ನಿರಂತರ ಮಳೆ: ತತ್ತರಿಸಿದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ; ಇಬ್ಬರ ಸಾವು


Team Udayavani, Jul 8, 2018, 6:00 AM IST

v-39.jpg

ಉಡುಪಿ: ಹಿಂದೆಂದೂ ಕಂಡು ಕೇಳರಿಯದ ರೀತಿಯ ಮಳೆ ಶುಕ್ರವಾರದಿಂದ ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿದ್ದು, ಜನ ಜೀವನ ಅಕ್ಷರಶಃ ತತ್ತರಿಸಿದೆ. 
ಕಾಪು ತಾಲೂಕು ಮತ್ತು ಉಡುಪಿ ತಾಲೂಕು ಗರಿಷ್ಠ ನೆರೆ ಬಾಧಿತ ಪ್ರದೇಶವಾಗಿದ್ದು, ಸುಮಾರು 800ಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರಿಸಲಾಗಿದೆ. ಮನೆಗಳು, ನೂರಾರು ಹೆಕ್ಟೇರ್‌ ಕೃಷಿ ಭೂಮಿಗೆ ಹಾನಿಯಾಗಿದ್ದು ಲಕ್ಷಗಟ್ಟಲೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಪೊಲೀಸ್‌ ಪಡೆ, ಅಗ್ನಿಶಾಮಕ ದಳಗಳು ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ನೆರೆ ಬಾಧಿತ ಪ್ರದೇಶಗಳಿಗೆ ತೆರಳಿವೆ. ಕುಂದಾಪುರ ಅಗ್ನಿಶಾಮಕ ಠಾಣೆಯಿಂದ 6 ಸಿಬಂದಿಯನ್ನು ಮತ್ತು ರಬ್ಬರ್‌ ಬೋಟ್‌ಗಳನ್ನು ಎರವಲು ಪಡೆಯಲಾಗಿದ್ದು, ರಕ್ಷಣೆ ಕಾರ್ಯ ಸಾಗಿದೆ. 

ಎಲ್ಲೆಲ್ಲಿ ವಿಪರೀತ ಹಾನಿ? 
ಕಾಪು ತಾಲೂಕಿನ ಕಟಪಾಡಿ, ಪಡುಬಿದ್ರಿ, ಶಿರ್ವ ಗರಿಷ್ಠ ಮಳೆ ಬಾಧಿತವಾಗಿವೆ. ಇಲ್ಲಿನ ಮಲ್ಲಾರು, ಉಳಿಯಾರಗೋಳಿ, ಮಜೂರು, ಬೆಳಪು, ಪಾಂಗಾಳ, ಉದ್ಯಾವರ ಸಹಿತ ಹಲವೆಡೆ 200ಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿವೆ. ಉದ್ಯಾವರದಲ್ಲಿ 1 ಮನೆ ಕುಸಿದಿದೆ. ಕೆಲಭಾಗಗಳಲ್ಲಿ ರಕ್ಷಣಾ ಕಾರ್ಯ ನಡೆಸಿ 500ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. ಶಿರ್ವ ಹಾಗೂ ಬೆಳ್ಳೆ ಗ್ರಾಪಂ ವ್ಯಾಪ್ತಿಯಲ್ಲಿ ಮನೆಗಳು, ರಸ್ತೆ, ಕೃಷಿಭೂಮಿ ಜಲಾವೃತಗೊಂಡಿವೆ.  ಕಾಪುವಿನ ಸರಕಾರಿ ಶಾಲೆಯಲ್ಲಿ ಗಂಜಿಕೇಂದ್ರ ತೆರೆಯಲಾಗಿದೆ.

