ಮರವಂತೆ: ಬೆಂಗಳೂರು ವಿದ್ಯಾರ್ಥಿಗಳ ಪರಿಸರ ಸ್ವಚ್ಚತಾ ಜಾಗೃತಿ


Team Udayavani, Jul 14, 2018, 6:35 AM IST

1307uppe1-1.gif

ಉಪ್ಪುಂದ: ಎಲ್ಲೋ ಹುಟ್ಟಿ ಬೆಳೆದ ವಿದ್ಯಾರ್ಥಿಗಳ ತಂಡವೊಂದು ದೇಶಕ್ಕಾಗಿ ಸೇವೆ ಸಲ್ಲಿಸುವ ಉದ್ದೇಶ ಇಟ್ಟುಕೊಂಡು ಕರಾವಳಿಯ ಮರವಂತೆಯಲ್ಲಿ ಬೀಡುಬಿಟ್ಟು ಇಲ್ಲಿನ ಗ್ರಾ.ಪಂ.ನಡೆಸುತ್ತಿರುವ ಸ್ವಚ್ಚ ಮರವಂತೆ ಯೋಜನೆಯ ಯಶಸ್ಸಿಗಾಗಿ ಶ್ರಮಿಸುತ್ತಿದ್ದಾರೆ.

ವಿದ್ಯಾರ್ಥಿಗಳು ಕಾಲೇಜು ರಜಾ ಅವಧಿಯಲ್ಲಿ ಸ್ನೇಹಿತರ ಜತೆಗೂಡಿ ರಜಾ ಕಳೆಯಲು ಪಿಕ್‌ನಿಕ್‌, ಟೂರ್‌ಗಳಿಗೆ ಹೋಗುವುದು ಸಾಮಾನ್ಯ.  ಆದರೆ ಬೆಂಗಳೂರು ರಾಜಾನುಕುಂಟೆ ಸಾಯಿ ವಿದ್ಯಾ ತಾಂತ್ರಿಕ ಮಹಾವಿದ್ಯಾಲಯದ ಏಳು ವಿದ್ಯಾರ್ಥಿಗಳು ಮತ್ತು ಮೂವರು ವಿದ್ಯಾರ್ಥಿನಿಯರ  ತಂಡ‌ 18 ದಿನಗಳ ಕಾಲ ಪರಿಸರ ಸ್ವಚ್ಚತೆಯ ಅಗತ್ಯ, ಘನ ಮತ್ತು ದ್ರವ ತ್ಯಾಜ್ಯ ಸಂಪನ್ಮೂಲ ವಿರ್ವಹಣೆಯಲ್ಲಿ ಜನರ ಸಹಭಾಗಿತ್ವದ ಆವಶ್ಯಕತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರ ಜತೆಗೆ ಸ್ವಚ್ಚತಾ ಕಾರ್ಯ ನಡೆಸುವ ಮೂಲಕ ಮರವಂತೆ ಜನರಿಗೆ ಪ್ರೇರಣೆ ನೀಡುತ್ತಿರುವುದು ವಿದ್ಯಾರ್ಥಿ ಸಮೂಹದಲ್ಲಿ ಆಶಾದಾಯಕ ಬೆಳವಣಿಗೆಯಾಗಿದೆ.

ಬೀದಿ ನಾಟಕ
ಜನರಲ್ಲಿ ನೈರ್ಮಲ್ಯದ ಅರಿವು ಮೂಡಿಸಲು ಊರಿನ ನಾಲ್ಕು ಶಾಲೆಗಳ ವಿದ್ಯಾರ್ಥಿಗಳಿಗೆ,  ಹೆತ್ತವರಿಗೆ, ಆಶಾ ಕಾರ್ಯಕರ್ತೆಯರಿಗೆ, ವಾರ್ಡ್‌ ಸಭೆಗಳ ಸದಸ್ಯರಿಗೆ ಅದರ ಕುರಿತು ಮಾಹಿತಿ ನೀಡುತ್ತಿದ್ದು ಅದನ್ನು ಮನದಟ್ಟು ಮಾಡಲು ಕಿರು ಬೀದಿನಾಟಕ, ವೀಡಿಯೊ ತುಣುಕುಗಳನ್ನು ಪ್ರದರ್ಶಿಸಿದ್ದಾರೆ.

ಮನೆ ಮನೆ ಭೇಟಿ
ಸಾರ್ವಜನಿಕ ರಸ್ತೆ ಪರಿಸರ ಸ್ವಚ್ಚತೆಗೆ ಜಾಗೃತಿ ಮೂಡಿಸಲು ಜಾಥಾ ಹಾಗೂ ಊರಿನ ಎಲ್ಲ 1,200 ಮನೆಗಳಿಗೆ ಭೇಟಿ ನೀಡಲಿದ್ದಾರೆ.

