ಬೊರಿವಲಿ-ದಹಿಸರ್‌ ಬಿಲ್ಲವರ ಅಸೋಸಿಯೇಶನ್‌: ಶೈಕ್ಷಣಿಕ ನೆರವು ವಿತರಣೆ


Team Udayavani, Jul 8, 2018, 5:08 PM IST

0607mum01a.jpg

ಮುಂಬಯಿ: ಶೈಕ್ಷಣಿಕ ಬೆಳವಣಿಗೆಯಲ್ಲಿ ಪಾಲಕರು ಮಕ್ಕಳೊಂದಿಗೆ  ವೈಯಕ್ತಿಕವಾಗಿ ಸ್ಪಂದಿಸುವ ಮೂಲಕ ಮಕ್ಕಳ ಶಿಕ್ಷಣದ ಆಂತರಿಕ ಸಂವೇದನಶೀಲತೆಯನ್ನು ಅರ್ಥೈಸಿಕೊಳ್ಳಬೇಕು. ಮಕ್ಕಳು ಕಲಿಯುವ ಮಾಧ್ಯಮ ಯಾವುದೇ ಇರಲಿ, ಮಕ್ಕಳ ಶಿಕ್ಷಣದಲ್ಲಿ ಪಾಲಕರು ಧೈರ್ಯ ತುಂಬುವ ಕೆಲಸ ಮಾಡಬೇಕು. ಶಿಕ್ಷಣದ ಸಂಘರ್ಷದ ಹಾದಿಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಜಯಶಾಲಿ ಯಾಗಬೇಕು. ಮಕ್ಕಳು ಬದುಕಿನಲ್ಲಿ ಉತ್ತಮ ಸಂಸ್ಕಾರವನ್ನು ಅಳವಡಿಸಿಕೊಂಡು ಆದರ್ಶ ಪ್ರಜೆಗಳಾಗಿ ಬಾಳಬೇಕು ಎಂದು ಬಿಲ್ಲವರ ಅಸೋಸಿಯೇಶನ್‌ ವಿದ್ಯಾ ಉಪಸಮಿತಿಯ ಗೌ. ಕಾರ್ಯದರ್ಶಿ ವಿಶ್ವನಾಥ ತೋನ್ಸೆ   ನುಡಿದರು.

ಜು. 5ರಂದು ಬಿಲ್ಲವರ ಅಸೋಸಿಯೇಶನ್‌ ಬೊರಿವಲಿ-ದಹಿಸರ್‌ ಸ್ಥಳೀಯ ಸಮಿತಿಯ ವತಿಯಿಂದ ಬೊರಿವಲಿಯ ಗೋರೈಯಲ್ಲಿರುವ ಗುರುಸನ್ನಿಧಿಯಲ್ಲಿ ಜರಗಿದ ವಾರ್ಷಿಕ ಶೈಕ್ಷಣಿಕ ನೆರವು ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ವಿದ್ಯಾರ್ಥಿ ಗಳಿಗೆ ಶುಭಹಾರೈಸಿದರು.

ಒಬಿಸಿ ಉಪಸಮಿತಿಯ ಕಾರ್ಯಾಧ್ಯಕ್ಷ ಎಂ. ಆನಂದ ಪೂಜಾರಿ ಇವರು ಮಾತನಾಡಿ, ವಿದ್ಯಾ ವಿಕಸದಕ್ಕಾಗಿ ಬಿಲ್ಲವರ ಅಸೋಸಿಯೇಶನ್‌ ದಾನಿಗಳಿಂದ ಹಣವನ್ನು ಸಂಗ್ರಹಿಸಿ, ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡುವ ಮೂಲಕ ಶ್ರೀ ನಾರಾಯಣ ಗುರುಗಳ ತತ್ವಕ್ಕೆ ಬದ್ಧವಾಗಿದ್ದು, ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಸಾಧನೆಯ ಪ್ರಸಾದ ಎಂದು ಸ್ವೀಕರಿಸಬೇಕು. ಗುರುತ್ವತದ ಚಿಂತನೆಯಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ದಾನಿಗಳ ಸಹಾಯ ಮಹತ್ವದ್ದಾಗಿದೆ. ಅಸೋಸಿಯೇಶನ್‌ನ ಅಧ್ಯಕ್ಷ ಜಯ ಸಿ. ಸುವರ್ಣರ 

