ಅಮ್ಮನೊಂದಿಗೆ ದಿನ ಕಳೆದ ಬನ್ನಂಜೆ ರಾಜಾ


Team Udayavani, Jul 10, 2018, 12:24 PM IST

raja.jpg

ಮಲ್ಪೆ: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ಭೂಗತ ಪಾತಕಿ ಬನ್ನಂಜೆ ರಾಜಾ (ರಾಜೇಂದ್ರ ) ಸೋಮವಾರ ಮಲ್ಪೆಗೆ ಬಂದು ಅನಾರೋಗ್ಯದಲ್ಲಿರುವ ತನ್ನ ಅಮ್ಮನನ್ನು ಭೇಟಿಯಾಗಿ ತಾಯಿಯ ಆರೋಗ್ಯವಿಚಾರಿಸಿದ್ದಾನೆ.

ಮಲ್ಪೆ ಸಸಿತೋಟದಲ್ಲಿರುವ ಸ್ವಗೃಹಕ್ಕೆ ಆತನನ್ನು ಪೊಲೀಸರು ಬಿಗು ಭದ್ರತೆಯಲ್ಲಿ ಕರೆತಂದಿದ್ದರು. ಅನಾರೋಗ್ಯದಿಂದಿರುವ ತಾಯಿಯನ್ನು ನೋಡಲು ಅವಕಾಶ ಕಲ್ಪಿಸಬೇಕು ಎಂಬ ಆತನ ಮನವಿಗೆ ಸ್ಪಂದಿಸಿ ನ್ಯಾಯಾಲಯವು ಮಾನವೀಯ ನೆಲೆಯಲ್ಲಿ ಅನುಮತಿ ನೀಡಿದೆ. ಬೆಳಗ್ಗೆ 9ರಿಂದ ಸಂಜೆ 6 ಗಂಟೆ ವರೆಗೆ ತಾಯಿ ಜತೆ ಇರಲು ವ್ಯವಸ್ಥೆ ಮಾಡಲಾಗಿತ್ತು.

ಮನೆಮಂದಿ ಜತೆಯಲ್ಲಿ…
ಫಿಶರೀಸ್‌ ಶಾಲಾ ಸಭಾಭವನದ ಮುಂಭಾಗದ ರಸ್ತೆಯ ಮೂಲಕ ಬೆಳಗ್ಗೆ 9 ಗಂಟೆಗೆ ಬಿಗು ಭದ್ರತೆಯಲ್ಲಿ ರಾಜಾನನ್ನು ಮನೆಗೆ ಕರೆತರಲಾಯಿತು. ರಾಜಾ ವಾಹನದಿಂದ ಇಳಿದವನೇ ನೇರ ತಾಯಿ ಬಳಿಸಾರಿ ನಮಸ್ಕರಿಸಿ ಆರೋಗ್ಯ ವಿಚಾರಿಸಿದ. ಬಳಿಕ ಹೊರಗೆ ಇರುವ ಕುಟುಂಬದ ದೈವದ ಗುಡಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ. ಬೆಳಗ್ಗಿನ ಉಪಾಹಾರವನ್ನು ಪೊಲೀಸರೇ ತರಿಸಿದ್ದು ಅದನ್ನು ಪರೀಕ್ಷೆಗೊಳಪಡಿಸಿ ನೀಡಲಾಯಿತು.

ಮಧ್ಯಾಹ್ನ ಮನೆಯಲ್ಲೇ ತಯಾರಿಸಿದ ಕೋಳಿ ರೊಟ್ಟಿ, ಮೀನಿನ ಊಟವನ್ನು ಕುಟುಂಬದವರ ಜತೆಯಲ್ಲಿ ಕುಳಿತು ಸವಿದ. ಮನೆಯಲ್ಲಿ ತಂದೆ ಸುಂದರ ಶೆಟ್ಟಿಗಾರ್‌, ತಾಯಿ ನಿವೃತ್ತ ಶಿಕ್ಷಕಿ ವಿಲಾಸಿನಿ, ಒಬ್ಬ ಸಹೋದರ, ಇಬ್ಬರು ಅತ್ತಿಗೆಯರು ಮತ್ತವರ ಮಕ್ಕಳು ಹಾಗೂ ಬೆಳಗ್ಗೆಯಷ್ಟೇ ಬೆಂಗಳೂರಿನಿಂದ ಬಂದಿದ್ದ ರಾಜನ ಪತ್ನಿ ಮತ್ತು ಇಬ್ಬರು ಮಕ್ಕಳು ಜತೆಯಲ್ಲಿದ್ದರು.

