ಬಿರುಸಿನ ಮಳೆ: ಕೃಷಿ ಕಾರ್ಯಕ್ಕೆ ತೊಡಕು; ರೋಗ ಭೀತಿ


Team Udayavani, Jul 14, 2018, 2:10 AM IST

bele-haalu-13-7.jpg

ಆಲಂಕಾರು: ಈ ವರ್ಷದ ಮಳೆಗಾಲ ಉತ್ತಮ ಆರಂಭವನ್ನೇ ಪಡೆದಿದ್ದು, ನದಿ ಪಾತ್ರದ ರೈತಾಪಿ ಜನತೆಯನ್ನು ಹೈರಾಣಾಗಿಸಿದೆ. ನದಿ ದಂಡೆಯ ರೈತರ ತೋಟಗಳಲ್ಲಿ ತಿಂಗಳುಗಟ್ಟಲೆ ನೆರೆ ನೀರು ನಿಂತು ಕೊಳೆ ರೋಗದಿಂದ ಅಡಿಕೆ ಬೆಳೆಯನ್ನು ಸಂಪೂರ್ಣವಾಗಿ ಕಳೆದುಕೊಳ್ಳುವ ಭೀತಿ ಎದುರಾಗಿದ್ದರೆ, ಗದ್ದೆಗಳಲ್ಲಿ ಭತ್ತ ಬೇಸಾಯ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಕೊಳೆರೋಗದ ಭೀತಿ
ಕರಾವಳಿಯಲ್ಲಿ ಭತ್ತದ ಕೃಷಿ ಹಾಗೂ ಅಡಿಕೆ ಪ್ರಮುಖ ಬೆಳೆಯಾಗಿದೆ. ಮಳೆ ಆರಂಭವಾದ ಬಳಿಕ ಒಂದು ದಿನವೂ ಬಿಡುವು ಕೊಡದೆ ಮಳೆ ಸುರಿಯುತ್ತಿರುವುದರಿಂದ ಅಡಿಕೆಗೆ ಪ್ರಥಮ ಹಂತದ ಔಷಧಿ ಸಿಂಪರಣೆಗೂ ಅವಕಾಶ ಸಿಕ್ಕಿಲ್ಲ. ಈ ಪರಿಣಾಮ ನೆರೆ ನೀರು ನಿಲ್ಲದ ತೋಟಗಳಿಗೂ ಕೊಳೆರೋಗದ ಭೀತಿ ಎದುರಾಗಿದೆ. ಅಡಿಕೆ ಕೃಷಿಗೆ ಪ್ರತೀ 30ರಿಂದ 45 ದಿನಗಳಿಗೊಮ್ಮೆ ಔಷಧಿ ಸಿಂಪರಣೆ ಮಾಡಬೇಕಾಗುತ್ತದೆ. ಆದರೆ ನಿರಂತರ ಮಳೆಯ ಕಾರಣ ಜೂನ್‌ ತಿಂಗಳ ಪ್ರಥಮ ಹಂತದ ಔಷಧಿ ಸಿಂಪರಣೆಯು ಇನ್ನೂ ಮಾಡಲಾಗಿಲ್ಲ. ಕರಾವಳಿ ಭಾಗದ ಕೃಷಿಕರು ಅಡಿಕೆ ಬೆಳೆಯೊಂದಿಗೆ ಉಪ ಕೃಷಿಗಳಾದ ಕರಿಮೆಣಸು, ಬಾಳೆ ಗಿಡಗಳ ಉಳಿವಿಗಾಗಿ ಶತಪ್ರಯತ್ನದಲ್ಲಿದ್ದಾರೆ. ನದಿ ಪಾತ್ರದಲ್ಲಿರುವ ಗದ್ದೆಗಳಿಗೆ ನೆರೆ ನೀರು ಆವರಿಸಿ ತಿಂಗಳಾಗುತ್ತ ಬಂದಿರುವ ಕಾರಣ ಭತ್ತ ನಾಟಿಯನ್ನೂ ಮಾಡಲಾಗುತ್ತಿಲ್ಲ.