ಮಾರ್ಗದರ್ಶನದಲ್ಲಿ ವಿದ್ಯೆಯಿಂದ ವಂಚಿತ ಮಕ್ಕಳಿಗೆ ಹೆಚ್ಚಿನ ಅವಕಾಶ ನೀಡಿದೆ. ಸ್ಥಳೀಯ ಕಚೇರಿಗಳ ಈ ಒಂದು ಕಾರ್ಯ ಸ್ತುತ್ಯರ್ಹ ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮಿತಿಯ ಕಾರ್ಯಾಧ್ಯಕ್ಷ ಸುಂದರ ಪೂಜಾರಿ ಇವರು ಮಾತನಾಡಿ, ಧನ ಸಹಾಯ ಪಡೆದ ವಿದ್ಯಾರ್ಥಿಗಳು ವಿದ್ಯೆಗೆ ಹೆಚ್ಚಿನ ಮಹತ್ವ ನೀಡಿ, ಮುಂದೆ ಸಮಾಜದ ಪ್ರತಿಷ್ಠಿತ ನಾಗರಿಕರಾಗಿ ಅಸೋಸಿಯೇಶನ್‌ ಮತ್ತು ಸಮಾಜ ಬಾಂಧವರಿಗೆ ಸಹಾಯಕರಾಗಿದ್ದು, ಸಮುದಾಯಕ್ಕೆ ಕೀರ್ತಿ ತರಬೇಕು ಎಂದು ಹಾರೈಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಭಾರತ್‌ ಬ್ಯಾಂಕ್‌ನ ನಿರ್ದೇಶಕ, ಉದ್ಯಮಿ ದಾಮೋದರ ಸಿ. ಕುಂದರ್‌, ಕೇಶವ ಕೋಟ್ಯಾನ್‌, ಅಕ್ಷಯದ ಸಹಾಯಕ ಸಂಪಾದಕ ಹರೀಶ್‌ ಕೆ. ಹೆಜ್ಮಾಡಿ, ಕೇಂದ್ರ ಕಚೇರಿಯ ಜತೆ ಕಾರ್ಯದರ್ಶಿ ಧನಂಜಯ ಕೋಟ್ಯಾನ್‌ ಅವರು ವಿದ್ಯಾರ್ಥಿಗಳಿಗೆ ಹಿತವಚನ ನೀಡಿ ಶುಭಹಾರೈಸಿದರು.
ಗೌರವ ಕಾರ್ಯದರ್ಶಿ ಮೋಹನ್‌ ಬಿ. ಅಮೀನ್‌ ಸ್ವಾಗತಿಸಿದರು. ಗೌರವ ಕೋಶಾಧಿಕಾರಿ ಶ್ರೀಧರ ಬಂಗೇರ ಸಹಾಯ ಧನ ಪಡೆದ ವಿದ್ಯಾರ್ಥಿಗಳ ಯಾದಿಯನ್ನು ವಾಚಿಸಿದರು. ಉಪಕಾರ್ಯಾಧ್ಯಕ್ಷ ಕೃಷ್ಣರಾಜ್‌ ಸುವರ್ಣ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಬೆಳಗ್ಗೆ 8 ರಿಂದ ಕಚೇರಿಯಲ್ಲಿ ಗುರುಮೂರ್ತಿಯ ವಾರ್ಷಿಕ ಪ್ರತಿಷ್ಠಾಪನೆಯ ಅಂಗವಾಗಿ ವಿವಿಧ ರೀತಿಯ ಪೂಜೆ, ಅಭಿಷೇಕ ನಡೆಯಿತು. ಧನಂಜಯ ಶಾಂತಿ ಅವರು ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

ಕೇಂದ್ರ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಜಿ. ಅಂಚನ್‌ ಉಪಸ್ಥಿತರಿದ್ದರು. 

ಜತೆ ಕಾರ್ಯದರ್ಶಿ ಅಶೋಕ್‌ ಸಾಲ್ಯಾನ್‌, ಜತೆ ಕೋಶಾಧಿಕಾರಿ ಸುರೇಶ್‌ ಸನಿಲ್‌, ಕಾರ್ಯಕಾರಿ ಸಮಿತಿಯ ದಯಾನಂದ ಪೂಜಾರಿ, ಆರ್‌. ಎಸ್‌. ಕೋಟ್ಯಾನ್‌, ವತ್ಸಲಾ ಪೂಜಾರಿ, ಚಂದ್ರಹಾಸ್‌ ಸುವರ್ಣ, ಪಿ. ಎ. ಪೂಜಾರಿ, ಭಾರತಿ ಅಮೀನ್‌, ರಾಘು ಪೂಜಾರಿ, ರತ್ನಾ ಪೂಜಾರಿ, ಚಂದ್ರಶೇಖರ ಬಿ. ಎನ್‌., ವಿಶೇಷ ಆಮಂತ್ರಿತ ಸದಸ್ಯರು, ಯುವ ವಿಭಾಗದ ಸದಸ್ಯರು, ಮಹಿಳಾ ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

 ಚಿತ್ರ-ವರದಿ : ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.