ಜಮೀನು-ಮನೆ ನೀಡಿ ತಾಂಡಾ ಸ §ಳಾಂತರಿಸಲು ಮನವಿ


Team Udayavani, Jul 8, 2018, 10:58 AM IST

gul-2.jpg

ಚಿಂಚೋಳಿ: ಅನೇಕ ತಲೆಮಾರಿನಿಂದ ನಾವು ಇಲ್ಲಿ ವಾಸವಾಗಿದ್ದೇವೆ. ನಮ್ಮ ಮನೆ, ಜಮೀನು ಬಿಟ್ಟು ಅರಣ್ಯಪ್ರದೇಶದಿಂದ ಹೊರಗೆ ಹೋಗಲು ಆಗುವುದಿಲ್ಲ. ನಮ್ಮ ಆಸ್ತಿಗೆ ಸೂಕ್ತ ಪರಿಹಾರ ನೀಡಿ, ಸರಕಾರದಿಂದ ಜಮೀನು, ವಾಸಿಸಲು ಮನೆ ಕಟ್ಟಿಸಿಕೊಟ್ಟರೆ ಸ್ಥಳಾಂತರಗೊಳ್ಳುತ್ತೇವೆ ಎಂದು ಸೇರಿಭಿಕನಳ್ಳಿ ತಾಂಡಾದ ಜನರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕಿನ ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶದಲ್ಲಿ ಇರುವ ಸೇರಿಭಿಕನಳ್ಳಿ ತಾಂಡಾದಲ್ಲಿ ಶನಿವಾರ ವನ್ಯಜೀವಿ ಧಾಮ ಅರಣ್ಯ ಇಲಾಖೆಯಿಂದ ಏರ್ಪಡಿಸಿದ ಸೇರಿಭಿಕನಳ್ಳಿ ತಾಂಡಾ ಸ್ಥಳಾಂತರ ಕುರಿತು ಶಾಸಕ ಡಾ| ಉಮೇಶ ಜಾಧವ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಯಿತು.

ತಾಂಡಾದ ಮುಖ್ಯಸ್ಥ ಧನಸಿಂಗ ರಾಠೊಡ ಮಾತನಾಡಿ, ತಾಂಡಾದಲ್ಲಿ ಒಟ್ಟು 68.16 ಎಕರೆ ಗುಂಟೆ ಪಟ್ಟಾ ಜಮೀನಿದೆ. 55 ಮನೆಗಳು, 260 ಜನಸಂಖ್ಯೆಯಿದೆ. 55 ಕುಟುಂಬಗಳು ಆಹಾರ ಪಡಿತರ ಚೀಟಿಯನ್ನು ಪಡೆದುಕೊಂಡಿವೆ. ಪ್ರತಿಯೊಂದು ಕುಟುಂಬಕ್ಕೆ ವಿಶೇಷ ಪ್ಯಾಕೇಜ್‌ನಡಿ 15ಲಕ್ಷ ರೂ. ನೀಡಬೇಕು. ಜಮೀನು ಇಲ್ಲದವರಿಗೆ ಜಮೀನು ಸರಕಾರದಿಂದ ಕೊಡಿಸಬೇಕು. ಪ್ರತಿ ಎಕರೆಗೆ 7ಲಕ್ಷ ರೂ.ನೀಡಬೇಕು. ವಾಸಿಸುವುದಕ್ಕಾಗಿ ಮನೆ ನಿರ್ಮಿಸಿಕೊಡಬೇಕು. ಜಮೀನುಗಳಲ್ಲಿ ಬೋರವೆಲ್‌ ಕೊರೆಯಿಸಿ ವಿದ್ಯುತ್‌ ಸಂಪರ್ಕ ಕೊಡಿಸಬೇಕೆಂದು ಶಾಸಕರಿಗೆ ಮನವಿ ಮಾಡಿದರು.

ಶಾಸಕ ಡಾ| ಉಮೇಶ ಜಾಧವ ತಾಂಡಾ ಜನರ ಅಭಿಪ್ರಾಯ ಆಲಿಸಿ, ಬೇಕಾಗುವ ಸೌಲಭ್ಯ, ಬೇಡಿಕೆ, ಆಸ್ತಿಪಾಸ್ತಿ ಬಗ್ಗೆ ಪರಿಹಾರ ನಿಗದಿಪಡಿಸಿ ಒಮ್ಮತದಿಂದ ಎಲ್ಲರೂ ತಿಳಿಸಿದರೆ ನಾನು ಸರಕಾರದ ಗಮನ ಸೆಳೆದು ಹೆಚ್ಚಿನ ಪರಿಹಾರ ಒದಗಿಸುತ್ತೇನೆ ಎಂದು ಭರವಸೆ ನೀಡಿದರು.

ಜಮೀನು ಕಳೆದುಕೊಂಡವರಿಗೆ ಚಿಮ್ಮಾಇದಲಾಯಿ, ಐನೋಳಿ, ಭೋಗಾಲಿಂಗದಳ್ಳಿ ಗ್ರಾಮಗಳ ಸುತ್ತಮುತ್ತ ಜಮೀನು ಕೊಡಿಸುವ ಪ್ರಯತ್ನ ಮಾಡುತ್ತೇನೆ. ಅರಣ್ಯ ಇಲಾಖೆ ತೆಗೆದುಕೊಳ್ಳುವ ನಿಯಮಗಳಿಗೆ ಬದ್ಧರಾಗಬೇಕು ಎಂದು ಸಲಹೆ ನೀಡಿದರು.

ತಾಂಡಾದ ಮುಖ್ಯಸ್ಥರಾದ ಗೋಪಾಲ ಜಾಧವ, ಮನ್ನುಸಿಂಗ್‌ ರಾಠೊಡ, ರಾಮಶೆಟ್ಟಿ ರಾಠೊಡ, ಶಂಕರ,ಲಿಂಬಾಜಿ, ಅಶೋಕ ಚವ್ಹಾಣ ಇನ್ನಿತರರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು.

ಡಿಎಫ್‌ಒ ಶಿವಶಂಕರ, ಎಸಿಎಫ್‌ ರಾಮಕೃಷ್ಣ ಯಾದವ್‌, ತಾಪಂ ಅಧ್ಯಕ್ಷೆ ರೇಣುಕಾ ಚವ್ಹಾಣ,ಆರ್‌ಎಫ್‌ಒ ಸುನೀಲ ಚವ್ಹಾಣ, ತಹಶೀಲ್ದಾರ್‌ ಪಂಡಿತರಾವ್‌ ಬಿರಾದಾರ, ತಾಪಂ ಅಧಿಕಾರಿ ಮಹಮ್ಮದ ಮೈನೋದ್ದೀನ್‌ ಪಟಲಿಕರ, ಕಂದಾಯ ನಿರೀಕ್ಷಕ ಕೇಶವ ಕುಲಕರ್ಣಿ, ಸಂಜೀವ ಚವ್ಹಾಣ ಇನ್ನಿತರರು ಭಾಗವಹಿಸಿದ್ದರು.

ವಲಯ ಅರಣ್ಯಾಧಿಕಾರಿ ಸುನೀಲಕುಮಾರ ಚವ್ಹಾಣ ಸ್ವಾಗತಿಸಿದರು. ಸಿದ್ದಾರೂಢ ವಂದಿಸಿದರು. ತಾಂಡಾದ ಮಹಿಳೆಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.