ಮಲ್ಯ ರೀತಿ ನೀವೂ ಚಾಲಾಕಿ ಉದ್ಯಮಿಯಾಗಿ: ಬುಡಕಟ್ಟು ಜನರಿಗೆ ಸಚಿವ ಓರಂ


Team Udayavani, Jul 14, 2018, 11:36 AM IST

jual-oram-700.jpg

ಹೈದರಾಬಾದ್‌ : “ಉದ್ಯಮಿ ವಿಜಯ್‌ ಮಲ್ಯ ತುಂಬಾ ಚಾಲಾಕಿ ಮನುಷ್ಯ; ನೀವು ಕೂಡ ಆತನಂತೆ ಯಶಸ್ವಿ ಉದ್ಯಮಿಗಳಾಗಲು ಸಾಕಷ್ಟು ಬ್ಯಾಂಕ್‌ ಸಾಲ ತೆಗೆದುಕೊಳ್ಳಬೇಕು’ ಎಂದು ಕೇಂದ್ರ ಸಚಿವ ಜುವಾಲ್‌ ಓರಂ ಅವರು ಎಸ್‌ಸಿ/ಎಸ್‌ಟಿ ವರ್ಗದವರಿಗೆ ಸಲಹೆ ನೀಡಿದ್ದಾರೆ. 

2018ರ ರಾಷ್ಟ್ರೀಯ ಬುಡಕಟ್ಟು ಉದ್ಯಮಶೀಲರ ಚೊಚ್ಚಲ ಶೃಂಗದಲ್ಲಿ ಮಾತನಾಡುತ್ತಿದ್ದ ಸಚಿವ ಓರಂ ಅವರು, ಬುಡಕಟ್ಟು ಜನರ ಕಲ್ಯಾಣಕ್ಕೆ ಬದ್ಧವಾಗಿರುವ ಸರಕಾರ ಬುಡಕಟ್ಟು ಉದ್ಯಮಶೀಲರನ್ನು ಪ್ರೋತ್ಸಾಹಿಸಲು ಅನೇಕಾನೇಕ ಹಣಕಾಸು ನೆರವು ಯೋಜನೆಗಳನ್ನು ರೂಪಿಸಿದೆ ಎಂದು ಹೇಳಿದರು. 

ಯಶಸ್ವೀ ಉದ್ಯಮಿಗಳಾಗಲು ಬುಡಕಟ್ಟು ಸಮುದಾಯದ ಉದ್ಯಮಶೀಲರು ವಿಜಯ್‌ ಮಲ್ಯ ಅವರಂತೆ ಚುರುಕಿನ, ಚಾಲಾಕಿಯ ಉದ್ಯಮಿಯಾಗಬೇಕು ಎಂದು ಸಚಿವ ಓರಂ ಕರೆ ನೀಡಿದರು. 

ಅಂದಹಾಗೆ ಮದ್ಯ ದೊರೆ ವಿಜಯ್‌ ಮಲ್ಯ ಅವರು ಭಾರತೀಯ ಬ್ಯಾಂಕುಗಳ ಸಮೂಹಕ್ಕೆ 9,000 ಕೋಟಿ ರೂ. ಸಾಲವನ್ನು ಸುಸ್ತಿ ಇರಿಸಿ ಲಂಡನ್‌ಗೆ ಪಲಾಯನಮಾಡಿದ್ದು ಅವರ ವಿದೇಶಿ ಆಸ್ತಿಪಾಸ್ತಿಗಳ ಮುಟ್ಟುಗೋಲು ಮತ್ತು ಗಡೀಪಾರು ಪ್ರಕ್ರಿಯೆಯು ಈಗ ನಡೆಯುತ್ತಿದೆ. 

ವೇದಿಕೆಯಲ್ಲಿ ಪುಂಖಾನುಪುಂಖವಾಗಿ ತನ್ನ ಆಲೋಚನೆಗಳನ್ನು ಹರಿಯಬಿಟ್ಟ ಸಚಿವ ಓರಂ ಅವರು, “ನಾವು ಉದ್ಯಮಿಗಳಾಗಬೇಕಾದರೆ ಬುದ್ದಿವಂತರೂ, ಚುರುಕಿನವರೂ ಚಾಲಾಕಿಗಳೂ ಆಗಬೇಕು; ಉದ್ಯಮ ಸಂಬಂಧಿ ಮಾಹಿತಿಗಳನ್ನು, ಜ್ಞಾನವನ್ನು ಸಂಪಾದಿಸಬೇಕು; ಏಕೆಂದರೆ ಜ್ಞಾನವೇ ನಮ್ಮ ಶಕ್ತಿ; ಯಾರಲ್ಲಿ ಮಾಹಿತಿ, ಜ್ಞಾನ ಇರುತ್ತದೆಯೋ ಅವರೇ ಅಧಿಕಾರವನ್ನು ಪ್ರಯೋಗಿಸುತ್ತಾರೆ’ ಎಂದು ಹೇಳಿದರು. 

“ನೀವೆಲ್ಲ ವಿಜಯ್‌ ಮಲ್ಯ ಅವರನ್ನು ಟೀಕಿಸುತ್ತೀರಿ; ಆದರೆ ವಿಜಯ್‌ ಮಲ್ಯ ಯಾರು ? ಒಬ್ಬ ಚಾಲಾಕಿ ಮನುಷ್ಯ. ಅವರು ಕೆಲವು ಬುದ್ಧಿವಂತ ಜನರನ್ನು ತನ್ನ ಕೈಕೆಳಗೆ ಕೆಲಸಕ್ಕಿಟ್ಟುಕೊಂಡ ಮಹಾ ಚಾಲಕಿ, ಚುರುಕಿನ ಮನುಷ್ಯ. ಆತ ಅಲ್ಲಿ, ಇಲ್ಲಿ ಎಂಬಂತೆ ಬ್ಯಾಂಕರ್‌ಗಳೊಂದಿಗೆ, ರಾಜಕಾರಣಿಗಳೊಂದಿಗೆ, ಸರಕಾರದೊಂದಿಗೆ ಚಾಣಾಕ್ಷತೆಯಿಂದ ವ್ಯವಹರಿಸಿ ಅವರನ್ನು ಖರೀದಿಸಿದರು. ವಿಜಯ್‌ ಮಲ್ಯ ಅವರಂತೆ ಚಾಣಾಕ್ಷ, ಚಾಲಾಕಿ ಉದ್ಯಮಿಯಾಗುವುದಕ್ಕೆ ನಿಮ್ಮನ್ನು ಯಾರು ತಡೆದಿದ್ದಾರೆ? ಆದಿವಾಸಿಗಳು ವ್ಯವಸ್ಥೆಯ ಮೇಲೆ, ಬ್ಯಾಂಕರ್‌ಗಳ ಮೇಲೆ  ಪ್ರಭಾವ ಬೀರಬಾರದು ಎಂದು ಯಾರು ಹೇಳಿದ್ದಾರೆ?’ ಎಂದು ಸಚಿವ ಓರಂ ಹೇಳಿದರು. 

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.