ಕರ್ನಾಟಕವನ್ನು ಉಡ್ತಾ ಪಂಜಾಬ್ ಮಾಡಲು ಬಿಡುವುದಿಲ್ಲ : ಡಿಸಿಎಂ ಪರಂ
Team Udayavani, Jul 10, 2018, 12:20 PM IST
ಬೆಂಗಳೂರು: ಬೆಂಗಳೂರನ್ನಾಗಲಿ,ಕರ್ನಾಟಕವನ್ನಾಗಲಿ ‘ಉಡ್ತಾ ಪಂಜಾಬ್’ ಮಾಡಲು ಬಿಡುವುದಿಲ್ಲ ಎಂದು ಉಪಮುಖ್ಯಮಂತ್ರಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ವಿಧಾನಸಭೆಯಲ್ಲಿ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ನ ಸದಸ್ಯ ಪ್ರತಾಪ್ಚಂದ್ರ ಶೆಟ್ಟಿ ಅವರ ಪ್ರಶ್ನೆಗೆ ಉತ್ತರ ನೀಡಿದ ಡಿಸಿಎಂ ಕರ್ನಾಟಕದಲ್ಲಿ ಯಾವುದೇ ಮಾದಕ ದೃವ್ಯಗಳ ಜಾಲ ಬೆಳೆಯಲು ಬಿಡುವುದಿಲ್ಲ. ಕಠಿಣ ಕ್ರಮ ಕೈಗೊಂಡಿದ್ದೇವೆ. ಈ ಬಗ್ಗೆ ಪೊಲೀಸ್ ಇಲಾಖೆ ಎಚ್ಚರಿಕೆ ವಹಿಸಿದೆ. ನಮ್ಮ ಸಮ್ಮಿಶ್ರ ಸರ್ಕಾರ ಬಂದ ಬಳಿಕ 56 ಪ್ರಕರಣಗಳನ್ನು ಬಯಲಿಗೆಳೆದಿದ್ದೇವೆ.
ವಿದೇಶಕ್ಕೆ ಮಾತ್ರೆ ರೂಪದಲ್ಲಿ ಸಾಗಾಟ ಮಾಡಲು ಸಿದ್ದವಾಗಿರಿಸಿದ್ದ 5 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್