ಥಾಣೆ ಬಂಟ್ಸ್ ಅ.: ಶೈಕ್ಷಣಿಕ ನೆರವು ವಿತರಣೆ ಸಮಾರಂಭಕ್ಕೆ ಚಾಲನೆ
Team Udayavani, Jul 10, 2018, 4:20 PM IST
ಥಾಣೆ: ಥಾಣೆ ಬಂಟ್ಸ್ ಅಸೋಸಿಯೇಶನ್ ಇದರ ವಾರ್ಷಿಕ ಶೈಕ್ಷಣಿಕ ನೆರವು ವಿತರಣೆ ಸಮಾರಂಭವು ಜು. 7 ರಂದು ಅಪರಾಹ್ನ 4 ರಿಂದ ಥಾಣೆ ಪಶ್ಚಿಮದ ಟಿಪ್ಟಾಪ್ ಪ್ಲಾಜಾ ಸಮೀಪದ ಎಲ್. ಬಿ. ಎಸ್. ಮಾರ್ಗದಲ್ಲಿರುವ ಹೊಟೇಲ್ ವುಡ್ಲ್ಯಾಂಡ್ ರೀಟ್ರೀಟ್ ಸಭಾಗೃಹದಲ್ಲಿ ಜರಗಿತು.
ಥಾಣೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ಕುಶಲ್ ಸಿ. ಭಂಡಾರಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಈಸ್ಟ್ವೆಲ್ ಇಂಡಸ್ಟಿÅàಸ್ ಪ್ರೈವೇಟ್ ಲಿಮಿಟೆಡ್ ಇದರ ಮುಖ್ಯ ಆಡಳಿತ ನಿರ್ದೇಶಕ ಪ್ರಭಾಕರ ಜೆ. ಶೆಟ್ಟಿ, ಗೌರವ ಅತಿಥಿಗಳಾಗಿ ವಿ. ಕೆ. ಗ್ರೂಪ್ ಆಫ್ ಕಂಪೆನೀಸ್ ಇದರ ಮುಖ್ಯ ಆಡಳಿತ ನಿರ್ದೇಶಕ ಕೆ. ಎಂ. ಶೆಟ್ಟಿ, ವಿವೇಕ್ ಕಾಲೇಜ್ ಆಫ್ ಕಾಮರ್ಸ್ ಮುಂಬಯಿ ಇದರ ಪ್ರಾಂಶುಪಾಲೆ ಡಾ| ವಿಜೇತಾ ಎಸ್. ಶೆಟ್ಟಿ ಇವರು ಉಪಸ್ಥಿತರಿದ್ದು ಸಮಾರಂಭವನ್ನು ದೀಪಪ್ರಜ್ವಲಿಸಿ ಉದ್ಘಾಟಿಸಿದರು.
ಅಸೋಸಿಯೇಶನ್ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷರುಗಳಾದ ಸೀತಾರಾಮ ಜೆ. ಶೆಟ್ಟಿ ಮತ್ತು ಜತೆ ಕಾರ್ಯಾಧ್ಯಕ್ಷ ಸುನೀಲ್ ಆಳ್ವ ಅವರ ಮುಂದಾಳತ್ವದಲ್ಲಿ ನಡೆದ ಪ್ರಸ್ತುತ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ ಮತ್ತು ಧನ ಸಹಾಯ ವಿತರಣೆ ಸಮಾರಂಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ವೇಣುಗೋಪಾಲ್ ಎಲ್. ಶೆಟ್ಟಿ, ಗೌರವ ಕಾರ್ಯದರ್ಶಿ ಸುನೀಲ್ ಜೆ. ಶೆಟ್ಟಿ, ಗೌರವ ಕೋಶಾಧಿಕಾರಿ ಭಾಸ್ಕರ ಎನ್. ಶೆಟ್ಟಿ, ಜತೆ ಕಾರ್ಯದರ್ಶಿ ಅಶೋಕ್ ಎಂ. ಶೆಟ್ಟಿ, ಜತೆ ಕೋಶಾಧಿಕಾರಿ ಚಂದ್ರಶೇಖರ್ ಎಸ್. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಮತಿ ಕೆ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ರಂಜನ್ ಆರ್. ಶೆಟ್ಟಿ, ಸಂಸ್ಥೆಯ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸಂಸ್ಥಾಪಕರು, ಮಾಜಿ ಅಧ್ಯಕ್ಷರು ಉಪಸ್ಥಿತರಿದ್ದರು.
ಚಿತ್ರ-ವರದಿ :ಸುಭಾಷ್ ಶಿರಿಯಾ