ಮಳೆಗೆ ಕೊಚ್ಚಿ ಹೋದ ಶಿರ್ವ-ಕಟ್ಟಿಂಗೇರಿ-ಮೂಡುಬೆಳ್ಳೆ ಸಂಪರ್ಕ ರಸ್ತೆ


Team Udayavani, Jul 10, 2018, 6:00 AM IST

0907shirva1.jpg

ಶಿರ್ವ: ಜಿಲ್ಲೆಯಾದ್ಯಂತ ಶನಿವಾರ ಸುರಿದ ಮಹಾಮಳೆಗೆ ಶಿರ್ವ ಮಾಣಿಬೆಟ್ಟು ಗರಡಿಯ ಬಳಿ ಮೂಡುಬೆಳ್ಳೆ-ಕಟ್ಟಿಂಗೇರಿ-ಶಿರ್ವ ಸಂಪರ್ಕ ರಸ್ತೆಯು ಕೊಚ್ಚಿಹೋಗಿದ್ದು ರಸ್ತೆ ಸಂಪರ್ಕ ಕಡಿತಗೊಂಡು ಎರಡೂ ಗ್ರಾಮಗಳ ಜನರು ಸಂಚಾರಕ್ಕಾಗಿ ಪರದಾಡುತ್ತಿದ್ದಾರೆ. 

ಶಿರ್ವ ಮಾಣಿಬೆಟ್ಟು ಹಾಗೂ ಕಟ್ಟಿಂಗೇರಿ ಪರಿಸರದ ಜನ ನಿತ್ಯ ಕೆಲಸ ಕಾರ್ಯಗಳಿಗೆ ಹಾಗೂ ಶಾಲೆ ಕಾಲೇಜುಗಳಿಗೆ ಹೋಗಲು ಈ ರಸ್ತೆಯನ್ನೇ ಬಳಸುತ್ತಿದ್ದು ಈಗ ರಸ್ತೆ ಕಡಿತಗೊಂಡಿದ್ದು ಜನ ಅತ್ತಿತ್ತ ಸಾಗಲು ಪರದಾಟ ನಡೆಸುವಂತಾಗಿದೆ.ದಿನನಿತ್ಯಈ ಮಾರ್ಗದಲ್ಲಿ ಐದಾರು ಶಾಲಾ ವಾಹನಗಳು ಓಡಾಟ ನಡೆಸುತ್ತಿದ್ದು ರಸ್ತೆ ಕೊಚ್ಚಿ ಹೋಗಿದ್ದರಿಂದಾಗಿ ಜನರು ಮತ್ತು ಶಾಲಾ ವಿದ್ಯಾರ್ಥಿಗಳು ದೂರದ ಮಟ್ಟಾರು-ನಾಲ್ಕುಬೀದಿ ರಸ್ತೆಯನ್ನು ಬಳಸುವಂತಾಗಿದೆ. ಶಾಲಾ ವಾಹನಗಳು ಸಂಚರಿಸುವ ಸಮಯದಲ್ಲಿಯೇ ಈ ರಸ್ತೆ ಕುಸಿತಗೊಂಡಿದ್ದು ಶನಿವಾರ ಶಾಲೆಗೆ ರಜೆಯಿದ್ದುದರಿಂದ ಜರಗಬಹುದಾದ ಅನಾಹುತವೊಂದು ತಪ್ಪಿದಂತಾಗಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

ಅವೈಜ್ಞಾನಿಕ ಕಾಮಗಾರಿ
ಸುಮಾರು ಐದಾರು ವರ್ಷದ ಹಿಂದೆ ಜಿ.ಪಂ.ಅನುದಾನದಿಂದ ಈ ರಸ್ತೆ ನಿರ್ಮಾಣಗೊಂಡಿದ್ದು ರಭಸದಿಂದ ನೀರು ಹರಿಯುವ ತೋಡಿನಲ್ಲಿ ಸೇತುವೆ ನಿರ್ಮಾಣದ ಬದಲಿಗೆ ಸಿಮೆಂಟ್‌ಪೈಪ್‌ ಅಳವಡಿಸಿದ್ದರಿಂದಾಗಿ ರಸ್ತೆ ಕುಸಿದಿದೆ. ತೋಡಿನಲ್ಲಿ ರಭಸದಿಂದ ನೀರು ಹರಿಯುವ ಸ್ಥಳದಲ್ಲಿ ಸಂಕ ನಿರ್ಮಿಸದೆ ಸಿಮೆಂಟ್‌ಪೈಪ್‌ ಅಳವಡಿಸಿ ಪೈಪ್‌ನ ಮೇಲೆ ಜೇಡಿ ಮಣ್ಣು ಹಾಕಲಾಗಿದ್ದು ಅವೈಜ್ಞಾನಿಕವಾಗಿ ನಡೆಸಿದ ಕಾಮಗಾರಿ ರಸ್ತೆ ಕುಸಿಯಲು ಕಾರಣ ಎಂದು ಗ್ರಾಮಸ್ಥರು ದೂರಿದ್ದಾರೆ. 

