ಸಮನ್ವಯ ಸಮಿತಿ ಅಧ್ಯಕ್ಷರಿಗೆ ಕೊಠಡಿ ಕೊಡಬಹುದೆ: ಶೆಟ್ಟರ್ ಪ್ರಶ್ನೆ
Team Udayavani, Jul 11, 2018, 6:00 AM IST
ವಿಧಾನಸಭೆ: ಸಮನ್ವಯ ಸಮಿತಿ ಅಧ್ಯಕ್ಷರಿಗೆ ವಿಧಾನ ಸೌಧದಲ್ಲಿ ಕೊಠಡಿ ಕೊಡಲು ಅವಕಾಶವಿದೆಯೇ? ಸಮನ್ವಯ ಸಮಿತಿ ಅಧ್ಯಕ್ಷರ ಹುದ್ದೆಯ ಬಗ್ಗೆ ಸರ್ಕಾರಿಂದ ಅಧಿಸೂಚನೆ ಆಗಿದೆಯೇ? ಎಂಬ ಪ್ರಶ್ನೆ ಸದನದಲ್ಲಿ ಉದ್ಭವವಾಯಿತು. ಬಜೆಟ್ ಮೇಲಿನ ಚರ್ಚೆಯಲ್ಲಿ ಮಂಗಳವಾರ ಮಾತನಾಡಿದ ಬಿಜೆಪಿಯ ಜಗದೀಶ ಶೆಟ್ಟರ್, ಮಾಜಿ ಮುಖ್ಯಮಂತ್ರಿಗಳಿಗೆ ವಿಧಾನಸೌಧದಲ್ಲಿ ಕೊಠಡಿ ಕೊಡುವುದಾದರೆ ಎಲ್ಲರಿಗೂ
ಕೊಡಿ. ಮಾಜಿ ಮಂತ್ರಿಗಳಿಗೂ ಕೊಡಿ. ಜನರು ಅವರ ಭೇಟಿಗೂ ಬರುತ್ತಾರೆ ಎಂದು ಸರ್ಕಾರಕ್ಕೆ ವ್ಯಂಗ್ಯಭರಿತ ಸಲಹೆ ನೀಡಿದರು.
ಇದು ಸಿದ್ದರಾಮಯ್ಯ ಅವರ ವೈಯಕ್ತಿಕ ವಿಚಾರವಲ್ಲ. ಸಮನ್ವಯ ಸಮಿತಿ ಅಧ್ಯಕ್ಷರಿಗೆ ಕೊಠಡಿ ಕೊಡಬಹುದೇ ಎಂಬುದು ಪ್ರಶ್ನೆ. ಯುಪಿಎ ಅಧ್ಯಕ್ಷ ಹುದ್ದೆಗೆ ಮಾನ್ಯತೆ ನೀಡಲಾಗಿತ್ತು. ಇಲ್ಲೂ ಅದೇ ರೀತಿ ಮಾನ್ಯತೆ ನೀಡಲಾಗಿದೆಯೇ? ಸಮನ್ವಯ ಸಮಿತಿ ಅಧ್ಯಕ್ಷರಿಗೆ ಕೊಠಡಿ ನೀಡುವ ಬಗ್ಗೆ ಸರ್ಕಾರದಿಂದ ನಿರ್ಣಯ ಆಗಿದೆಯೇ ಎಂದು ಪ್ರಶ್ನಿಸಿದರು. ಈ ವಿಚಾರ ಪ್ರಸ್ತಾಪವಾದಾಗ ಆಡಳಿತ ಪಕ್ಷದ ಸಾಲಿನಲ್ಲಿ ಮೂವರು ಸಚಿ
ವರು, ಬೆರಳೆಣಿಕೆಯಷ್ಟು ಶಾಸಕರು ಮಾತ್ರ ಇದ್ದುದನ್ನು ಗಮನಿಸಿದ ಬಿಜೆಪಿಯ ಅರವಿಂದ ಲಿಂಬಾವಳಿ, ನೀವು ಯಾರಿಗೆ ಈ ವಿಚಾರ ಹೇಳುತ್ತಿದ್ದೀರಿ ಎಂದು ಶೆಟ್ಟರ್ ಅವರನ್ನು ಪ್ರಶ್ನಿಸಿ ಸರ್ಕಾರವನ್ನು ಚುಚ್ಚಿದರು. ಸಚಿವ ಕೃಷ್ಣಬೈರೇಗೌಡ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಅವರಿಗೆ ಸಂಪುಟ ದರ್ಜೆ ಸ್ಥಾನ ನೀಡುವುದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ವ್ಯಾಪ್ತಿಗೆ ಬರುವುದರಿಂದ ಅಲ್ಲಿಂದ ಮಾಹಿತಿ ಪಡೆದು ಸದನಕ್ಕೆ ನೀಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