ಸೋರುತಿಹುದು ಶಾಲೆ ಛಾವಣಿ


Team Udayavani, Jul 16, 2018, 11:57 AM IST

2000_2.jpg

ಕೊಂಡ್ಲಹಳ್ಳಿ: ಬಿ.ಜಿ. ಕೆರೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮುತ್ತಿಗಾರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸ್ಥಿತಿ ಮಳೆಗಾಲದಲ್ಲಿ ಹೇಳತೀರದಾಗಿದೆ. ಏಕೆಂದರೆ ಮಳೆ ಬಂದರೆ ಶಾಲೆಯ ಕೊಠಡಿಗಳ ಛಾವಣಿ ಸೋರುತ್ತಿದೆ.

1948 ರಲ್ಲಿ ನಿರ್ಮಾಣಗೊಂಡ ಈ ಶಾಲೆಯಲ್ಲಿ ಒಟ್ಟು 6 ಕೊಠಡಿಗಳಿವೆ. ಅದರಲ್ಲಿ ಎರಡು ಕೊಠಡಿಗಳನ್ನು 2011-12ನೇ ಸಾಲಿನಲ್ಲಿ ಪುನರ್‌ ನಿರ್ಮಾಣ ಮಾಡಲಾಗಿದ್ದು, ಆರ್‌ಸಿಸಿ ಹಾಕಲಾಗಿದೆ. ಉಳಿದ ನಾಲ್ಕರಲ್ಲಿ 7 ಮತ್ತು 4 ನೇ ತರಗತಿಗಳ ಕೊಠಡಿಗಳ ಮೇಲ್ಛಾವಣಿಗಳಿಗೆ ಸಿಮೆಂಟ್‌ ಶೀಟ್‌ ಅಳವಡಿಸಲಾಗಿದ್ದು, ಅವು ದುಸ್ಥಿತಿಯಲ್ಲಿವೆ.
 
ನಿರ್ಮಾಣಗೊಂಡು ದಶಕಗಳೇ ಕಳೆದಿರುವ ಈ ಕೊಠಡಿಗಳಲ್ಲಿ ಸ್ವಲ್ಪ ಮಳೆ ಬಂದರೂ ಕೊಠಡಿಯ ತುಂಬಾ ಮಳೆ ನೀರು ತುಂಬಿಕೊಳ್ಳುತ್ತದೆ. ಇದರಿಂದ ಮಳೆಗಾಲ ಬಂದರೆ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಸಂಕಷ್ಟ ಶುರುವಾಯಿತೆಂದೇ ಅರ್ಥ.

ಇನ್ನು ಮುಖ್ಯ ಶಿಕ್ಷಕರ ಕೊಠಡಿಯ ಕಥೆಯೇ ಬೇರೆ. ಇದು 1948ರಲ್ಲಿ ನಿರ್ಮಾಣವಾದ ಕಟ್ಟಡವಾಗಿದ್ದು, ಮಂಗಳೂರು ಕೆಂಪು ಹೆಂಚು ಹೊದೆಸಲಾಗಿದೆ. ಹೆಂಚು ಅಳವಡಿಸಿ ಬಹಳ ವರ್ಷಗಳಾಗಿದ್ದರಿಂದ ಅವು ಪುಡಿ ಪುಡಿಯಾಗಿವೆ. ಕೆಲವು ವರ್ಷಗಳ ಹಿಂದೆ ಹೆಂಚಿನ ಮೇಲ್ಛಾವಣಿ ಮೇಲೆ ಸಿಮೆಂಟ್‌ ಹಾಕಿ ದುರಸ್ತಿ ಮಾಡಲಾಗಿದೆ. 

ಇದರ ಮುಟ್ಟುಗಳು ಹಾಳಾಗಿದ್ದು ಮಳೆ ಬಂದಾಗ ನೀರು ಒಳ ನುಗ್ಗುತ್ತದೆ. ಕಳೆದ ಜೂನ್‌ ತಿಂಗಳಲ್ಲಿ ಸುರಿದ ಮಳೆಗೆ ಎರಡು ಕೊಠಡಿಗಳನ್ನು ಬಿಟ್ಟು ಉಳಿದ ಎಲ್ಲಾ ಕೊಠಡಿಗಳು ಜಲಾವೃತವಾಗಿದ್ದವು. ಇದರಿಂದ ಆಡಳಿತ ಕಚೇರಿಯ ಪರಿಕರಗಳು ಹಾಗೂ ಕಾಗದಪತ್ರಗಳನ್ನು ಸಂಪರಕ್ಷಣೆ ಮಾಡಲು ಕಷ್ಟವಾಗುತ್ತದೆ. ಆದ್ದರಿಂದ ಮುತ್ತಿಗಾರಹಳ್ಳಿ ಶಾಲಾ ಕೊಠಡಿ ದುರಸ್ತಿ ಅಥವಾ ಹೊಸ ಕಟ್ಟಡ ನಿರ್ಮಾಣಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಮುಂದಾಗಬೇಕಿದೆ.

ಭಾರೀ ಮಳೆಯಾದರೆ ಶಿಥಿಲಗೊಂಡಿರುವ ಕಟ್ಟಡಗಳು ಯಾವಾಗ ಬೇಕಾದರೂ ಕುಸಿಯಬಹುದು. ಶಾಲೆಯ ಸ್ಥಿತಿಗತಿ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. 
 ಎಚ್‌.ಜಿ. ನಾಗರಾಜ್‌, ಮುತ್ತಿಗಾರಹಳ್ಳಿ ಶಾಲೆ ಮುಖ್ಯ ಶಿಕ್ಷಕ.

ಇನ್ನಾದರೂ ಜನಪ್ರತಿನಿಧಿಗಳು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಶಾಲಾ ಕೊಠಡಿಗಳ ದುರಸ್ತಿ ಮಾಡಿಸಬೇಕು. ಹೊಸ ಕೊಠಡಿಗಳನ್ನು ಮಂಜೂರು ಮಾಡಬೇಕು.
 ಟಿ.ಪಿ. ತಿಪ್ಪೇರುದ್ರಪ್ಪ, ಎಸ್‌ಡಿಎಂಸಿ ಅಧ್ಯಕ್ಷ.

„ಕೊಂಡ್ಲಹಳ್ಳಿ ರಾಮಚಂದ್ರಪ್ಪ

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.