ಕಾಶಿಪಟ್ಣ: ತೋಡಿನ ದಂಡೆ ಒಡೆದು ಗದ್ದೆಗೆ ನುಗ್ಗಿದ ನೀರು


Team Udayavani, Jul 15, 2018, 12:00 PM IST

15-july-12.jpg

ವೇಣೂರು : ನಿರಂತರವಾಗಿ ಸುರಿದ ಮಳೆಗೆ ತೋಡಿನ ದಂಡೆ ಒಡೆದು ಗದ್ದೆಗೆ ನೀರು ನುಗ್ಗಿ ಅಪಾರ ಪ್ರಮಾಣದ ಭತ್ತದ ಕೃಷಿಗೆ ಹಾನಿಯಾದ ಘಟನೆ ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾ.ಪಂ. ವ್ಯಾಪ್ತಿಯ ಕಿರೋಡಿ ಕಿರಿಂಗಲ್‌ ಪ್ರದೇಶದಲ್ಲಿ ಸಂಭವಿಸಿದೆ. ಸುಮಾರು 15 ಕುಟುಂಬಗಳ ಕೃಷಿಗೆ ಹಾನಿಯಾಗಿದೆ.

ಘಟನೆ ಏನು?
ಸುರಿಯುತ್ತಿರುವ ಭಾರೀ ಮಳೆಗೆ ಗದ್ದೆಯ ಬಳಿ ಇರುವ ತೋಡಿನ ದಂಡೆ ಒಡೆದು ನೀರು ಗದ್ದೆಗೆ ಹರಿದು ಕಿರಿಂಗಲ್‌ ಪ್ರದೇಶದ ಸುಮಾರು 25 ಎಕ್ರೆ ಭತ್ತದ ಕೃಷಿ ನಾಶವಾಗಿದೆ. ಈ ಬಗ್ಗೆ ಕಾಶಿಪಟ್ಣ ಗ್ರಾ.ಪಂ., ಗ್ರಾಮಕರಣಿಕರು ಕಂದಾಯ ಅಧಿಕಾರಿಗಳಿಗೆ, ತಹಶೀಲ್ದಾರರಿಗೆ, ಕೃಷಿ ಇಲಾಖೆ, ಜಲಾನಯನ ಇಲಾಖೆಗೆ ದೂರು ನೀಡಿದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂಬುದು ಗ್ರಾಮಸ್ಥರ ಅಳಲು.

ಜಲಾನಯನ ಇಲಾಖೆ ಹಾಗೂ ಗ್ರಾಮಕರಣಿಕರು ಒಂದೆರಡು ಬಾರಿ ಸ್ಥಳಕ್ಕೆ ಭೇಟಿ ನೀಡಿ ಮೇಲಧಿಕಾರಿಗಳಿಗೆ ತಿಳಿಸುತ್ತೇವೆ ಎಂದು ಹೋದವರು ಮತ್ತೆ ವಾಪಸ್‌ ಬರಲಿಲ್ಲ ಎನುತ್ತಾರೆ ಇಲ್ಲಿನ ರೈತರು. ತಹಶೀಲ್ದಾರರಿಗೆ ಕರೆ ಮಾಡಿದರೂ ಸ್ಥಳಕ್ಕೆ ಭೇಟಿ ನೀಡುತ್ತೇನೆ ಎಂಬ ಭರವಸೆ ಹೊರತು ಇದುವರೆಗೆ ಯಾರೂ ಭೇಟಿ ನೀಡಲಿಲ್ಲ ಎಂಬುದು ಗ್ರಾಮಸ್ಥರ ಆರೋಪ.