ರಸಗೊಬ್ಬರ ಹಾಕಲೂ ಚಿಂತೆ
ಆರಂಭದಲ್ಲಿ ಬಿರುಗಾಳಿ, ಸಿಡಿಲಿನೊಂದಿಗೆ ಮುಂಗಾರು ಪ್ರವೇಶ ಪಡೆದು ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ರೈತರ ಅಪಾರ ಪ್ರಮಾಣದ ಅಡಿಕೆ, ಬಾಳೆ, ತೆಂಗು ಕೃಷಿಯನ್ನು ನಾಶ ಮಾಡಿತ್ತು. ಜತೆಗೆ ಸಿಡಿಲಿಗೆ ರೈತರ ಜೀವ ಬಲಿಯನ್ನು ಪಡೆದುಕೊಂಡಿತ್ತು. ಇದೀಗ ಭಾರೀ ಪ್ರಮಾಣದ ಮಳೆ ಅಳಿದುಳಿದ ಕೃಷಿಯನ್ನು ನಾಶ ಮಾಡುವತ್ತ ಪಣತೊಟ್ಟಂತಿದೆ. ಮಳೆ ಆರಂಭದಿಂದ ಈವರೆಗೆ ತೋಟಗಳಿಗೆ ಸಮರ್ಪಕ ರಸಗೊಬ್ಬರವನ್ನು ಹಾಕಲು ಮಳೆ ಅವಕಾಶ ನೀಡಿಲ್ಲ. ಗುಡ್ಡಗಾಡು ಬಯಲು ಪ್ರದೇಶದ ತೋಟಗಳಲ್ಲಿ ಮಳೆ ನೀರಿಗೆ ಗೊಬ್ಬರ ಕೊಚ್ಚಿ ಹೋಗುವ ಭೀತಿ ಉಂಟಾಗಿದೆ. ಇದರಿಂದ ದುಬಾರಿ ವೆಚ್ಚದ ರಸಗೊಬ್ಬರಗಳು ನೀರು ಪಾಲಾಗುತ್ತಿವೆ.

ಕೂಲಿ ಕಾರ್ಮಿಕರ ಕೊರತೆ
ಔಷಧಿ ಸಿಂಪರಣೆಯ ಕೂಲಿ ಕಾರ್ಮಿಕರು ಗ್ರಾಮದಲ್ಲಿ ಬೆರಳೆಣಿಕೆಯಷ್ಟಿರುವ ಕಾರಣ ಸಿಂಪರಣೆ ಮಾಡುವ ಕೂಲಿ ಕಾರ್ಮಿಕರಿಗೆ ಎಲ್ಲಿಲ್ಲದ ಬೇಡಿಕೆಯಾಗಿದೆ. ಕಳೆದ ವರ್ಷ 1,200 ರೂ. ದಿನ ಸಂಬಳವಿತ್ತು. ಆದರೆ ಈ ವರ್ಷ 1,500 ರೂ.ಗೂ ಅಧಿಕ ಸಂಬಳ ನೀಡಿದರೂ ಕೂಲಿ ಕಾರ್ಮಿಕರ ಕೊರತೆಯಾಗಿದೆ. ಇದ್ದವರಿಗೂ ಮಳೆ ಕಾರಣ ಕೆಲಸ ಕಾರ್ಯಗಳಿಗೆ ತೊಡಕಾಗಿದೆ. ಈ ಕಾರಣಕ್ಕಾಗಿ ಡ್ರಂ ಔಷಧಿ ಸಿಂಪಡಣೆಯ ಆಧಾರದಲ್ಲಿ ಸಂಬಳ ನೀಡುವ ಪದ್ಧತಿ ಜಾರಿಗೆ ಬಂದಿದೆ. ಗ್ರಾಮೀಣ ಪ್ರದೇಶದಲ್ಲಿ ಒಂದು ಡ್ರಂಗೆ 600 ರೂ. ವೇತನ ನೀಡಲಾಗುತ್ತಿದೆ.

ಬೆಂಬಲ ಬೆಲೆಗೆ ಪ್ರಯತ್ನಿಸಲಿ
ಕರಾವಳಿ ಭಾಗದಲ್ಲಿ ಅಡಿಕೆ ಪ್ರಮುಖ ಬೆಳೆಯಾಗಿದೆ. ಜಿಲ್ಲೆಯ ರೈತರಿಗೆ ಸರಕಾರ ಸಾಲ ಮನ್ನಾದ ಬದಲು ಅಡಿಕೆಗೆ ಬೆಂಬಲ ಬೆಲೆ ಘೋಷಿಸುತ್ತಿದ್ದರೆ ಸಾವಿರಾರು ರೈತರು ಸಂಕಷ್ಟದಿಂದ ಪಾರಾಗುತ್ತಿದ್ದರು. ಜನಪ್ರತಿನಿಧಿಗಳು ನೆರೆ ನೀರಿನಿಂದ ಕೃಷಿಯನ್ನು ಕಳೆದುಕೊಂಡ ರೈತರ‌ ಬಗ್ಗೆ ಸಮರ್ಪಕ ಮಾಹಿತಿ ಪಡೆದುಕೊಂಡು ಸದನದಲ್ಲಿ ಸರಕಾರದ ಮುಂದಿಟ್ಟು ಕರಾವಳಿಯ ರೈತರಿಗೆ ನ್ಯಾಯ ದೊರಕಿಸಕೊಡಬೇಕಾಗಿದೆ. ಅಡಿಕೆಗೆ ಸರಕಾರ ಬೆಂಬಲ ಬೆಲೆ ಘೋಷಿಸುವಂತೆ ಒತ್ತಡ ಹೇರಬೇಕಾಗಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.