ತಾಯಿ ನೋಡಲು ಬನ್ನಂಜೆ ರಾಜಾ ಇಂದು ಮಲ್ಪೆಯ ಮನೆಗೆ ಭೇಟಿ


Team Udayavani, Jul 9, 2018, 9:11 AM IST

raja.jpg

ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜಾ ಅಲಿಯಾಸ್‌ ರಾಜೇಂದ್ರ ಪ್ರಸಾದ್‌ ಅನಾರೋಗ್ಯದಲ್ಲಿರುವ  ತಾಯಿಯನ್ನು ಭೇಟಿ ಮಾಡುವುದಕ್ಕಾಗಿ ನ್ಯಾಯಾಲಯದ ಅನುಮತಿ ಮೇರೆಗೆ ಜು. 8ರಂದು ಭಾರೀ ಪೊಲೀಸ್‌ ಭದ್ರತೆಯೊಂದಿಗೆ ಉಡುಪಿಗೆ ಆಗಮಿಸಿದ್ದು, ರಾತ್ರಿ ನಗರ ಠಾಣೆಯಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ ಮಲ್ಪೆ ಕಲ್ಮಾಡಿಯಲ್ಲಿರುವ ತಾಯಿಯನ್ನು ಪೊಲೀಸರು ಭೇಟಿ ಮಾಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬೆಳಗ್ಗೆ ಭಾರೀ ಭದ್ರತೆಯೊಂದಿಗೆ ಈತನನ್ನು ಕರೆತಂದ ಉಡುಪಿ ಪೊಲೀಸರು ಸಂಜೆ 6.45ರ ಸುಮಾರಿಗೆ ಉಡುಪಿ ಠಾಣೆ ತಲುಪಿದರು. ಬೆಂಗಾವಲು ವಾಹನಗಳು, ಗನ್‌ಮ್ಯಾನ್‌ಗಳ ಸಹಿತವಾದ ಭದ್ರತೆಯಲ್ಲಿ ಠಾಣೆಯ ಆವರಣದೊಳಕ್ಕೆ ಕರೆತರಲಾಗಿತ್ತು. ಠಾಣೆಯ ಮೆಟ್ಟಿಲುಗಳ ಬಳಿಯಲ್ಲಿಯೇ ಪೊಲೀಸ್‌ ವಾಹನದಿಂದ ಇಳಿಸಿ ಭಾರೀ ವೇಗದಲ್ಲೇ ಠಾಣೆಯೊಳಗೆ ಕರೆದೊಯ್ಯಲಾಯಿತು. ಠಾಣೆಯ ಸುತ್ತ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಬ್ಯಾರಿಕೇಡ್‌ಗಳನ್ನು ಅಳವಡಿಸಿ ಠಾಣೆಯ ಆವರಣಕ್ಕೆ ಪೊಲೀಸರನ್ನು ಹೊರತುಪಡಿಸಿ ಮಾಧ್ಯಮದವರು ಸಹಿತ ಇತರರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಟೀ ಶರ್ಟ್‌ ಧರಿಸಿದ್ದ ರಾಜಾ ಪೊಲೀಸರ ಜತೆ ಲಗುಬಗನೆ ಠಾಣೆಯೊಳಗೆ ತೆರಳಿದ. ಬನ್ನಂಜೆ ರಾಜಾನ ತಾಯಿಯ ಮನೆ ಪಕ್ಕದ ರಸ್ತೆಗಳಲ್ಲಿಯೂ ಬ್ಯಾರಿ ಕೇಡ್‌ಗಳನ್ನು ಅಳವಡಿಸಲಾಗಿದೆ.

ಸೋಮವಾರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ತಾಯಿಯನ್ನು ಭೇಟಿ ಮಾಡಲು ನ್ಯಾಯಾಲಯ ಅನುಮತಿ ನೀಡಿರುವುದರಿಂದ ಈ ಅವಧಿಯಲ್ಲಿ ಭೇಟಿ ಮಾಡಿಸುವ ಸಾಧ್ಯತೆ ಇದೆ. ಪರೋಲ್‌ನಲ್ಲಿ ಬಿಡುಗಡೆ ಮಾಡಲು ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದರೂ ಅದಕ್ಕೆ ಅವಕಾಶ ದೊರೆಯಲಿಲ್ಲ. ಈಗ ಪೊಲೀಸ್‌ ಭದ್ರತೆಯಲ್ಲಿ ಹಗಲಿನಲ್ಲಿ 12 ಗಂಟೆಗಳ ಅವಧಿಯಲ್ಲಿ ಭೇಟಿ ಮಾಡಲು ನ್ಯಾಯಾಲಯ ಅವಕಾಶ ನೀಡಿದೆ. ಹಾಗಾಗಿ ರಾತ್ರಿ ವೇಳೆ ಠಾಣೆಯಲ್ಲಿಯೇ ಇರಿಸಿಕೊಳ್ಳಲಾಗಿದೆ. ಭೇಟಿ ವೇಳೆ ತಾಯಿ ಜತೆ ಮಾತ್ರ ಮಾತನಾಡಲು ಅವಕಾಶ ನೀಡಲಾಗಿದೆ. ರಾತ್ರಿ ಪ್ರಯಾಣಕ್ಕೂ ಅವಕಾಶವಿಲ್ಲ. ಸಾರಿಗೆ ಮತ್ತು ಭದ್ರತಾ ವೆಚ್ಚವನ್ನು  ಬನ್ನಂಜೆ ರಾಜನೇ ಭರಿಸಬೇಕಾಗಿದೆ.  

ಕುಂದಾಪುರ ಡಿವೈಎಸ್‌ಪಿ ದಿನೇಶ್‌ ಕುಮಾರ್‌ ನೇತೃತ್ವದ ತಂಡ ರಾಜಾನನ್ನು ಉಡುಪಿಗೆ ಕರೆತಂದಿದೆ.
ಎಎಸ್‌ಪಿ ಕುಮಾರಚಂದ್ರ ಠಾಣೆಗೆ ಆಗಮಿಸಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದರು.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.