ಬೇಡಿಕೆ ಕಾಲು ಸಂಕದ್ದು, ಮಾಡಿದ್ದು ಕಿಂಡಿ ಅಣೆಕಟ್ಟು
ಈ ಗದ್ದೆ ಬಳಿ ಇರುವ ತೋಡಿಗೆ ಸಾರ್ವಜನಿಕರಿಗೆ ಹೋಗಲು ಕಾಲು ಸಂಕಕ್ಕೆ ಮನವಿ ನೀಡಿದ್ದು, ಇಲಾಖೆ ಕಿಂಡಿ ಅಣೆಕಟ್ಟು ನಿರ್ಮಿಸಿದೆ. ಇದರಿಂದಾಗಿಯೇ ಈ ಅನಾಹುತಕ್ಕೆ ಕಾರಣವಾಗಿದೆ. ಕಿರಿದಾದ ತೋಡು ಇದಾಗಿರುವುದರಿಂದ ಕಿಂಡಿ ಅಣೆಕಟ್ಟುವಿನಲ್ಲಿ ಕಸ-ಕಡ್ಡಿಗಳು ತುಂಬಿ ತೊಡಿನ ದಂಡೆ ಒಡೆದು ಗದ್ದೆಗೆ ನೀರು ನುಗ್ಗಿದೆ.

ಭಾರೀ ನಷ್ಟ
ಭತ್ತದ ಕೃಷಿಯನ್ನೇ ನಂಬಿದ್ದ ನಮಗೆ ಈ ಹಾನಿ ಭಾರೀ ನಷ್ಟ ಉಂಟು ಮಾಡಿದೆ. ಅಧಿಕಾರಿಗಳು ಶೀಘ್ರ ಸ್ಪಂದಿಸಿ ಕೃಷಿ ಮಾಡಲು ಅನುಕೂಲ ಮಾಡಿಕೊಡಬೇಕು.
-ಅರುಣ್‌ ಶೆಟ್ಟಿ, ಕೃಷಿಕ

ಸ್ಪಂದಿಸುವವರಿಲ್ಲ
ಭತ್ತದ ಕೃಷಿಯೇ ನಮ್ಮ ಬದುಕು. ಆದರೆ ನಮ್ಮ ಕಷ್ಟಕ್ಕೆ ಸ್ಪಂದಿಸುವವರು ಯಾರೂ ಇಲ್ಲ. ಪ್ರತಿಭಟಿಸುವ ಹಾಗೂ ಅಧಿಕಾರಿಗಳನ್ನು ಎಚ್ಚರಿಸುವ ಶಕ್ತಿ ನಮ್ಮಲ್ಲಿಲ್ಲ. ನಮ್ಮ ನೋವನ್ನು ಅರ್ಥ ಮಾಡಿಕೊಳ್ಳಿ ಎಂಬುದೇ ನಮ್ಮ ಮನವಿ.
-ಶೀನ ಪೂಜಾರಿ, ಕೃಷಿಕ

ಪರಿಹಾರ ಸಿಗಬಹುದು
ಕಾಶಿಪಟ್ಣ ಗ್ರಾಮದ ಕಿರೋಡಿ ಕಿರಿಂಗಲ್‌ ಪ್ರದೇಶಕ್ಕೆ ಭೇಟಿ ನೀಡಿ ಕೃಷಿಕರ ಹಾನಿ ಬಗ್ಗೆ ರಿಪೋರ್ಟ್‌ ಮಾಡಿ ತಹಶೀಲ್ದಾರ್‌ರ ಗಮನಕ್ಕೆ ತಂದಿದ್ದೇವೆ. ಗದ್ದೆಗೆ ಮಣ್ಣು, ಮರಳು ಬಿದ್ದು ಹಾನಿಯಾದ ರೈತರಿಗೆ ಪರಿಹಾರ ಸಿಗಬಹುದು. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಗದ್ದೆಗೆ ಹರಿಯುವ ನೀರನ್ನು ನಿಲ್ಲಿಸಲು ಕಷ್ಟಸಾಧ್ಯ. ಮುಂದಿನ ದಿನಗಳಲ್ಲಿ ಸ್ಥಳಕ್ಕೆ ತಹಶೀಲ್ದಾರ್‌ ಭೇಟಿ ನೀಡಬಹುದು.
 -ಸುಜಿತ್‌
ಗ್ರಾಮಲೆಕ್ಕಿಗ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.