ಉಡುಪಿ ತಾಲೂಕಿನಲ್ಲೂ ವ್ಯಾಪಕ ನೆರೆ ಹಾನಿಯಾಗಿದೆ.  ಮೂಡನಿಡಂಬೂರು, ನಿಟ್ಟೂರು, ಕೊಡಂಕೂರು, ಮಠದಬೆಟ್ಟು, ಬೈಲೂರು, ಕೊರಂಗ್ರಪಾಡಿ, ಬೈಲಕೆರೆ  ಪೆರ್ಡೂರು, ಹಿರಿಯಡಕ ಮೊದಲಾದೆಡೆ ಭಾರೀ ನೆರೆ ಹಾವಳಿ ಉಂಟಾಗಿದೆ. ಮೂಡನಿಡಂಬೂರು-ನಿಟ್ಟೂರು ರಸ್ತೆ ಸಂಪರ್ಕ ಕಡಿದಿದೆ. ಕೊಂಡಂಕೂರಿನಲ್ಲಿ 35, ಮಲ್ಪೆಯಲ್ಲಿ 9 ಮಂದಿಯನ್ನು ರಕ್ಷಿಸಲಾಗಿದೆ.  ಕುಂದಾಪುರ ತಾಲೂಕಿನ  ಖಾರ್ವಿಕೆರೆ ವಾರ್ಡ್‌ ನಲ್ಲಿ 3 ಮನೆ ಕುಸಿದಿದೆ.  ಹಾರ್ದಳ್ಳಿ, ಕಂದಾವರ ಗ್ರಾಮಗಳಲ್ಲಿ ಮನೆಗಳ ಗೋಡೆ ಕುಸಿದಿವೆ.  ಮಾರಣಕಟ್ಟೆಯ ಬ್ರಹ್ಮಕುಂಡ ನದಿ ಉಕ್ಕಿ ಹರಿಯುತ್ತಿದೆ. ವಂಡ್ಸೆಯಲ್ಲೂ ಮಳೆ ಹಾನಿಯಾಗಿದ್ದು, ಕೊಲ್ಲೂರಿನಲ್ಲಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. 

 ಕಾರ್ಕಳ ತಾಲೂಕಿನಲ್ಲಿ ಬೆಳ್ಮಣ್‌ನ ಶಾಂಭವಿ ಮತ್ತು ಸ್ವರ್ಣಾ ನದಿ ಉಕ್ಕಿ ಹರಿಯುತ್ತಿದೆ. ಮಳೆ ಕಾರಣ ತಾಲೂಕಿನ ಹೆಚ್ಚಿನ ಭಾಗಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿತ್ತು. ಇನ್ನು ಮುಂಡ್ಕೂರು-ಬೆಳ್ಮಣ್‌ ರಸ್ತೆ ಮುಂಡ್ಕೂರು ಪಡಿತ್ತಾರು ಬಳಿ  ಶಾಂಭವಿ ನದಿ ನೆರೆ ನೀರು ತುಂಬಿ ಸಂಚಾರಕ್ಕೆ  ಅಡಚಣೆ ಉಂಟಾಗಿದೆ.

ಖಾಸಗಿ ಬೋಟ್‌ ಮಾಲಕರ ಸಹಾಯ ಹಸ್ತ 
ನೆರೆಯಲ್ಲಿ ಸಿಲುಕಿದವರ ರಕ್ಷಣೆಗೆ ಮಲ್ಪೆಯ ಅನುಷ್ಕಾ ಮತ್ತು ರಾಜರಾಜೇಶ್ವರಿ ಬೋಟ್‌ಗಳ ಮಾಲಕರು ತಮ್ಮ ಬೋಟನ್ನು ಉಚಿತವಾಗಿ ಒದಗಿಸಿದ್ದಾರೆ. ಇವರಲ್ಲಿ ಉತ್ತಮ ರಕ್ಷಣಾ ವ್ಯವಸ್ಥೆ ಇದ್ದು 100ಕ್ಕೂ ಹೆಚ್ಚು ಲೈಫ್‌ ಜಾಕೆಟ್‌ಗಳು, 100ಕ್ಕೂ ಹೆಚ್ಚು ಲೈಫ್‌ ಬಾಯ್‌ಗಳು, ಮುಳುಗು ತಜ್ಞರನ್ನು ಹೊಂದಿದ್ದಾರೆ. ತುರ್ತು ಸಂದರ್ಭ 9880593676 ಗೆ ಕರೆ ಮಾಡುವಂತೆ  ಮಾಲಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.