ಚಿರಂಜೀವಿ ಚಿತ್ರದಲ್ಲಿ ಸುದೀಪ್‌


Team Udayavani, Jul 10, 2018, 10:54 AM IST

sudeep-1.jpg

ಮೆಗಾಸ್ಟಾರ್‌ ಚಿರಂಜೀವಿ ಅವರ 151ನೇ ಸಿನಿಮಾವಾದ “ಸೈರಾ – ನರಸಿಂಹ ರೆಡ್ಡಿ’ ಸಿನಿಮಾದಲ್ಲಿ ಸುದೀಪ್‌ ನಟಿಸುತ್ತಾರಂತೆ ಎಂಬ ಸುದ್ದಿ ಆರಂಭದಲ್ಲಿ ಜೋರಾಗಿ ಕೇಳಿಬಂತು. ಕೆಲ ದಿನಗಳ ನಂತರ ಅವರು ನಟಿಸುತ್ತಿಲ್ಲ, ಇನ್ನೂ ಪಕ್ಕಾ ಆಗಿಲ್ಲವಂತೆ … ಹೀಗೆ ಅಂತೆ-ಕಂತೆಗಳು ಓಡಾಡಿದ್ದೇ ಓಡಾಡಿದ್ದು. ಆದರೆ, ಸುದೀಪ್‌ ಮಾತ್ರ ಈ ಬಗ್ಗೆ ಪ್ರತಿಕ್ರಿಯಿಸಿರಲಿಲ್ಲ. ಅವರ ಪಾಡಿಗೆ ಸಿನಿಮಾಗಳಲ್ಲಿ ಬಿಝಿಯಾಗಿದ್ದರು.

ಅತ್ತ ಕಡೆ ಚಿರಂಜೀವಿಯವರ “ಸೈರಾ’ ಚಿತ್ರದ ಚಿತ್ರೀಕರಣ ಜೋರಾಗಿ ಸಾಗುತ್ತಿದೆ. ಸಹಜವಾಗಿಯೇ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿತ್ತು. “ನಮ್‌ ಬಾಸು ಆ್ಯಕ್ಟ್ ಮಾಡ್ತಾರೋ, ಇಲ್ವೋ’ ಎಂದು ಲೆಕ್ಕಾಚಾರ ಹಾಕುತ್ತಿದ್ದರು. ಹೀಗಿರುವಾಗಲೇ ಸುದೀಪ್‌ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ತಾನು “ಸೈರಾ’ ಸಿನಿಮಾದಲ್ಲಿ ನಟಿಸುತ್ತಿರುವುದಾಗಿ ಹೇಳುವ ಮೂಲಕ ಅಭಿಮಾನಿಗಳನ್ನು ಸಂತೋಷಪಡಿಸಿದ್ದಾರೆ. 

ಇಷ್ಟು ದಿನ ಸುದೀಪ್‌ ನಟಿಸುತ್ತಾರೋ, ಇಲ್ಲವೋ ಎಂಬ ಗೊಂದಲಗಳಿಗೆ ಈ ಮೂಲಕ ತೆರೆಬಿದ್ದಿದೆ. “ಸೈರಾ ಚಿತ್ರದಲ್ಲಿ ನಾನು ಲೆಜೆಂಡ್‌ ಮೆಗಾಸ್ಟಾರ್‌ ಚಿರಂಜೀವಿಯವರ ಜೊತೆ ತೆರೆಹಂಚಿಕೊಳ್ಳುತ್ತಿದ್ದೇನೆ’ ಎಂದು ಟ್ವೀಟ್‌ ಮಾಡಿದ್ದಾರೆ ಸುದೀಪ್‌. ಈ ಮೂಲಕ ತೆಲುಗಿನ ಬಹುನಿರೀಕ್ಷಿತ ಹಾಗೂ ದೊಡ್ಡ ಬಜೆಟ್‌ನ ಸಿನಿಮಾವೊಂದರ ಭಾಗವಾಗಿದ್ದಾರೆ ಸುದೀಪ್‌. ಅಂದಹಾಗೆ, ಇದು ಸುದೀಪ್‌ ಅವರ ಚೊಚ್ಚಲ ಐತಿಹಾಸಿಕ ಸಿನಿಮಾ.

