ಅಪಾಯದ ಮುನ್ಸೂಚನೆ ನೀಡಿದ ಕೈಪುಂಜಾಲು ಭಟತೋಟ ಸೇತುವೆ


Team Udayavani, Jul 10, 2018, 6:05 AM IST

0907kpe4.jpg

ಕಾಪು: ಭಾರೀ ಮಳೆ ಮತ್ತು ನೆರೆಯ ಕಾರಣದಿಂದಾಗಿ ಕೈಪುಂಜಾಲು ಭಟತೋಟ ಸೇತುವೆಯಲ್ಲಿ ಬಿರುಕು ಕಾಣಿಸಿದ್ದು, ಮಧ್ಯ ಭಾಗದ ಎರಡು ಪಿಲ್ಲರ್‌ಗಳು ನದಿಯೊಳಗೆ ಕುಸಿತಕ್ಕೊಳಗಾಗಿದ್ದು ಭಾರೀ ಅಪಾಯದ ಮುನ್ಸೂಚನೆಯನ್ನು ನೀಡಿದೆ.

ಕಾಪು ಪುರಸಭಾ ವ್ಯಾಪ್ತಿಯ ಉಳಿಯಾರಗೋಳಿ ಗ್ರಾಮದ ಕೈಪುಂಜಾಲು ಭಟತೋಟ ಸೇತುವೆಯ 2, 3 ಮತ್ತು 4ನೇ ಸ್ಲಾ Âಬ್‌ ಬಿರುಕು ಬಿಟ್ಟಿದ್ದು, ಮಧ್ಯದ ಪಿಲ್ಲರ್‌ ಭೂಮಿಯೊಳಗೆ ಕುಸಿದಿದೆ. ಸೋಮವಾರ ಸ್ಥಳಕ್ಕೆ ಭೇಟಿ ನೀಡಿ, ಸೇತುವೆ ಪರಿಶೀಲಿಸಿದ ತಹಶೀಲ್ದಾರ್‌ ಸೇತುವೆಯನ್ನು ಮೇಲೆ ಸಂಚಾರ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

1996ರಲ್ಲಿ ನಿರ್ಮಾಣಗೊಂಡಿದ್ದ ಕೈಪುಂಜಾಲು ಭಟತೋಟ ಸೇತುವೆಯು ಪಾಂಗಾಳ ಮತ್ತು ಮಟ್ಟು ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದು, ಸುಮಾರು 150ಕ್ಕೂ ಅಧಿಕ ಮನೆಗಳ ಜನತೆ ಇದನ್ನೇ ಪ್ರಧಾನ ಸಂಪರ್ಕ ಸೇತುವಾಗಿ ಬಳಸುತ್ತಿದ್ದಾರೆ. ಮಾತ್ರವಲ್ಲದೇ ಬೈಕ್‌, ರಿಕ್ಷಾ ಮತ್ತು ಕಾರುಗಳಲ್ಲಿ ಕರಾವಳಿ ತೀರ ಮತ್ತು ಮೀನುಗಾರಿಕೆಗೆ ತೆರಳುವ ಜನರು ಈ ಮಾರ್ಗದ ಮೂಲಕ ತೆರಳುತ್ತಿದ್ದರು.

ರವಿವಾರ ಕೈಪುಂಜಾಲು ಪರಿಸರದಲ್ಲಿನ ಮಳೆ ಹಾನಿ ಪರಿಶೀಲನೆಗೆ ಬಂದಿದ್ದ ತಹಶೀಲ್ದಾರ್‌ ಗುರುಸಿದ್ಧಯ್ಯ ಅವರು ಭಟತೋಟ ಸೇತುವೆಯ ಪರಿಸ್ಥಿತಿಯನ್ನು ಕಂಡು ಗುಣಮಟ್ಟ ಪರಿಶೀಲಿಸುವಂತೆ ಇಂಜಿನಿಯರ್‌ಗೆ ಆದೇಶ ನೀಡಿದ್ದರು. ರವಿವಾರ ಸಂಜೆ ಭೇಟಿ ನೀಡಿದ್ದ ಇಂಜಿನಿಯರ್‌ ಸೇತುವೆ ಕುರಿತಾಗಿ ಋಣಾತ್ಮಕ ವರದಿಯನ್ನು ನೀಡಿದ್ದು, ಅದರಂತೆ ತಾಲೂಕು ಆಡಳಿತವು ಸಂಚಾರ ನಿಷೇಧಿಸಿ ಆದೇಶ ಹೊರಡಿಸಿದೆ.

ಸೋಮವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್‌ ಗುರುಸಿದ್ಧಯ್ಯ ಮತ್ತು ಕಾಪು ಎಸ್ಸೆ$ç ನಿತ್ಯಾನಂದ ಗೌಡ ಅವರು ಸೇತುವೆಯ ಇಕ್ಕೆಲಗಳಲ್ಲಿ ಬ್ಯಾರಿಕೇಡ್‌ಗಳನ್ನು ಇರಿಸಿ ಜನರಲ್ಲಿ ಎಚ್ಚರಿಕೆ ಮೂಡಿಸುವ ಪ್ರಯತ್ನ ಮಾಡಿದ್ದಾರೆ.

ಸೇತುವೆ ಮಧ್ಯ ಭಾಗದ ಪಿಲ್ಲರ್‌ ಕುಸಿದು ಭೀತಿ ಹುಟ್ಟಿಸಿದ ಕಾರಣ, ಸೇತುವೆ ಮೇಲಿನ ಸಂಚಾರವನ್ನು ನಿಷೇಧಿಸಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮತ್ತು ಈ ಭಾಗದಲ್ಲಿ ಜನಸಂಚಾರಕ್ಕೆ ಅನುಕೂಲವಾಗುವಂತೆ ಶೀಘ್ರ ತಾತ್ಕಾಲಿಕ ವ್ಯವಸ್ಥೆಯನ್ನು ಮಾಡಿಕೊಡುವಂತೆ ಪುರಸಭೆ ಮತ್ತು ತಾಲೂಕು ಆಡಳಿತವನ್ನು ಆಗ್ರಹಿಸಿದ್ದಾರೆ.

ನೂತನ ಸೇತುವೆಗೆ ಶಿಲಾನ್ಯಾಸ ನಡೆದಿದೆ 
ಕೈಪುಂಜಾಲು ಭಟತೋಟದಲ್ಲಿ 1996ರಲ್ಲಿ ನಿರ್ಮಾಣಗೊಂಡಿದ್ದ ಸೇತುವೆಯು ಶಿಥಿವಾಗಿದ್ದರಿಂದ 1.60 ಕೋ. ರೂ. ವೆಚ್ಚದ ನೂತನ ಸೇತುವೆ ರಚನೆ ಕಾಮಗಾರಿಗೆ ಮಾಜಿ ಶಾಸಕ ವಿನಯಕುಮಾರ್‌ ಸೊರಕೆ ಅವರು ಕಳೆದ ಫೆಬ್ರವರಿ ತಿಂಗಳಲ್ಲಿ ಶಿಲಾನ್ಯಾಸ ನೆರವೇರಿಸಿದ್ದರು. ಆದರೆ ಎರಡೆರಡು ಚುನಾವಣೆ, ಮಳೆಗಾಲದ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗಿದೆ ಎಂದು ಪುರಸಭೆ ಎಂಜಿನಿಯರ್‌ ಹೇಳು ತ್ತಿದ್ದಾರೆ. ಸೇತುವೆ ಸಂಚಾರ ಬಂದ್‌ ಆಗಿರುವುದರಿಂದ ನಾವು ಇನ್ನು ದ್ವೀಪ ಪ್ರದೇಶದಲ್ಲಿ ವಾಸುಸುವರಂತಾಗುವ ಅನಿವಾರ್ಯತೆ ಎದುರಾಗಿದೆ ಎಂದು ಭಟತೋಟ ನಿವಾಸಿ ಹರೀಶ್‌ ಕುಮಾರ್‌ ತಿಳಿಸಿದ್ದಾರೆ.