ಸೂಚನಾ ಫಲಕವಿಲ್ಲ
ರಸ್ತೆ ಸಂಪರ್ಕ ಕಡಿತಗೊಂಡು ವಾಹನ ಸಂಚಾರ ನಡೆಸಲು ಸಾಧ್ಯವಾಗದಿದ್ದರೂ ಸ್ಥಳಿಯಾಡಳಿತ ಎಲ್ಲೂ ಸೂಚನಾ ಫಲಕ ಅಳವಡಿಸಿಲ್ಲ. ಗ್ರಾಮಸ್ಥರೇ ರಸ್ತೆಯ ಎರಡೂ ಬದಿ ಮರದ ತುಂಡು ಮತ್ತು ಗೆಲ್ಲುಗಳನ್ನಿಟ್ಟು ತಡೆ ಹಾಕಿದ್ದು ಸ್ಥಳಿಯಾಡಳಿತ ಕೈಕಟ್ಟಿ ಕುಳಿತಿದೆ. 

ಕಟ್ಟಿಂಗೇರಿ ಪರಿಸರದಿಂದ ಬರುವವರು ಮತ್ತು ಶಿರ್ವ ಪರಿಸರದಿಂದ ಹೋಗುವವರು ರಸ್ತೆ ಕಡಿತಗೊಂಡ ಸ್ಥಳಕ್ಕೆ ಹೋಗಿ ಹಿಂದಿರುಗಿ ಬರಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. 

ಸ್ಥಳೀಯ ಜಿ.ಪಂ.ಸದಸ್ಯ ವಿಲ್ಸನ್‌ ರೊಡ್ರಿಗಸ್‌ ಗ್ರಾ.ಪಂ.ಸದಸ್ಯ ಕೆ.ಆರ್‌ ಪಾಟ್ಕರ್‌ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದು ಜಿ.ಪಂ.ಎಂಜಿನಿಯರ್‌ ಅವರೊಂದಿಗೆ ಚರ್ಚಿಸಿ ಕೂಡಲೇ ಕಾಮಗಾರಿ ಪ್ರಾರಂಭಿಸಿ ಸಂಚಾರಕ್ಕೆ ಅನುವು ಮಾಡಿಕೊಡಲು ಶ್ರಮಿಸುವುದಾಗಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಗರಡಿಮನೆ ಆನಂದ ಪೂಜಾರಿ,ಜಯಕರ್‌, ಉಮೇಶ್‌ ಮತ್ತು ರಮೇಶ್‌ ಉಪಸ್ಥಿತರಿದ್ದರು.

ಸಂಕ ನಿರ್ಮಿಸಲು ಪ್ರಯತ್ನ
ಜಿ.ಪಂ.ಅನುದಾನದಿಂದ ಈಗಾಗಲೇ ಈ ರಸ್ತೆಗೆ 5. ಲ.ರೂ.ವೆಚ್ಚ ಮಾಡಿ ದುರಸ್ತಿಗೊಳಿಸಲಾಗಿದೆ. ರಸ್ತೆ ಸಂಪರ್ಕ ಕಡಿತಗೊಂಡ ಬಗ್ಗೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಅನುದಾನ ಬಿಡುಗಡೆಗೊಳಿಸಿ ಸಂಕ ನಿರ್ಮಿಸಲು ಪ್ರಯತ್ನಿಸುತ್ತೇವೆ.
– ವಿಲ್ಸನ್‌ ರೊಡ್ರಿಗಸ್‌, ಶಿರ್ವ ಜಿ.ಪಂ.ಸದಸ್ಯ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.