ಮೋದಿ ಪ್ರೇರಣೆ
ತಂಡದಲ್ಲಿ ಸೋಹನ್‌ಕುಮಾರ್‌ ಎನ್‌., ಸ್ನೇಹಾ ಜಿ., ಎಚ್‌. ಶರಣಂ, ಸುಂದರ ವಿಜಯನ್‌, ಮೋಹನ ಗೌಡ ಎ. ಆರ್‌., ಜಿ. ಎನ್‌. ತೇಜಸ್‌ ಆರಾಧ್ಯ, ಧನುಷ್‌ ಕೆ. ಎನ್‌, ಸ್ಪರ್ಷಾ ಆರ್‌., ರಜಿತ್‌ ಎ. ಬೆಂಗಳೂರಿನವರು. ಗಣೇಶ ಶೆಟ್ಟಿ ನಾವುಂದದವರು. ಬೇರೆ ಬೇರೆ ವಿಭಾಗದಲ್ಲಿ ಕಲಿಯುತ್ತಿರುವ ಇವರು  ಸ್ವಚ್ಚ ಭಾರತ ಯೋಜನೆಯನ್ನು ಆರಂಭಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿದ್ಯಾರ್ಥಿಗಳು ತಮ್ಮ ರಜಾವಧಿಯಲ್ಲಿ ಕನಿಷ್ಠ 100 ಗಂಟೆಗಳ ಸಮುದಾಯ ಸೇವೆ ಮಾಡಬೇಕೆಂಬ ಕರೆ ನೀಡಿದ್ದಾರೆ. ಮುಂದಿನ ವರ್ಷದಿಂದ ಕೇಂದ್ರ  ಸರಕಾರ   ತಾಂತ್ರಿಕ ವಿದ್ಯಾರ್ಥಿಗಳಿಗೆ ಸಣ್ಣ ಅವಧಿಯ ಸಾಮಾಜಿಕ ಸೇವಾ ಕಾರ್ಯ ಕಡ್ಡಾಯಗೊಳಿಸಲಿದೆ ಎಂಬ ನಿರೀಕ್ಷೆಯಿದೆ. ಎಂದು ವಿದ್ಯಾರ್ಥಿಗಳು ತಿಳಿಸುತ್ತಾರೆ. 

ಇದೇ ಊರಿನವರಾದ ಗಣೇಶ ಶೆಟ್ಟಿ ಮರವಂತೆ  ಗ್ರಾಮ ಪಂಚಾಯತ್‌  ಹಲವು ಅಭಿವೃದ್ಧಿ ಕೆಲಸಗಳ ಮೂಲಕ ರಾಜ್ಯದ ಗಮನ ಸೆಳೆದಿರುವುದರ ಜತೆಗೆ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ನಿಟ್ಟಿನಲ್ಲಿ ಕೆಲಸ ಆರಂಭಿಸಿದೆ. ಈ ಕಾರಣಕ್ಕಾಗಿ ಈ ಊರನ್ನು ಆಯ್ಕೆ ಮಾಡಿಕೊಂಡೆವು ಎಂದರು.

ವರದಿ ಸರಕಾರಿ ಇಲಾಖೆಗೆ
ತ್ಯಾಜ್ಯ ಸಂಗ್ರಹ, ವಿಲೇವಾರಿಗೆ ಸಾರ್ವ ಜನಿಕರಿಂದ ಇನ್ನೂ ಹೆಚ್ಚಿನ ಸ್ಪಂದನೆ ಬೇಕು. ಇಲ್ಲಿನ ನಮ್ಮ ಕೆಲಸದ ಅನುಭವ ಆಧಾರಿತ ವರದಿಯನ್ನು ಕಾಲೇಜಿಗೆ, ಕೇಂದ್ರ ಮಾನವ ಸಂನ್ಮೂಲ ಮಂತ್ರಾಲಯಕ್ಕೆ, ರಾಜ್ಯ ಗ್ರಾಮೀಣ ಅಭಿವೃದ್ಧಿ, ಪಂಚಾಯತ್‌ರಾಜ್‌ ಇಲಾಖೆಗೆ, ಮರವಂತೆ ಗ್ರಾ.ಪಂ.ಗೆ ನೀಡಲಾಗುವುದು ಎಂದಿದ್ದಾರೆ.

ಟಾಪ್ ನ್ಯೂಸ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nutrition Stewardship Program at KMC

Manipal: ಕೆಎಂಸಿಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮ

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Fraud Case ಕೆನರಾ ಬ್ಯಾಂಕ್‌ ಹೆಸರಲ್ಲಿ ಸಂದೇಶ ಕಳುಹಿಸಿ 3.27 ಲಕ್ಷ ರೂ. ವಂಚನೆ

Fraud Case ಕೆನರಾ ಬ್ಯಾಂಕ್‌ ಹೆಸರಲ್ಲಿ ಸಂದೇಶ ಕಳುಹಿಸಿ 3.27 ಲಕ್ಷ ರೂ. ವಂಚನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Dowry harassment: ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು

Dowry harassment: ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.