ಆದಷ್ಟು ಶೀಘ್ರ ಸೇತುವೆ ನಿರ್ಮಾಣವಾಗಲಿ
ಹಿಂದೆ ಇಲ್ಲಿ ಮರದ ಸೇತುವೆಯಿತ್ತು. 22 ವರ್ಷಗಳ ಹಿಂದೆ ವಸಂತ ಸಾಲಿಯಾನ್‌ ಅವರು ಶಾಸಕರಾಗಿದ್ದಾಗ ಇಲ್ಲಿ ಕಾಂಕೀÅಟ್‌ ಪಿಲ್ಲರ್‌ಗಳ ಸಹಿತವಾದ ಸೇತುವೆ ರಚನೆಯಾಗಿತ್ತು. ಸೇತುವೆ ಮತ್ತು ರಸ್ತೆ ರಚನೆ ವೇಳೆ ನಾವು ಕೂಡಾ ಜಾಗ ನೀಡಿ ಸಹಕಾರ ನೀಡಿದ್ದೇವೆ. ಇಲ್ಲಿ ನಿರಂತರವಾಗಿ ವಾಹನಗಳು ಓಡಾಡುತ್ತಿವೆ. ನಾವೆಲ್ಲರೂ ಇದೇ ಸೇತುವೆಯನ್ನು ಬಳಕೆ ಮಾಡುತಿದ್ದೇವೆ. ಮೀನುಗಾರಿಕೆಗೆ ತೆರಳುವವರು, ಕೃಷಿ ಕೆಲಸ ನಡೆಸಲು, ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಈ ಸೇತುವೆ ತುಂಬಾ ಅನುಕೂಲಕರವಾಗಿದೆ. ಆದಷ್ಟು ಶೀಘ್ರ ಬದಲಿ ವ್ಯವಸ್ಥೆಯೊಂದಿಗೆ, ಸೇತುವೆ ನಿರ್ಮಾಣವಾಗಲಿ ಎಂದು ಸ್ಥಳೀಯರಾದ ದೇವಪುತ್ರ ಸೋನ್ಸ್‌, ಸಂಜೀವಿ, ರತ್ನಾವತಿ  ಆಗ್ರಹಿಸಿದ್ದಾರೆ.
– ಕೈಪುಂಜಾಲು ,
ಭಟತೋಟ ನಿವಾಸಿಗಳು

ಜನರ ಪ್ರಾಣ ರಕ್ಷಣೆಗಾಗಿ  ಸೇತುವೆ ಸಂಚಾರ ನಿಷೆೇಧ
ಭಾರೀ ಮಳೆಯ ಕಾರಣದಿಂದಾಗಿ ಕೈಪುಂಜಾಲು ಭಟತೋಟ ಸೇತುವೆ ಸಂಪುರ್ಣ ಜಲಾವೃತಗೊಂಡಿದ್ದರಿಂದಾಗಿ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಪುರಸಭೆಯ ಇಂಜಿನಿಯರ್‌ಗಳು ಸೇತುವೆ ಯಾವುದೇ ಸಂದರ್ಭದಲ್ಲೂ ಕುಸಿತಕ್ಕೊಳಗಾಗುವ ಭೀತಿಯಿದೆ ಎಂಬ ವರದಿ ನೀಡಿದೆ. ಆ ಕಾರಣದಿಂದಾಗಿ ಸೇತುವೆ ಮೇಲಿನ ಸಂಚಾರವನ್ನು ನಿಷೇಧಿಸಲಾಗಿದೆ. ಜನರ ಸಂಚಾರಕ್ಕೆ ತೋಂದರೆಯಾದರೂ, ಜನರ ಪ್ರಾಣ ರಕ್ಷಣೆ ನಮ್ಮ ಪ್ರಮುಖ ಕರ್ತವ್ಯವಾಗಿರುವುದರಿಂದ ಸಂಚಾರ ನಿಷೇಧ ತೀರ್ಮಾನ ಅಗತ್ಯವಾಗಿದೆ ಎಂದು ತಹಶೀಲ್ದಾರ್‌ ಗುರುಸಿದ್ಧಯ್ಯ ಹೇಳಿದ್ದಾರೆ.
– ಗುರುಸಿದ್ಧಯ್ಯ ,ಕಾಪು ತಹಶೀಲ್ದಾರ್‌

ಟಾಪ್ ನ್ಯೂಸ್

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.