ಎಸ್ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಕುಮಾರಚಂದ್ರ ಮನೆಗೆ ಭೇಟಿ ನೀಡಿದ್ದಾರೆ. ಸಂಜೆ 6ರ ಬಳಿಕ ಭದ್ರತೆಯಲ್ಲಿ ಉಡುಪಿ ನಗರ ಠಾಣೆಗೆ ಕರೆದೊಯ್ಯಲಾಯಿತು. ರಾತ್ರಿ ಠಾಣೆಯಲ್ಲೇ ಇಟ್ಟುಕೊಂಡು ಮಂಗಳವಾರ ಬೆಳಗ್ಗೆ ವೈದಕೀಯ ಪರೀಕ್ಷೆ ನಡೆಸಿ ಅಲ್ಲಿಂದ ಬೆಳಗಾವಿ ಜೈಲಿಗೆ ಕರೆದೊಯ್ಯಲಾಗುವುದು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

1995ರ ಅನಂತರ, 2015ರ ಫೆಬ್ರವರಿಯಲ್ಲಿ ಸೌತ್‌ ಆಫ್ರಿಕಾದ ಮೊರಕ್ಕೋದಲ್ಲಿ ಬಂಧನಕ್ಕೊಳಗಾದ ಸಂದರ್ಭ ವಿಚಾರಣೆಯ ಸಲುವಾಗಿ ಪೊಲೀಸರ ಜತೆ ಒಂದು ಸಲ ಮನೆಗೆ ಬಂದ  ವೇಳೆ  ತಾಯಿಯನ್ನು ನೋಡಿದ್ದು ಬಿಟ್ಟರೆ ಬಳಿಕ ತಾಯಿ – ಮಗನ ಭೇಟಿ ಇದೇ ಮೊದಲು ಎನ್ನಲಾಗಿದೆ.

ಸಹಪಾಠಿಗಳಿಗೆ ನಿರಾಸೆ
ಬನ್ನಂಜೆ ರಾಜಾ ಪ್ರೌಢಶಿಕ್ಷಣವನ್ನು ಮನೆ ಸಮೀಪದ ಫಿಶರೀಸ್‌ ಶಾಲೆಯಲ್ಲಿ ಪೂರೈಸಿದ್ದು, ಅಪಾರ ಸ್ನೇಹಿತರನ್ನು ಹೊಂದಿದ್ದ. ಆತನನ್ನು ನೋಡಲು ಸಹಪಾಠಿಗಳು, ನೆರೆಹೊರೆಯವರು, ಗೆಳೆಯರು ಬೆಳಗ್ಗಿನಿಂದಲೇ ಮನೆಯತ್ತ ಬರುತ್ತಿದ್ದರು. ಒಂದಿಬ್ಬರು ಹತ್ತಿರದ ಸಂಬಂಧಿಗಳಿಗೆ ಮಾತ್ರ ಗೇಟಿನ ಹೊರಗೆ ನಿಂತು ರಾಜಾನೊಂದಿಗೆ ಮಾತನಾಡಲು ಅವಕಾಶ ನೀಡಿದರು.

ಮನೆಯಲ್ಲಿ ಬಿಗಿ ಭದ್ರತೆ
ರಾಜನ ಆಗಮನದ ಹಿನ್ನೆಲೆಯಲ್ಲಿ ಮನೆಯ ಒಳಗೂ ಸೇರಿದಂತೆ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಸುತ್ತ ಸಿಸಿ ಕೆಮರಾ ಅಳವಡಿಸಲಾಗಿತ್ತು. 50 ಮೀ. ದೂರದಲ್ಲಿ ಬ್ಯಾರಿಕೇಡ್‌ ಅಳವಡಿಸಿ ಪೊಲೀಸರ ಹೊರತು ಮಾಧ್ಯಮ ಸಹಿತ ಯಾರಿಗೂ ಪ್ರವೇಶ ಇರಲಿಲ್ಲ. ವೃತ್ತ ನಿರೀಕ್ಷಕ ಮಂಜನಾಥ್‌ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದ್ದು, ಜಿಲ್ಲಾ ಶಸಸ್ತ್ರ ಮೀಸಲು ಪಡೆ, ಕೆಎಸ್‌ಆರ್‌ಪಿ, ಸಿವಿಲ್‌ ಪೊಲೀಸರನ್ನು ನಿಯೋಜಿಸಲಾಗಿತ್ತು.

ಟಾಪ್ ನ್ಯೂಸ್

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.