ಮುಂದುವರಿದ ವರ್ಷಧಾರೆ: ಕೃಷಿ ಚುರುಕು


Team Udayavani, Jul 12, 2018, 3:15 PM IST

chikk-b-2.gif

ಚಿಕ್ಕಬಳ್ಳಾಪುರ: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ವರ್ಷಧಾರೆ ಮುಂದುವರಿ ದಿದ್ದು, ಕೃಷಿ ಚಟುವಟಿಕೆಗಳು ಜಿಲ್ಲಾದ್ಯಂತ ಚುರುಕಗೊಂಡಿವೆ. ಕಳೆದ ಮೇ ತಿಂಗಳಲ್ಲಿ ಕಾಣಿಸಿಕೊಂಡಿದ್ದ ಮಳೆ ಜೂನ್‌ ತಿಂಗಳ ಪೂರ್ತಿ ಕಾಣಸಿಕೊಳ್ಳದೇ ರೈತರು ತೀವ್ರ ಕಂಗಾಲಾಗಿದ್ದರು. ಅದರಲ್ಲೂ ಬಿತ್ತನೆ ಸಮಯಲ್ಲಿ ಮಳೆ ಕೈ ಕೊಟ್ಟಿದ್ದರಿಂದ ಈ
ಬಾರಿ ಬರ ಆವರಿಸುವ ಆತಂಕದಲ್ಲಿ ಅನ್ನದಾತರು ಇದ್ದರು.

ಕಳೆದ ಮಂಗಳವಾರದಿಂದ ಜಿಲ್ಲೆಯಲ್ಲಿ ಮಳೆರಾಯನ ಕೃಪೆ ಮುಂದುವರಿದಿದ್ದು, ಅನ್ನದಾತದಲ್ಲಿ ಸಂತಸ ತಂದಿದೆ. ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದೇ ಬಿತ್ತನೆ ಪ್ರಮಾಣ ಭಾರೀ ಕುಸಿತಗೊಂಡು ಕೃಷಿ ಇಲಾಖೆ  ಆತಂಕಕ್ಕೀಡಾಗಿತ್ತು. ಅದರಲ್ಲೂ ರೈತರು ಬಿತ್ತನೆಗೆ ಸಜ್ಜಾಗಿ ಮಳೆಗಾಗಿ ಎದುರು ನೋಡುತ್ತಿದ್ದರು. ಸದ್ಯ ರಾಜ್ಯ ದಲ್ಲಿ 48 ಗಂಟೆಗಳ ಉತ್ತಮ ಮಳೆಯಾಗುವ ಮುನ್ಸೂಚನೆ ಈಗಾಗಲೇ ಹವಾಮಾನ ಇಲಾಖೆ ನೀಡಿದ್ದು, ಅದರಂತೆ ಜಿಲ್ಲೆಯಲ್ಲಿ ಬುಧವಾರವು ಸಹ ಚಿಕ್ಕಬಳ್ಳಾಪುರ, ಚಿಂತಾಮಣಿ, ಶಿಡ್ಲಘಟ್ಟ, ಬಾಗೇಪಲ್ಲಿ ತಾಲೂಕುಗಳಲ್ಲಿ ಮಳೆ ಬಿದ್ದಿದೆ.

ಬಿತ್ತನೆಗೆ ತೇವಾಂಶ ಅಡ್ಡಿ: ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ತೇವಾಂಶ ಹೆಚ್ಚಳದಿಂದ ಬಿತ್ತನೆ
ಕಾರ್ಯಕ್ಕೂ ತೀವ್ರ ಹಿನ್ನಡೆಯಾಗಿದೆ. ಭೂಮಿಯಲ್ಲಿ ತೇವಾಂಶ ಇದ್ದಾಗ ಬಿತ್ತನೆ ಮಾಡಿದರೆ ಬಿತ್ತನೆ ಬೀಜದ ಮೊಳಕೆ ಸರಿಯಾಗಿ ಬರುವುದಿಲ್ಲ. ಹೀಗಾಗಿ ಮಳೆಯಾಗುತ್ತಿದ್ದರೂ ಬಿತ್ತನೆ ಮಾಡಲು ಸಾಧ್ಯವಾಗುತ್ತಿಲ್ಲ. ಜಿಲ್ಲೆಯಲ್ಲಿ ಜು.10ರ ಅಂತ್ಯಕ್ಕೆ ಶೇ. 13 ಬಿತ್ತನೆ ಕಾರ್ಯಮುಗಿದಿದ್ದು, ಗುರಿ ಹೊಂದಿರುವ 1.54 ಲಕ್ಷ ಹೆಕ್ಟೇರ್‌ ಪೈಕಿ 20 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮುಗಿದಿದೆ.
 
