ಸೂರ್ಯಂಗೂ ಚಂದ್ರಂಗೂ…ಖ್ಯಾತಿಯ ಸಾಹಿತಿ ಎಂ.ಎನ್.ವ್ಯಾಸರಾವ್ ನಿಧನ
Team Udayavani, Jul 15, 2018, 1:32 PM IST
ಬೆಂಗಳೂರು: ಗೀತರಚನಕಾರ, ಕವಿ, ಕಥೆಗಾರ, ಕಾದಂಬರಿಕಾರರಾದ ಎಂ.ಎನ್. ವ್ಯಾಸರಾವ್ ಅವರು ಬೆಂಗಳೂರಿನ ನಿವಾಸದಲ್ಲಿ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.
ಜನವರಿ 27, 1945ರಂದು ಮೈಸೂರಿನಲ್ಲಿ ಜನಿಸಿದ್ದ ಅವರು 15 ಕ್ಕೂ ಹೆಚ್ಚು ಕ್ಯಾಸೆಟ್ಗಳಿಗೆ ಗೀತೆಗಳು, 35 ಕ್ಕೂ ಹೆಚ್ಚು ಜನಪ್ರಿಯ ಧಾರಾವಾಹಿಗಳಿಗೆ ಸಾಹಿತ್ಯ ಒದಗಿಸಿದ್ದರು.
ವ್ಯಾಸರಾವ್ ನಿಧನಕ್ಕೆ ಚಿತ್ರರಂಗದ ಗಣ್ಯರು, ಸಾಹಿತಿಗಳು ತೀವ್ರ ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.
ಶುಭಮಂಗಳ ಚಿತ್ರದ ಸೂರ್ಯಂಗೂ ಚಂದ್ರಂಗೂ ಬಂದಾರೆ ಮುನಿಸು.. , ನೀನಿಲ್ಲದೇ ನನಗೇನಿದೆ.., ಚಂದ ಚಂದ ಸಂಗಾತಿ ನೋಟವೇ ಚಂದ ಮುಂತಾದವರು ಅವರು ಬರೆದ ಜನಪ್ರಿಯ ಗೀತ ಸಾಹಿತ್ಯಗಳು.
ಯುನೈಟೆಡ್ ಬ್ಯಾಂಕ್ನಲ್ಲಿ ಅಧಿಕಾರಿಯಾಗಿ 34 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