ಪ್ರವಚನ ಸ್ಥಳ ವೀಕ್ಷಣೆ
Team Udayavani, Jul 10, 2018, 12:21 PM IST
ಬಸವನಬಾಗೇವಾಡಿ: ಪಟ್ಟಣದ ಐತಿಹಾಸಿಕ ಬಸವೇಶ್ವರ (ಮೂಲ ನಂದೀಶ್ವರ) ಜಾತ್ರೆ ಪ್ರಯುಕ್ತ ಶ್ರಾವಣ ಮಾಸದಲ್ಲಿ ಪಟ್ಟಣದ ಬಸವೇಶ್ವರ ದೇವಾಲಯ ಅಂತಾರಾಷ್ಟ್ರೀಯ ಶಾಲಾ ಆವರಣದಲ್ಲಿ ನಡೆಯಲಿರುವ ಪ್ರವಚನದ ಸ್ಥಳವನ್ನು ನಿಜಗುಣಾನಂದ ಸ್ವಾಮೀಜಿ ಸೇರಿದಂತೆ ಗಣ್ಯರು ವೀಕ್ಷಿಸಿದರು.
ನಂತರ ಮಾತನಾಡಿದ ಮುಖಂಡರಾದ ಈರಣ್ಣ ಪಟ್ಟಣಶೆಟ್ಟಿ ಹಾಗೂ ಬಸವರಾಜ ಗೊಳಸಂಗಿ, ಪ್ರತಿ ವರ್ಷದಂತೆ ಈ ವರ್ಷದ ಬಸವೇಶ್ವರ ಜಾತ್ರೆಯನ್ನು ಅದ್ಧೂರಿಯಾಗಿ ಅಚರಣೆ ಮಾಡಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆಗಸ್ಟ್ 12ರಿಂದ ನಿಜಗುಣಾನಂದ ಸ್ವಾಮೀಜಿ ಅವರು ಒಂದು ತಿಂಗಳವರೆಗೆ ಪ್ರವಚನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಪ್ರವಚನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಈ ವೇಳೆ ಸಾಹಿತಿ ಲ.ರು. ಗೊಳಸಂಗಿ, ಎಪಿಎಂಸಿ ನಿರ್ದೇಶಕ ಶೇಖರ ಗೊಳಸಂಗಿ, ವೈ.ಡಿ. ನಾಯ್ಕೋಡಿ, ಉಮೇಶ ಹಾರಿವಾಳ, ಸಂಗಪ್ಪ ವಾಡೇದ, ಅನಿಲ ಪವಾರ, ಮಲ್ಲೇಶಿ ಕಡಕೋಳ, ಸುಭಾಷ್ ಚಿಕ್ಕೊಂಡ, ಶೇಖರಗೌಡ ಪಾಟೀಲ, ಬಸವರಾಜ ನಾಯ್ಕೋಡಿ, ಶಿವಾನಂದ ತೊಳನೂರ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!