ವೈರಲ್‌ ಚೆಕ್‌: ಜನರ ಜೀವನ ಬದಲಿಸುವ ಘಟನೆಗಳ ಸುತ್ತ


Team Udayavani, Jul 13, 2018, 6:00 AM IST

b-34.jpg

“ತುಂಬಾ ಕೆಲಸ ಇದೆ. ಹಾಗಾಗಿ ಯಾರಾದರೂ ನಿರ್ದೇಶನ ಮಾಡಿ ಕೊಡಿ ಅಂತ ಬಂದರೆ ಯೋಚನೆ ಮಾಡುತ್ತೇನೆ. ನಾನಾಗೇ ಯಾರನ್ನೂ ಹುಡುಕಿಕೊಂಡು ಹೋಗುವುದಿಲ್ಲ …’

“ನಮೋ ಭೂತಾತ್ಮ’ ಚಿತ್ರದ ನಂತರ ನೃತ್ಯ ನಿರ್ದೇಶಕ ಮುರಳಿ ಯಾಕೆ ಯಾವೊಂದು ಚಿತ್ರವನ್ನೂ ನಿರ್ದೇಶಿಸಲಿಲ್ಲ ಎಂಬ ಸಂಶಯ ಎಲ್ಲರಲ್ಲೂ ಇತ್ತು. ಅದೇ ಪ್ರಶ್ನೆಯನ್ನು ಮುರಳಿ ಮುಂದಿಟ್ಟಾಗ, ಅವರಿಂದ ಈ ಉತ್ತರ ಬಂತು. ಇನ್ನಷ್ಟು ಮುಂದುವರೆಸಿದ ಮುರಳಿ, “ಇದು ಸಹ ಇಷ್ಟೇ. ನೃತ್ಯ ನಿರ್ದೇಶನದಲ್ಲಿ ಬಿಝಿ ಇದ್ದೆ. ಅದೊಂದು ದಿನ ಶ್ರೀನಿವಾಸ್‌ ಬಂದು ಒಂದು ಚಿತ್ರ ಮಾಡಿಕೊಡಿ ಎಂದರು. ಕಥೆ ಚೆನ್ನಾಗಿತ್ತು. ಹಾಗಾಗಿ ಇರುವ ಕೆಲಸದಲ್ಲಿ ಸ್ವಲ್ಪ ಸಮಯ ಹೊಂದಿಸಿಕೊಂಡು ಈ ಚಿತ್ರ ಮಾಡುತ್ತಿದ್ದೇನೆ’ ಎನ್ನುತ್ತಾರೆ ಮುರಳಿ.

ಅಂದಹಾಗೆ, ಮುರಳಿ ನಿರ್ದೇಶನದ ಎರಡನೆಯ ಚಿತ್ರ “ವೈರಲ್‌’ ಕಳೆದ ವಾರ ಪ್ರಾರಂಭವಾಯಿತು. ಯಶ್‌ ಬಂದು ಚಿತ್ರಕ್ಕೆ ಕ್ಲಾಪ್‌ ಮಾಡಿ, ಶುಭ ಹಾರೈಸಿ ಹೋದರು. ಆ ನಂತರ ಮುರಳಿ ತಮ್ಮ ತಂಡದೊಂದಿಗೆ ಮಾತಿಗೆ ಕುಳಿತರು. ಈ ಚಿತ್ರವನ್ನು ಶ್ರೀನಿವಾಸ್‌ ನಿರ್ಮಿಸುತ್ತಿದ್ದಾರೆ. ಶ್ರೀನಿವಾಸ್‌ ಇದಕ್ಕೂ ಮುನ್ನ “ಶಾರ್ಪ್‌ಶೂಟರ್‌’ ಎಂಬ ಚಿತ್ರ ನಿರ್ಮಿಸಿದ್ದರು. ಈಗ “ವೈರಲ್‌’ ನಿರ್ಮಿಸುತ್ತಿರುವುದರ ಜೊತೆಗೆ, ಒಂದು ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

“ಇದೊಂದು ಮೆಸೇಜ್‌ ಒರಿಯೆಂಟೆಡ್‌ ಸಿನಿಮಾ’ ಎಂದು ಮಾತು ಪ್ರಾರಂಭಿಸಿದರು ಮುರಳಿ. “ಒಂದು ಘಟನೆಯಿಂದೆ ಏನೆಲ್ಲಾ ಆಗುತ್ತದೆ ಎಂಬುದನ್ನು ಈ ಚಿತ್ರದಲ್ಲಿ ಹೇಳುವುದಕ್ಕೆ ಹೊರಟಿದ್ದೇವೆ. ವೈರಲ್‌ ಎನ್ನುವ ವಿಷಯವನ್ನೇ ಇಟ್ಟುಕೊಂಡು ಚಿತ್ರ ಮಾಡುತ್ತಿದ್ದೇವೆ. ಇತ್ತೀಚೆಗೆ ಒಬ್ಬ ಕುರಿ ಕಾಯೋ ಹುಡುಗ ಹಾಡಿದ್ದು ದೊಡ್ಡದಾಗಿ ವೈರಲ್‌ ಆಯಿತು. ಅದೇ ತರಹ ಕೆಲವು ನೆಗೆಟಿವ್‌ ಎನ್ನುವಂತಹ ವಿಷಯಗಳು ಸಹ ವೈರಲ್‌ ಆಗಿ ಸುದ್ದಿ ಮಾಡುತ್ತವೆ. ಆ ತರಹದ ನೆಗೆಟಿವ್‌ ವಿಷಯಗಳು ಹೇಗೆ ಜನರ ಜೀವನವನ್ನು ಬದಲಿಸುತ್ತದೆ ಎಂಬ ಅಂಶ ಇಟ್ಟುಕೊಂಡು ಈ ಚಿತ್ರ ಮಾಡುತ್ತಿದ್ದೇವೆ. ಇಲ್ಲಿ ಕಾಮಿಡಿ, ಥ್ರಿಲ್ಲರ್‌ ಮತ್ತು ಹಾರರ್‌ ಅಂಶಗಳಿವೆ’ ಎನ್ನುತ್ತಾರೆ ಮುರಳಿ.

“ವೈರಲ್‌’ನಲ್ಲಿ ಶ್ರೀನಿವಾಸ್‌, ಸಚಿನ್‌, “ಉಗ್ರಂ’ ಮಂಜು, ಮಾನ್ವಿತಾ ರಾಜ್‌, ವಂದನ, ಮಿಮಿಕ್ರಿ ಗೋಪಿ, ವಿಜಯ್‌ ಚೆಂಡೂರ್‌ ಮುಂತಾದವರು ನಟಿಸುತ್ತಿದ್ದಾರೆ. ಅರುಣ್‌ ಆ್ಯಂಡ್ರೂ ಸಂಗೀತ ಸಂಯೋಜಿಸಿದರೆ, “ಸಂಕಷ್ಟಕರ ಗಣಪತಿ’ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದ ಉದಯ್‌ ಲೀಲ ಛಾಯಾಗ್ರಹಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಬೆಂಗಳೂರು ಮತ್ತು ಕೇರಳದಲ್ಲಿ ಚಿತ್ರೀಕರಣ ನಡೆಯಲಿದೆಯಂತೆ.

ಮೂರು ವರ್ಷಗಳ ಹಿಂದೆ “ಶಾರ್ಪ್‌ ಶೂಟರ್‌’ ಚಿತ್ರ ಮಾಡಿದ್ದ ಶ್ರೀನಿವಾಸ್‌, ಒಂದು ವರ್ಷದ ಹಿಂದೆ ಅಕಸ್ಮಾತ್‌ ಆಗಿ ಮುರಳಿ ಅವರನ್ನು ಭೇಟಿ ಮಾಡಿದ್ದಾರೆ. ಆಗ ಚಿತ್ರ ಮಾಡುವ ವಿಚಾರ ಬಂದಿದೆ. “ನನಗೆ ಮೊದಲಿನಿಂದಲೂ ನಟಿಸುವ ಆಸಕ್ತಿ ಇತ್ತು. ಇದು ಹೀರೋಯಿಸಂ ಸಿನಿಮಾ ಅಲ್ಲ. ಹಾಗಾಗಿ ಕಥೆಗೆ ಏನು ಬೇಕೋ, ಅದಕ್ಕೆ ತಯಾರಿ ನಡೆಸಿ ಕ್ಯಾಮೆರಾ ಮುಂದೆ ನಿಲ್ಲುತ್ತಿದ್ದೇನೆ. ಇಲ್ಲಿ ಎರಡು ಶೇಡ್‌ನ‌ ಪಾತ್ರವಿದೆ’ ಎಂದು ಹೇಳಿಕೊಂಡರು.

ಅಂದು ಸಚಿನ್‌, ಮಾನ್ವಿತಾ ರಾಜ್‌, ಅರುಣ್‌ ಆ್ಯಂಡ್ರೂ ಮುಂತಾದವರು ಇದ್ದರು. ಎಲ್ಲರೂ ಚಿತ್ರದಲ್ಲಿ ನಟಿಸುತ್ತಿರುವ ಬಗ್ಗೆ ಖುಷಿ ವ್ಯಕ್ತಪ ಡಿಸಿದರು. 

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.