ಕುಕ್ಕುಂದೂರು: ಮನೆಗೆ ನುಗ್ಗಿ ಮಹಿಳೆಯ ಕೊಲೆ


Team Udayavani, Jul 9, 2018, 9:05 AM IST

kole.jpg

 ಕಾರ್ಕಳ: ಕಾರ್ಕಳ ಕುಕ್ಕುಂದೂರು ಸಮೀಪದ ಅಯ್ಯಪ್ಪ ನಗರದ ಮನೆಯೊಂದರಲ್ಲಿ ಮಹಿಳೆಯನ್ನು ಕಡಿದು ಕೊಲೆಗೈದ ಘಟನೆ ನಡೆದಿದೆ.

ಪ್ಲೋರಿನ್‌ ಮಚಾದೋ (54)  ಕೊಲೆಯಾದ ಮಹಿಳೆ. ರವಿವಾರ ಮಧ್ಯಾಹ್ನದ ವೇಳೆಗೆ  ಕೊಲೆ ಕೃತ್ಯ ಬಹಿರಂಗವಾಗಿದೆ. ಮೃತದೇಹ ಬೆಡ್‌ಶೀಟ್‌ ಮುಚ್ಚಿದ ಸ್ಥಿತಿಯಲ್ಲಿತ್ತು. ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಕತ್ತಿಯಿಂದ ಕಡಿದು ಕೊಲೆಗೈದಿರಬಹುದು ಎಂದು ಶಂಕಿಸಲಾಗಿದೆ.

ಗಂಡಹೆಂಡತಿ ಪ್ರತ್ಯೇಕ ವಾಗಿದ್ದರು
ಮೃತ ಮಹಿಳೆಯು ಗಂಡನೊಂದಿಗೆ ವೈಮನಸ್ಸು ಹೊಂದಿದ್ದು, ಐದಾರು ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಗಂಡ ಮಾಳ ಸಮೀಪದ ಹುಕ್ರಟ್ಟೆಯಲ್ಲಿ ಮತ್ತು ಫ್ಲೋರಿನ್‌ ಕುಕ್ಕುಂದೂರಿನಲ್ಲಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಕಿರಿಯ ಮಗ ತಂದೆಯ ಜತೆಗೆ ಹಾಗೂ ಹಿರಿಯ ಮಗ ತಾಯಿಯ ಬಳಿ ಇದ್ದರು. ಶನಿವಾರ ರಜೆಯ ಹಿನ್ನೆಲೆಯಲ್ಲಿ ಹಿರಿಯ ಮಗನೂ ತಂದೆಯ ಮನೆಗೆ ತೆರಳಿದ್ದ. ಅಂದು ರಾತ್ರಿ ಮನೆಯಲ್ಲಿ ಫ್ಲೋರಿನ್‌ ಒಬ್ಬರೇ ಇದ್ದರು.  

ರವಿವಾರ ಫ್ಲೋರಿನ್‌ ಪ್ರಾರ್ಥನೆಗಾಗಿ ಚರ್ಚ್‌ಗೆ ಬಂದಿರಲಿಲ್ಲ. ಹೀಗಾಗಿ ಮಧ್ಯಾಹ್ನದ ವೇಳೆಗೆ ಇವರ ಸಂಬಂಧಿ ಮಹಿಳೆಯೊಬ್ಬರು ಮನೆಗೆ  ಬಂದಿದ್ದು,  ಆಗ ಕೊಲೆ  ಘಟನೆ ಬೆಳಕಿಗೆ ಬಂದಿದೆ.

ಬಡ್ಡಿ ವ್ಯವಹಾರ ಮುಳುವಾಯಿತೇ?
 ಫ್ಲೋರಿನ್‌ ಅವರು ಬಡ್ಡಿಗೆ ಹಣ ನೀಡುವ ವ್ಯವಹಾರ ನಡೆಸುತ್ತಿದ್ದರೆಂದು ಹೇಳಲಾಗುತ್ತಿದೆ. ಆದರೆ ಇತ್ತೀಚೆಗೆ  ವ್ಯವಹಾರದಲ್ಲಿ ನಷ್ಟ ಉಂಟಾಗಿತ್ತು. ಹೊರಗಡೆ ನೀಡಿದ್ದ ಹಣವೂ ಸರಿಯಾಗಿ ವಾಪಸ್‌ ಬರುತ್ತಿರಲಿಲ್ಲ.
ಈ ವ್ಯವಹಾರದಿಂದಲೇ ಕೊಲೆ ನಡೆಯಿತೇ ಎನ್ನುವ ಬಲವಾದ ಶಂಕೆ ಮೂಡಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಕುಮಾರ ಚಂದ್ರ, ಡಿವೈಎಸ್ಪಿ ಕುಮಾರಸ್ವಾಮಿ, ಕಾರ್ಕಳ ನಗರ ಠಾಣಾ ಪಿಎಸ್‌ಐ ನಂಜ ನಾಯ್ಕ, ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸರ ಸಂಪರ್ಕ
ಕೆಲವು ವರ್ಷಗಳಿಂದ ಫ್ಲೋರಿನ್‌ಗೆ ಪೊಲೀಸರ ಜತೆಗೆ  ಸಂಪರ್ಕವಿತ್ತು ಎಂದು ಹೇಳಲಾಗುತ್ತಿದೆ. ಬಡ್ಡಿಯ ಹಣದ ವಸೂಲಿಗಾಗಿ ಪೊಲೀಸರ ಸಂಪರ್ಕವಿತ್ತೇ ಅಥವಾ ಬೇರೇನಾದರೂ ಬೆದರಿಕೆ ಇದ್ದಿರಬಹುದೇ? ಅಥವಾ ಅದೆಲ್ಲವನ್ನೂ ಮೀರಿದ ಖಾಸಗಿ ಕಾರಣಗಳಿರಬಹುದೇ ಎಂಬ ಅನುಮಾನಗಳೂ ವ್ಯಕ್ತವಾಗಿವೆ.

ಬೊಬ್ಬೆ ಕೇಳಿಸಲಿಲ್ಲ
ಶನಿವಾರ ಅವರ ಮನೆಯಲ್ಲಿ ಒಬ್ಬರೇ ಇದ್ದರು. ಆದರೆ ಈ ಘಟನೆಗೆ ಸಂಬಂಧಿಸಿ ರಾತ್ರಿ ಯಾವುದೇ ಸುಳಿವು ಸಿಕ್ಕಿಲ್ಲ. ಮನೆಯಿಂದ ಬೊಬ್ಬೆಯೂ ಕೇಳಿಸಲಿಲ್ಲ ಎನ್ನುತ್ತಾರೆ ಸ್ಥಳೀಯರು.

ಟಾಪ್ ನ್ಯೂಸ್

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.