ರಶ್ಮಿಕಾ ಹೊಸ ಚಿತ್ರ ವೃತ್ರ


Team Udayavani, Jul 8, 2018, 1:48 PM IST

rashmika-mandanna-vrithra.jpg

ರಶ್ಮಿಕಾ ಮಂದಣ್ಣ ಕನ್ನಡಕ್ಕಿಂತ ಹೆಚ್ಚಾಗಿ ತೆಲುಗು ಸಿನಿಮಾಗಳಲ್ಲೇ ಬಿಝಿಯಾಗುತ್ತಿದ್ದಾರೆಂಬ ಮಾತು ಕೇಳಿಬರುತ್ತಲೇ ಇತ್ತು. ಅದಕ್ಕೆ ಸರಿಯಾಗಿ “ಯಜಮಾನ’ ಬಿಟ್ಟರೆ ಬೇರೆ ಯಾವ ಸಿನಿಮಾವನ್ನು ರಶ್ಮಿಕಾ ಒಪ್ಪಿಕೊಂಡಿರಲಿಲ್ಲ. ಈಗ ರಶ್ಮಿಕಾ ಸದ್ದಿಲ್ಲದೇ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಅದು “ವೃತ್ರ’. ಗೌತಮ್‌ ಅಯ್ಯರ್‌ ಎನ್ನುವವರು ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ.

ಗೌತಮ್‌ ಅವರಿಗೆ ಇದು ಚೊಚ್ಚಲ ಸಿನಿಮಾ. ಚೆನ್ನೈನಲ್ಲಿ ಕಾಲೇಜು ಮುಗಿಸಿಕೊಂಡು ನೇರವಾಗಿ ಪರಂವಾ ಸ್ಟುಡಿಯೋ ಸೇರಿದ ಗೌತಮ್‌, “777 ಚಾರ್ಲಿ’ ನಿರ್ದೇಶಕ ಕಿರಣ್‌ ರಾಜ್‌ ಜೊತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಈ ಸಂದರ್ಭದಲ್ಲೇ ಅವರೊಂದು ಕಥೆ ಕೂಡಾ ಮಾಡಿಟ್ಟುಕೊಂಡಿದ್ದರಂತೆ. ಆ ಕಥೆಯನ್ನು ರಶ್ಮಿಕಾ ಅವರಿಗೆ ಹೇಳಿದಾಗ ಅವರು ಕಥೆ ಇಷ್ಟಪಟ್ಟು ನಟಿಸಲು ಒಪ್ಪಿದರಂತೆ.

ಈ ಮೂಲಕ ಗೌತಮ್‌ ಕನಸು ಬೇಗನೇ ಈಡೇರಿದೆ.  ವೃತ್ತ ಎಂಬ ಪದವನ್ನು ನೀವು ಕೇಳಿರುತ್ತೀರಿ. ಆದರೆ, “ವೃತ್ರ’ ಎಂದರೇನು ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಈ ಬಗ್ಗೆ ಮಾತನಾಡುವ ನಿರ್ದೇಶಕ ಗೌತಮ್‌, “ಇದು ನಾವೇ ಸಿನಿಮಾಗಾಗಿ ಹುಟ್ಟುಹಾಕಿರುವ ಪದ. ಎರಡು ಪದಗಳನ್ನು ಸೇರಿಸಿ ನಾವು “ವೃತ್ರ’ ಮಾಡಿದ್ದೇವೆ. ಅದು ಯಾಕಾಗಿ ಎಂಬ ಪ್ರಶ್ನೆಗೆ ಸಿನಿಮಾದಲ್ಲಿ ಉತ್ತರ ಸಿಗಲಿದೆ.

ಇದೊಂದು ಕ್ರೈಂ ಹಿನ್ನೆಲೆಯಲ್ಲಿ ಸಾಗುವ ಸಿನಿಮಾವಾಗಿದ್ದು, ರಶ್ಮಿಕಾ ಅವರ ಗೆಟಪ್‌ ಕೂಡಾ ಭಿನ್ನವಾಗಿರುತ್ತದೆ’ ಎಂದು ಸಿನಿಮಾ ಬಗ್ಗೆ ಹೇಳುತ್ತಾರೆ. ಚಿತ್ರದಲ್ಲಿ ರಶ್ಮಿಕಾ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ತನಗೆ ಸಿಗುವ ಮೊದಲ ಕೇಸಿನ ತನಿಖೆಯನ್ನು ಹೇಗೆ ನಡೆಸುತ್ತಾರೆ. ಆ ಸಂದರ್ಭದಲ್ಲಿ ಎದುರಾಗುವ ಟ್ವಿಸ್ಟ್‌ಗಳೊಂದಿಗೆ ಸಿನಿಮಾ ಸಾಗುತ್ತದೆಯಂತೆ.

ಆಗಸ್ಟ್‌ನಿಂದ ಚಿತ್ರೀಕರಣ ಆರಂಭವಾಗಲಿದ್ದು, ಬಹುತೇಕ ಸಿನಿಮಾ ರಶ್ಮಿಕಾ ಸುತ್ತವೇ ಸುತ್ತಲಿದೆಯಂತೆ. ಉಳಿದಂತೆ ಒಂದಷ್ಟು ಹೊಸ ಮುಖಗಳಿಗೆ ಇಲ್ಲಿ ಅವಕಾಶ ಸಿಗಲಿದೆ. ಆಯ್ಕೆ ಪ್ರಕ್ರಿಯೆ ಕೂಡಾ ನಡೆಯುತ್ತಿದೆ. ಚಿತ್ರಕ್ಕೆ ಸಂಗೀತ, ಛಾಯಾಗ್ರಹಣ ಸೇರಿದಂತೆ ಇತರ ಅಂಶಗಳು ಇನ್ನಷ್ಟೇ ಅಂತಿಮವಾಗಬೇಕಿದೆ. ಈ ಚಿತ್ರವನ್ನು ಶಂಭುಲಿಂಗಸ್ವಾಮಿ ಹಾಗೂ ರಮಣಿ ಅಯ್ಯರ್‌ ನಿರ್ಮಿಸುತ್ತಿದ್ದಾರೆ. 

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.