ್ದ ನ್ಯಾಯ ಪೀಠ, ಪಿಐಎಲ್‌ಗ‌ಳು ಸಮಾಜದ ದುರ್ಬಲ ವರ್ಗಕ್ಕೆ ನೆರವು, ಸಮಾಜವನ್ನು ಕಾಡುತ್ತಿರುವ ನೈಜ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವಂತಿರಬೇಕು ಎಂದೂ ಸಲಹೆ ನೀಡಿದೆ.

ಉಪಮುಖ್ಯಮಂತ್ರಿ ಜಿ.ಪರಮೇಶ್ವರ್‌ ಅವರ ಹುದ್ದೆ ಅಸಂವಿಧಾನಿಕ ಎಂದು ಘೋಷಿಸುವಂತೆ ಪಿಐಎಲ್‌ ಪ್ರೊ.ಶೇಖರ್‌ ಅಯ್ಯರ್‌ ಎಂಬುವವರಿಗೆ 10 ಸಾವಿರ ರೂ. ದಂಡ ವಿಧಿಸಿದ್ದ ಮುಖ್ಯ ನ್ಯಾಯಮೂರ್ತಿಗಳ ಪೀಠ, ಇದೀಗ ಮತ್ತೂಂದು ಪ್ರಕರಣದಲ್ಲಿ ಕೋರ್ಟ್‌ ಸಮಯ ವ್ಯರ್ಥ ಮಾಡಿದ ಶಿಕ್ಷಕನಿಗೆ 20 ಸಾವಿರ ರೂ. ದಂಡವಿಧಿಸುವ ಮೂಲಕ ಬಿಸಿಮುಟ್ಟಿಸಿದೆ.

ಸಿಖ್‌ ಧರ್ಮಕ್ಕೆ ಸಂಬಧಿಸಿದ ವಿಚಾರಗಳನ್ನು ಶಾಲಾ ಪಠ್ಯಗಳಲ್ಲಿ ಅಳವಡಿಸುವಂತೆ ರಾಜ್ಯ ಶಿಕ್ಷಣ ಇಲಾಖೆಗೆ ನಿರ್ದೇಶಿಸುವಂತೆ ಕೋರಿ ವಿಜಯಪುರ ಜಿಲ್ಲೆ ಇಂಡಿ ಮೂಲದ ಪುಂಡಿತ್‌ರಾವ್‌ ಧರೇಣ್ಣವರ್‌ ಎಂಬುವವರು ಸಲ್ಲಿಸಿದ್ದ ಪಿಐಎಲ್‌ ವಜಾಗೊಳಿಸಿದ ವಿಭಾಗೀಯ ಪೀಠ, ಅವರಿಗೆ 20 ಸಾವಿರ ರೂ. ದಂಡ ವಿಧಿಸಿ  ತೀರ್ಪು ನೀಡಿದೆ.

ಅರ್ಜಿದಾರರು ಮುಂದಿನ 1 ತಿಂಗಳಲ್ಲಿ ದಂಡದ ಮೊತ್ತವನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಬಳಿ ಪಾವತಿಸಬೇಕು. ಒಂದು ವೇಳೆ ಅರ್ಜಿದಾರ ದಂಡ ಪಾವತಿಸದಿದ್ದರೆ ಜಿಲ್ಲಾಧಿಕಾರಿಗಳು ಆತನ ಬಳಿ ದಂಡ ವಸೂಲಿ ಮಾಡಬೇಕು. ಬಳಿಕ ಆ ಮೊತ್ತವನ್ನು ರಾಜ್ಯ ಕಾನೂನು ಸೇವಾಪ್ರಾಧಿಕಾರಕ್ಕೆ ನೀಡಬೇಕು ಎಂದು ಆದೇಶಿಸಿದೆ.

ಚಂಡೀಗಡ ಕಾಲೇಜೊಂದರಲ್ಲಿ ಪ್ರೊಫೆಸರ್‌ ಎಂದು ಅರ್ಜಿಯಲ್ಲಿ ಹೇಳಿಕೊಂಡಿರುವ ಪುಂಡಿತ್‌ರಾವ್‌ ಧರೇಣ್ಣವರ್‌, ಸಿಖ್‌ ಧರ್ಮದ ಇತಿಹಾಸ, ಸಂಸ್ಕೃತಿ ಸಾರುವಂತಹ ವಿಚಾರಗಳನ್ನು ರಾಜ್ಯ ಪ್ರಾಥಮಿಕ ಶಾಲಾ ಪಠ್ಯಗಳಲ್ಲಿ ಅಳವಡಿಸಬೇಕು.

ಬಹುಮುಖ್ಯವಾಗಿ ರಾಜ್ಯದವರೇ ಆದ ಬಾಹಿಸಾಹೇಬ್‌ ಸಿಂಗ್‌, ಮೈ ಭಾಗೋ ವೋಸೆ ಅವರ ಜೀವನ ವಿಚಾರಳನ್ನು ಒಳಗೊಂಡಿರಬೇಕು.ಬೀದರ್‌ನಲ್ಲಿ ಸಿಖ್‌ ವಿಶ್ವವಿದ್ಯಾಲಯ ಸ್ಥಾಪಿಸಿ ಬಾಹೀ ಸಾಹೀಬ್‌ ಸಿಂಗ್‌ ಹೆಸರಿನಲ್ಲಿರಬೇಕು. ಪಂಜಾಬಿ ಸಾಹಿತ್ಯ ಅಕಾಡೆಮಿ ಸ್ಥಾಪಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.