ಆ್ಯಕ್ಷನ್‌ ಅಥರ್ವ: ಹೊಸ ಹೀರೋನಾ ಭರ್ಜರಿ ಎಂಟ್ರಿ


Team Udayavani, Jul 13, 2018, 6:00 AM IST

b-29.jpg

“ಅಥರ್ವ’ ಎಂಬ ಚಿತ್ರವೊಂದು ಆರಂಭವಾಗಿರುವ ಬಗ್ಗೆ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಇಂದು ರಾಜ್ಯಾದ್ಯಂತ ತೆರೆಕಾಣುತ್ತಿದೆ. ಈ ಸಿನಿಮಾದ ಮೂಲಕ ಸರ್ಜಾ ಕುಟುಂಬದ ಮತ್ತೂಂದು ಕುಡಿ ಚಿತ್ರರಂಗಕ್ಕೆ ಎಂಟ್ರಿಕೊಡುತ್ತಿದ್ದಾರೆ. ಅವರು ಪವನ್‌ ತೇಜ. ಹೌದು, ಪವನ್‌  ತೇಜ “ಅಥರ್ವ’ ಚಿತ್ರದ ಮೂಲಕ ನಾಯಕರಾಗಿ ಎಂಟ್ರಿಕೊಡುತ್ತಿದ್ದಾರೆ. ಈ ಚಿತ್ರವನ್ನು ಅರುಣ್‌ ನಿರ್ದೇಶಿಸಿದ್ದು, ವಿನೋದ್‌ ಕುಮಾರ್‌ ಹಾಗೂ ರಕ್ಷಯ್‌ ಸೇರಿ ನಿರ್ಮಿಸಿದ್ದಾರೆ. 

ಎಲ್ಲಾ ಓಕೆ, “ಅಥರ್ವ’ ಎಂದರೆ ಏನು ಎಂದು ನೀವು ಕೇಳಬಹುದು. ನಿರ್ದೇಶಕ ಅರುಣ್‌ ಹೇಳುವಂತೆ, ನರಸಿಂಹ ಸ್ವಾಮಿ ರೂಪದ ಒಂದು ಹೆಸರು. ಈ ಹೆಸರನ್ನೇ ಚಿತ್ರಕ್ಕೆ ಇಡಲು ಒಂದು ಪ್ರಮುಖ ಕಾರಣವಿದೆಯಂತೆ. ಇಡೀ ಚಿತ್ರಕಥೆಯಲ್ಲಿ ಅದು ಸಾಗಿದೆಯಂತೆ. ಹಾಗಂತ ಅದೇನೆಂಬ ಕುತೂಹಲಕ್ಕೆ ನೀವು ಸಿನಿಮಾ ಬಿಡುಗಡೆವರೆಗೆ ಕಾಯಲೇಬೇಕು. ಅದು ಬಿಟ್ಟರೆ ಇದೊಂದು ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಸಿನಿಮಾ. ಒಬ್ಬ ನಾಯಕ ನಟನ ಲಾಂಚ್‌ಗೆ ಏನೆಲ್ಲಾ ಇರಬೇಕೋ ಆ ಎಲ್ಲಾ ಅಂಶಗಳು ಈ ಚಿತ್ರದಲ್ಲಿವೆ ಎಂಬುದು ನಿರ್ದೇಶಕರ ಮಾತು. ಚಿತ್ರ ತಾಂತ್ರಿಕವಾಗಿಯೂ ಶ್ರೀಮಂತವಾಗಿದೆಯಂತೆ. ಚಿತ್ರದಲ್ಲಿ ತಾರಾ ಅವರ ಪಾತ್ರ ಪ್ರಮುಖವಾಗಿದೆಯಂತೆ.

ನಿರ್ಮಾಪಕರಲ್ಲೊಬ್ಬರಾದ ರಕ್ಷಯ್‌ ಅವರಿಗೆ ಸಿನಿಮಾ ಬಿಡುಗಡೆಯಾಗುತ್ತಿರುವ ಖುಷಿ. “ಸಿನಿಮಾ ಬಿಡುಗಡೆಯಾಗೋದು ಪ್ರತಿಯೊಬ್ಬ ನಿರ್ಮಾಪಕನ ಕನಸಿನ ದಿನ. ನಾನು ಕೂಡಾ ಅದೇ ಖುಷಿಯಲ್ಲಿದ್ದೇನೆ. ಸಿನಿಮಾ ಅಂದುಕೊಂಡಂತೆ ಮೂಡಿಬಂದಿದ್ದು, ಕನ್ನಡಕ್ಕೆ ಒಂದೊಳ್ಳೆಯ ಸಿನಿಮಾವಾಗುವ ವಿಶ್ವಾಸವಿದೆ’ ಎನ್ನುವುದು ಅವರ ಮಾತು. ಚಿತ್ರವನ್ನು ಜಯಣ್ಣ ವಿತರಣೆ ಮಾಡುತ್ತಿದ್ದು, 120ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. 

ನಾಯಕ ಪವನ್‌ ತೇಜಗೆ ಈ ಸಿನಿಮಾ ಮೂಲಕ ಆ್ಯಕ್ಷನ್‌ ಹೀರೋ ಇಮೇಜ್‌ ಸಿಗುವ ನಿರೀಕ್ಷೆ ಇದೆ. ಆ್ಯಕ್ಷನ್‌ ಪ್ರಿಯರಿಗೆ ಇಷ್ಟವಾಗುವಂತಹ ಫೈಟ್‌ಗಳು ಚಿತ್ರದಲ್ಲಿವೆಯಂತೆ. ಇನ್ನು ಸಿನಿಮಾಕ್ಕೆ ಬರುವ ಮುನ್ನ ಎಲ್ಲವನ್ನು ಕಲಿತುಕೊಳ್ಳಬೇಕು, ಆಗ ನಮ್ಮ ವಿಶ್ವಾಸ ಹೆಚ್ಚುತ್ತದೆ ಎಂದು ಅರ್ಜುನ್‌ ಸರ್ಜಾ ಹೇಳಿದ್ದರಂತೆ. ಅದರಂತೆ ತಯಾರಿ ಮಾಡಿಕೊಂಡಿದ್ದಾರೆ ಪವನ್‌. ಅದು ಚಿತ್ರೀಕರಣ ಸಮಯದಲ್ಲಿ ಸಹಾಯವಾಯಿತಂತೆ. “ಸಿದ್ಧತೆ ಇಲ್ಲದೇ ಯಾವುದನ್ನೂ ಮಾಡಿಲ್ಲ. ಹಾಗಾಗಿ, ಸಿನಿಮಾ ಚೆನ್ನಾಗಿ ಮೂಡಿಬಂದಿದೆ’ ಎನ್ನುವುದು ಪವನ್‌ ಮಾತು. ನಾಯಕಿ ಸನಮ್‌ ಶೆಟ್ಟಿ ಕೂಡಾ ತಮ್ಮ ಚೊಚ್ಚಲ ಕನ್ನಡ ಸಿನಿಮಾ ಬಗ್ಗೆ ಖುಷಿಯಿಂದ ಮಾತನಾಡಿದರು. 

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.