8.3 ಮಿ.ಮೀ. ಮಳೆ ದಾಖಲು: ಜಿಲ್ಲೆಯಲ್ಲಿ ಕಳೆದ ಮಂಗಳವಾರ ಉತ್ತಮ ಮಳೆಯಾಗಿದ್ದು. 8.3 ಮಿ.ಮೀ. ಮಳೆ
ಜಿಲ್ಲೆಯಲ್ಲಿ ದಾಖಲಾಗಿದೆ. ಆ ಪೈಕಿ ಬಾಗೇಪಲ್ಲಿಯಲ್ಲಿ 3.3 ಮಿ.ಮೀ., ಚಿಕ್ಕಬಳ್ಳಾಪುರದಲ್ಲಿ 14.0 ಮಿ.ಮೀ., ಚಿಂತಾಮಣಿ ತಾಲೂಕಿನಲ್ಲಿ 9.5 ಮಿ. ಮೀ., ಗೌರಿಬಿದನೂರು ತಾಲೂಕಿನಲ್ಲಿ 7.6 ಮಿ.ಮೀ., ಗುಡಿಬಂಡೆ ತಾಲೂಕಿನಲ್ಲಿ 2.7 ಮಿ.ಮೀ., ಶಿಡ್ಲಘಟ್ಟ ತಾಲೂಕಿನಲ್ಲಿ 11.0 ಮಿ.ಮೀ. ಮಳೆ ಸೇರಿ ಒಟ್ಟು ಜಿಲ್ಲೆಯಲ್ಲಿ ಸರಾಸರಿ 8.3 ಮಿ.ಮೀ. ಮಳೆ ಆಗಿದೆಯೆಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ.ಕೆ.ಮಲ್ಲಿಕಾರ್ಜುನ್‌ ಬುಧವಾರ ಉದಯವಾಣಿಗೆ ತಿಳಿಸಿದರು.

ಜುಲೈ 11 ರ ಅಂತ್ಯಕ್ಕೆ 19.1 ಮಿ.ಮೀ. ಮಳೆ: ಜಿಲ್ಲೆಯಲ್ಲಿ ಕಳೆದ ಜುಲೈ 1 ರಿಂದ 11 ರ ಅಂತ್ಯಕ್ಕೆ ಒಟ್ಟು 19.1 ಮಿ.ಮೀ. ಮಳೆ ದಾಖಲುಗೊಂಡಿದೆ. ಈ ಪೈಕಿ ಬಾಗೇಪಲ್ಲಿಯಲ್ಲಿ 20.8 ಮಿ.ಮೀ.. ಚಿಕ್ಕಬಳ್ಳಾಪುರದಲ್ಲಿ 23.0 ಮಿ.ಮೀ., ಚಿಂತಾಮಣಿ ತಾಲೂಕಿನಲ್ಲಿ 18.2 ಮಿ. ಮೀ., ಗೌರಿಬಿದನೂರು ತಾಲೂಕಿನಲ್ಲಿ 15.9 ಮಿ.ಮೀ., ಗುಡಿಬಂಡೆ ತಾಲೂಕಿನಲ್ಲಿ 13.0 ಮಿ.ಮೀ., ಶಿಡ್ಲಘಟ್ಟ ತಾಲೂಕಿನಲ್ಲಿ 20.8 ಮಿ.ಮೀ. ಮಳೆ ಸೇರಿ ಒಟ್ಟು ಜಿಲ್ಲೆಯಲ್ಲಿ ಜು.11 ರ ಅಂತ್ಯಕ್ಕೆ 19.1 ಮಿ.ಮೀ. ಮಳೆ ಆಗಿದೆ. 

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.