ಟಾಲ್ಕಂ ಕ್ಯಾನ್ಸರ್‌: Johnson & Johnsonಗೆ ಕೋರ್ಟ್‌ ಮಹಾ ಪ್ರಹಾರ


Team Udayavani, Jul 13, 2018, 5:35 PM IST

jhonson-jhonson-700.jpg

ಮಿಸೋರಿ, ಅಮೆರಿಕ : ಟಾಲ್ಕಂ ಪೌಡರ್‌ ಬಳಸಿದ ಕಾರಣಕ್ಕೆ ತಮಗೆ ಕ್ಯಾನ್ಸರ್‌ ಬಂದಿದೆ ಎಂದು ವಾದಿಸಿ ಗೆದ್ದಿರುವ 22 ಮಹಿಳೆಯರಿಗೆ 4.69 ಶತಕೋಟಿ ಡಾಲರ್‌ಗಳನ್ನು, ಪರಿಹಾರವಾಗಿ ನೀಡುವಂತೆ ಮಿಸೋರಿಯ ಸೈಂಟ್‌ ಲೂಯಿಸ್‌ ನಲ್ಲಿನ ಅಮೆರಿಕದ ನ್ಯಾಯಾಲಯ ಜಾನ್‌ಸನ್‌ ಆ್ಯಂಡ್‌ ಜಾನ್‌ಸನ್‌ ಕಂಪೆನಿಗೆ ಆದೇಶಿಸುವ ಮೂಲಕ ಮಹಾ ಪ್ರಹಾರ ನೀಡಿದೆ. 

ಜಾನ್‌ಸನ್‌ ಆ್ಯಂಡ್‌ ಜಾನ್‌ಸನ್‌ ಕಂಪೆನಿಯ ಟಾಲ್ಕಂ ಪೌಡರ್‌ನಲ್ಲಿರುವ ಆರೋಗ್ಯಕ್ಕೆ ಹಾನಿಕರವಾಗಿರುವ ಆ್ಯಸ್‌ಬೆಸ್ಟೋಸ್‌ ಅಂಶದಿಂದಾಗಿ ತಮಗೆ ಗರ್ಭಾಶಯದ ಕ್ಯಾನ್ಸರ್‌ ಬಂತೆಂದು 22 ಮಹಿಳೆಯರು ಕಂಪೆನಿಯ ವಿರುದ್ಧ ದಾವೆ ಹೂಡಿದ್ದರು. 

ಔಷಧ ಉತ್ಪನ್ನಗಳ ವಿಶ್ವ ದಿಗ್ಗಜ ಸಂಸ್ಥೆಯಾಗಿರುವ ಜಾನ್ಸನ್‌ ಆ್ಯಂಡ್‌ ಜಾನ್ಸನ್‌ ಕಂಪೆನಿ ಕೋರ್ಟ್‌ ತೀರ್ಪಿನ ಪ್ರಕಾರ ದಾವೆ ಗೆದ್ದಿರುವ ಮಹಿಳೆಯರು ಮತ್ತು ಅವರ ಕುಟುಂಬದವರಿಗೆ 55 ಕೋಟಿ ಡಾಲರ್‌ ಪರಿಹಾರವನ್ನು ಮತ್ತು 4.14 ಬಿಲಿಯ ಡಾಲರ್‌ಗಳ ಪ್ಯೂನಿಟಿವ್‌ ಡ್ಯಾಮೇಜಸ್‌ (ಎಂದರೆ ಅತ್ಯಂತ ನಿರ್ಲಕ್ಷದಿಂದ ಆತ್ಮಸಾಕ್ಷಿಗೆ ವಿರುದ್ಧವಾಗಿ ಎಸಗಿರುವ ಅಪರಾದಕ್ಕೆ ನೀಡಲಾಗುವ ಮತ್ತು ಲೆಕ್ಕ ಹಾಕಿರುವುದಕ್ಕಿಂತಲೂ ಮೀರಿದ ನಷ್ಟವನ್ನು ಭರಿಸುವ ನಿಟ್ಟಿನಲ್ಲಿ ವಿಧಿಸಲಾಗುವ ಅಸಾಮಾನ್ಯ ಪ್ರಮಾಣದ ದಂಡ)ವನ್ನು ಸಂತ್ರಸ್ತರಿಗೆ ಪಾವತಿಸಬೇಕಿದೆ. 

ಜಾನ್‌ಸನ್‌ ಬೇಬಿ ಪೌಡರ್‌ ಬಳಸುವಲ್ಲಿ ಇರಬಹುದಾದ ಕ್ಯಾನ್ಸರ್‌ ಅಪಾಯಗಳ ಬಗ್ಗೆಯಾಗಲೀ ಆ ಉತ್ಪನ್ನದಲ್ಲಿ ಇರುವ ಕ್ಯಾನ್ಸರ್‌ ಕಾರಕ ರಾಸಾಯನಿಕ ಅಂಶದ ಬಗ್ಗೆಯಾಗಲೀ ಕಂಪೆನಿಯು ಯಾವುದೇ ಮುನ್ನಚ್ಚರಿಕೆಯನ್ನು ನೀಡುವಲ್ಲಿ ವಿಫ‌ಲವಾಗಿದೆ ಎಂದು ಕ್ಯಾನ್ಸರ್‌ ಪೀಡಿತ ಅರ್ಜಿದಾರ ಮಹಿಳೆಯರು ವಾದಿಸಿದ್ದರು.

ಜಾನ್‌ಸನ್‌ ಆ್ಯಂಡ್‌ ಜಾನ್‌ಸನ್‌ ಕಂಪೆನಿಯು ತನಗೆ ಈ ಕೋರ್ಟ್‌ ತೀರ್ಪಿನಿಂದ ನಿರಾಶೆಯಾಗಿದೆ; ತಾನು ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಯೋಚಿಸುತ್ತಿದ್ದೇನೆ ಎಂದು ಹೇಳಿರುವುದಾಗಿ ನ್ಯೂಯಾರ್ಕ್‌ ಟೈಮ್ಸ್‌ ವರದಿ ತಿಳಿಸಿದೆ. 

ಅಂದ ಹಾಗೆ ಜಾನ್ಸನ್‌ ಆ್ಯಂಡ್‌ ಜಾನ್ಸನ್‌ ಕಂಪೆನಿಯು ತನ್ನ ಬೇಬಿ ಡಾಲ್ಕಂ ಪೌಡರ್‌ ಗೆ ಸಂಬಂಧಿಸಿದಂತೆ ಇತರ 9,000 ಕೇಸುಗಳನ್ನು ನ್ಯಾಯಾಲಯದಲ್ಲಿ ಎದುರಿಸುತ್ತಿದೆ ಎಂದು ನಿಯಂತ್ರಣ ದಾಖಲೆ ಪತ್ರಗಳು ತಿಳಿಸಿವೆ. 

ಟಾಪ್ ನ್ಯೂಸ್

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.