ವಿಶೇಷ ಶಾಲಾ ಮಕ್ಕಳಿಗೂ ಬಿಸಿಯೂಟ, ಕ್ಷೀರಭಾಗ್ಯ
Team Udayavani, Jul 15, 2018, 6:00 AM IST
ಬೆಂಗಳೂರು: ರಾಜ್ಯದ ವಿಕಲಚೇತನ ಹಾಗೂ ಬುದ್ಧಿಮಾಂದ್ಯರ ವಿಶೇಷ ಶಾಲೆಯ ಮಕ್ಕಳಿಗೆ ಮುಂದಿನ ತಿಂಗಳಿನಿಂದ ಮಧ್ಯಾಹ್ನದ ಬಿಸಿಯೂಟದ ಜತೆಗೆ ಕ್ಷೀರಭಾಗ್ಯ ಯೋಜನೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟದಿಂದ ಶನಿವಾರ ಶಿಕ್ಷಕರ ಸದನದಲ್ಲಿ ಹಮ್ಮಿಕೊಂಡಿದ್ದ ಸ್ಪಂದನ-2018ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಿಸಿಯೂಟ ಮತ್ತು ಕ್ಷೀರಭಾಗ್ಯ ಯೋಜನೆ ವಿಸ್ತರಿಸಲಿದ್ದೇವೆ. ಈ ಕುರಿತು ಅಧಿಕಾರಿಗಳಿಗೆ ಅತಿ ಶೀಘ್ರದಲ್ಲೇ ನಿರ್ದೇಶನ ನೀಡಲಿದ್ದೇವೆ ಎಂದರು. ವಿಕಲಚೇತನರಿಗೆ ಒದಗಿಸುವ ಸೌಲಭ್ಯದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಅಥವಾ ಅವ್ಯವಹಾರ ನಡೆದರೂ ಸಹಿಸುವುದಿಲ್ಲ. ಈ ಬಗ್ಗೆ ದೂರು ಬಂದ ತಕ್ಷಣ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ವಿಶ್ವಮಟ್ಟದ ವಿಕಲಚೇತನರ ಒಲಿಂಪಿಕ್ಸ್ ಮುಂದಿನ ವರ್ಷ ಮಂಗಳೂರಿನಲ್ಲಿ ನಡೆಯಲಿದೆ. 2016ರ ವಿಕಲಚೇತನ ಕಾಯ್ದೆಯಡಿ 21 ರೀತಿಯ ವಿಕಲಚೇತನರಿಗೆ ಕಾರ್ಯಕ್ರಮ ರೂಪಿಸಲಾಗಿದೆ. ಇದಕ್ಕಾಗಿ ಐದು ಕೋಟಿ ರೂ.ಮೀಸಲಿಟ್ಟಿದ್ದೇವೆ. ರಾಷ್ಟ್ರೀಯ ಅಂಗವಿಕಲ ಹಣಕಾಸು ಅಭಿವೃದ್ಧಿ ನಿಗಮ ನೀಡಿರುವ ಸಾಲ ಸೌಲಭ್ಯದ ಸುಸ್ತಿ ಬಡ್ಡಿ ಮನ್ನಾ ಮಾಡಲು 4 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು. ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್, ಒಕ್ಕೂಟದ ಅಧ್ಯಕ್ಷ ಎಚ್.ವಿ. ಗೋಪಾಲಪ್ಪ, ಪ್ರಧಾನ ಕಾರ್ಯದರ್ಶಿ ವಸಂತಕುಮಾರ್ ಶೆಟ್ಟಿ, ಉಪಾಧ್ಯಕ್ಷ ಗೋವಿಂದರಾಜು ಉಪಸ್ಥಿತರಿದ್ದರು.
ಒಕ್ಕೂಟದ ಬೇಡಿಕೆ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬೇರ್ಪಡಿಸಿ ಸ್ವತಂತ್ರ ಇಲಾಖೆ ಮಾಡಿ, ಪ್ರತ್ಯೇಕ ಬಜೆಟ್ ಮೀಸಲಿಡಬೇಕು. ವಿಕಲಚೇತನರ ಅಭಿವೃದ್ಧಿ ನಿಗಮ ಸ್ಥಾಪಿಸಿ, ವಿಕಲಚೇತನರು ಮತ್ತು ಬುದ್ಧಿಮಾಂದ್ಯರ ವಿಶೇಷ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುವ ಶಿಕ್ಷಕರಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ದೊರೆಯುವ ಸೌಲಭ್ಯ, ಸೇವಾ ಭದ್ರತೆ ಒದಗಿಸಬೇಕು ಎಂದು ಒಕ್ಕೂಟದ ಅಧ್ಯಕ್ಷ ಎಚ್.ವಿ. ಗೋಪಾಲಪ್ಪ ಸರ್ಕಾರಕ್ಕೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