ಈ ಎಲ್ಲಾ ಕಾರಣಗಳಿಂದಾಗಿ ಸುದೀಪ್‌ ಎಕ್ಸೆ„ಟ್‌ ಆಗಿರುವುದು ಸುಳ್ಳಲ್ಲ. ಚಿತ್ರವನ್ನು ಸುರೇಂದ್ರ ರೆಡ್ಡಿ ನಿರ್ದೇಶಿಸುತ್ತಿದ್ದಾರೆ. ಚಿತ್ರದ ಪಾತ್ರವೊಂದಕ್ಕೆ ಸುದೀಪ್‌ ಇದ್ದರೇನೇ ಚೆಂದ ಎಂಬುದು ನಿರ್ದೇಶಕರ ಕನಸಾಗಿತ್ತಂತೆ. ಆದರೆ, ಆರಂಭದಲ್ಲಿ ಡೇಟ್ಸ್‌ ಸಮಸ್ಯೆಯಿಂದ ಸುದೀಪ್‌ ಆ ಚಿತ್ರದಲ್ಲಿ ನಟಿಸುವ ಬಗ್ಗೆ ಗೊಂದಲವಿತ್ತು. ಈಗ ಸುದೀಪ್‌, “ಪೈಲ್ವಾನ್‌’, “ಕೋಟಿಗೊಬ್ಬ-3′ ಚಿತ್ರಗಳ ಒಂದೊಂದು ಶೆಡ್ನೂಲ್‌ ಮುಗಿಸಿಕೊಟ್ಟಿದ್ದಾರೆ.

ಹೀಗಾಗಿ ಡೇಟ್ಸ್‌ ಸಮಸ್ಯೆ ಕೂಡಾ ಬಗೆಹರಿದು, ಸುದೀಪ್‌ “ಸೈರಾ’ ತಂಡ ಸೇರಿಕೊಂಡಿದ್ದಾರೆ. ಅವರ ಪಾತ್ರ ಪ್ರಮುಖವಾಗಿದ್ದು, ಕನ್ನಡ ಹಾಗೂ ತೆಲುಗು ಮಾತನಾಡುವ ಪಾತ್ರವಾಗಿರಲಿದೆ ಎಂಬ ಮಾಹಿತಿ ಇದೆ. ಈಗಾಗಲೇ ಸುದೀಪ್‌ “ಈಗ’ ಸೇರಿದಂತೆ ಕೆಲವು ತೆಲುಗು ಸಿನಿಮಾಗಳಲ್ಲಿ ನಟಿಸಿ, ತೆಲುಗಿನಲ್ಲಿ ತಮ್ಮದೇ ಆದ ಅಭಿಮಾನಿ ವರ್ಗ ಹುಟ್ಟುಹಾಕಿದ್ದಾರೆ.

ಅಂದಹಾಗೆ, ಸ್ವತಂತ್ರ ಹೋರಾಟಗಾರ ಉಯ್ಯಲವಾಡು ನರಸಿಂಹ ರೆಡ್ಡಿಯವರ ಜೀವನಚರಿತ್ರೆಯನ್ನು ಆಧರಿಸಿ ಈ ಸಿನಿಮಾ ಮಾಡುತ್ತಿದ್ದು, ಚಿತ್ರವನ್ನು ರಾಮ್‌ಚರಣ್‌ ತೇಜಾ ನಿರ್ಮಾಣ ಮಾಡುತ್ತಿದ್ದಾರೆ. ಸದ್ಯ ಸುದೀಪ್‌ “ಕೋಟಿಗೊಬ್ಬ-3’ಯಲ್ಲಿ ಬಿಝಿ ಇದ್ದು, ವಿದೇಶದಲ್ಲಿನ ಶೂಟಿಂಗ್‌ ಮುಗಿಸಿದ್ದಾರೆ. ಎಡಿಟಿಂಗ್‌ ವರ್ಶನ್‌ ನೋಡಿದ್ದು, ಚೆನ್ನಾಗಿ ಮೂಡಿಬರುತ್ತಿದೆ ಎಂದು ಖುಷಿ ವ್ಯಕ್ತಪಡಿಸಿದ್ದಾರೆ. 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.