ನನ್ನ ಲೀಡ್ ಕಂಡು ಪ್ರಧಾನಿ ಮೋದಿ ನಡುಗಿ ಹೋಗಿದ್ದರು!: ಸಚಿವ ಜಿಟಿಡಿ
Team Udayavani, Jul 15, 2018, 3:33 PM IST
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ 36,042 ಅಂತರದ ನನ್ನ ಲೀಡ್ ಕಂಡು ಪ್ರಧಾನಿ ನರೇಂದ್ರ ಮೋದಿಯೇ ನಡುಗಿ ಹೋಗಿದ್ದರು.ಭಾರತದ ಭೂಪಟದಲ್ಲಿ ಈ ಚುನಾವಣೆಯನ್ನು ದಾಖಲಿಸಿದ್ದೀರಿ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಮತದಾರರಿಗೆ, ಕಾರ್ಯಕರ್ತರಿಗೆ ಸ್ವಕ್ಷೇತ್ರದಲ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಲಿಂಗದೇವರ ಕೊಪ್ಪಲಿನಲ್ಲಿ ಜೆಡಿಎಸ್ ಕಾರ್ಯಕರ್ತರಿಗೆ ಕೃತಜ್ಞತಾ ಸಭೆಯಲ್ಲಿ ಜಿ.ಟಿ.ದೇವೇಗೌಡ ಅವರು ಸುಧೀರ್ಘ ಭಾಷಣ ಮಾಡಿ ಈ ಹೇಳಿಕೆ ನೀಡಿದ್ದಾರೆ.
ಹೊಲದಲ್ಲಿ ಕೆಲಸ ಮಾಡಿಕೊಂಡಿದ್ದ ನನ್ನನ್ನು, ಸೊಸೈಟಿಯಲ್ಲಿ ಅಕ್ಕಿ ತೂಕ ಮಾಡಿಕೊಂಡಿದ್ದ ನನ್ನನ್ನು ಈ ಸ್ಥಾನದಲ್ಲಿ ನಿಲ್ಲಿಸಿದ್ದೀರಿ ನಿಮ್ಮ ಪಾದ ಪೂಜೆ ಮಾಡಿ ನಾನು ಋಣ ತೀರಿಸಬೇಕಾಗಿದೆ ಎಂದರು.
ಚಾಮುಂಡೇಶ್ವರಿ ಜನ 5 ವರ್ಷ ಬಹಳ ಕಷ್ಟ ಪಟ್ಟಿದ್ದಾರೆ. ಬಹಳ ಮಂದಿ ಕೇಸ್ ಹಾಕಿಸಿಕೊಂಡಿದ್ದಾರೆ. ಕೆಲವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಹೇಳಿ ಕಿರುಕುಳ ನೀಡಿದ್ದಾರೆ, ನಮ್ಮ ಜನರಿಗೆ ಕೊಡಬಾರದ ಕಷ್ಟ ಕೊಟ್ಟಿದ್ದಾರೆ. ಪಂಚಾಯತ್ ಸದಸ್ಯರಲ್ಲದವರೂ ಬಂದು ಹಾರೆ ಹಿಡಿದು ಗುದ್ದಲಿ ಪೂಜೆ ಮಾಡಿದ್ದಾರೆ. ಮನೆಯ ಒಳಗೆ ಕಣ್ಣೀರು ಹಾಕಿದ್ದೆ, ಜನರಿಗೆ ತೋರಿಸಿಕೊಳ್ಳಲಿಲ್ಲ. ಎಲ್ಲವನ್ನೂ ಸಹಿಸಿಕೊಂಡಿದ್ದೆ ಎಂದರು.
ಸಭಾ ಕಾರ್ಯಕ್ರಮಕ್ಕೂ ಮುನ್ನ 25,000 ಕ್ಕೂ ಹೆಚ್ಚು ಬೆಂಬಲಿಗರಿಗೆ ಭರ್ಜರಿ ಬಾಡೂಟವನ್ನು ಬಡಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು