ರಾಜ್ಯಸಭೆಗೆ ಆಡಳಿತ ಪಕ್ಷದ ನಾಯಕ ಯಾರು?


Team Udayavani, Jul 17, 2018, 6:00 AM IST

27.jpg

ನವದೆಹಲಿ: ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಕೇಂದ್ರ ಸಚಿವ ಅರುಣ್‌ ಜೇಟ್ಲಿ ಮುಂಗಾರು ಅಧಿವೇಶನದಲ್ಲಿ ಭಾಗವಹಿಸುತ್ತಿಲ್ಲ. ಹೀಗಾಗಿ, ಜು.18ರಿಂದ ಶುರುವಾಗುವ ಅಧಿವೇಶನದಲ್ಲಿ ರಾಜ್ಯಸಭೆ ಆಡಳಿತ ಪಕ್ಷದ ನಾಯಕ ಯಾರು ಎಂಬ ಜಿಜ್ಞಾಸೆ ಶುರುವಾಗಿದೆ. ಹೀಗಾಗಿ, ಮೇಲ್ಮನೆಯಲ್ಲಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ನಡೆಸಲಿರುವ ಟೀಕಾ ಪ್ರಹಾರ ಎದುರಿಸುವ ಪ್ರಬಲ ನಾಯಕನನ್ನು ಬಿಜೆಪಿ ಶೋಧಿಸುತ್ತಿದೆ. 

ಜಮ್ಮು -ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಕುಸಿತ, ಕರ್ನಾಟಕ, ಮಹಾರಾಷ್ಟ್ರ ಸೇರಿ ದೇಶಾದ್ಯಂತದ ಥಳಿತ ಪ್ರಕರಣ ಸೇರಿದಂತೆ ಹಲವಾರು ವಿಚಾರ ಗಳನ್ನು ಮುಂದಿಟ್ಟು ಕೊಂಡು ಪ್ರತಿಪಕ್ಷಗಳು ವಾಗ್ಧಾಳಿ ನಡೆಸಲಿವೆ. ಜೇಟ್ಲಿ ಸ್ಥಾನಕ್ಕೆ ಕೇಂದ್ರ ಸಚಿವರಾದ ವಿಜಯ ಗೋಯಲ್‌, ಜೆ.ಪಿ.ನಡ್ಡಾ ಹೆಸರು ಕೇಳಿ ಬಂದಿದೆ. ಆದರೆ ಗುಲಾಂ ನಬಿ ಆಜಾದ್‌, ಶರದ್‌ ಯಾದವ್‌ರಂಥ ಪ್ರಮುಖ ನಾಯಕರನ್ನೆದುರಿಸಲು ಅವರು ಸಮರ್ಥರೇ ಎಂಬ ಪ್ರಶ್ನೆ ಬಿಜೆಪಿಯದ್ದು. ಹೀಗಾಗಿ, ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ದೂರ ಸಂಪರ್ಕ ಖಾತೆ ಸಚಿವ ರವಿಶಂಕರ ಪ್ರಸಾದ್‌ ಈ ಸವಾಲು ಎದುರಿಸಲು ಸಮರ್ಥರು ಎಂಬ ಅಂಬೋಣ ಪಕ್ಷದ ಹಿರಿಯ ನಾಯಕ ರೊಬ್ಬರದ್ದು ಎಂದು “ಇಂಡಿಯಾ ಟುಡೇ’ ವರದಿ ಮಾಡಿದೆ.

ಇಂದು ಸಭೆ: 18ರಿಂದ ಅಧಿವೇಶನ ಶುರುವಾಗುವ ಹಿನ್ನೆಲೆಯಲ್ಲಿ ಲೋಕಸಭೆ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಪ್ರಮುಖ ಪಕ್ಷಗಳ ನಾಯಕರ ಜತೆ ಮಂಗಳವಾರ ಸಭೆ ನಡೆಸಲಿದ್ದಾರೆ. ಸಂಸತ್‌ನಲ್ಲಿ ಈಗಾಗಲೇ ಮಂಡನೆಯಾಗಿರುವ ಮತ್ತು ಆಗಲಿರುವ ಮಸೂದೆಗಳ ಅಂಗೀಕಾರದ ಬಗ್ಗೆ ಪಕ್ಷಗಳ ಸಹಕಾರ ಕೋರಲಿದ್ದಾರೆ. ಪ್ರಧಾನಿ ಮೋದಿ ಈ ಸಭೆಯಲ್ಲಿ ಭಾಗವಹಿಸುತ್ತಿಲ್ಲ. ಇದೇ ವೇಳೆ, ಸೋಮವಾರ ಪ್ರತಿಪಕ್ಷಗಳು ಸಭೆ ಸೇರಿ, ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಏನೇನು ಕಾರ್ಯ ತಂತ್ರಗಳನ್ನು ಹೆಣೆಯಬಹುದು ಎಂಬ ಬಗ್ಗೆ ಚರ್ಚಿಸಿವೆ.

ಬೆಂಬಲ ಕೋರಿದ ಟಿಡಿಪಿ: ಕೇಂದ್ರ ಸರ್ಕಾರದ ವಿರುದ್ಧ ಮಂಡಿಸಲಿರುವ ಅವಿಶ್ವಾಸ ಗೊತ್ತುವಳಿಗೆ ಬೆಂಬಲ ನೀಡು ವಂತೆ ಬಿಜೆಪಿಯೇತರ ಮತ್ತು ಕಾಂಗ್ರೆಸೇತರ ಪಕ್ಷಗಳಿಗೆ ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಮನವಿ ಮಾಡಿದ್ದಾರೆ. ಈ ಬಗ್ಗೆ ಪತ್ರ ಬರೆದಿರುವ ಅವರು, ಆಂಧ್ರಕ್ಕೆ ವಾಗ್ಧಾನ ಮಾಡಿದ ವಿಶೇಷ ಸ್ಥಾನಮಾನ ನೀಡದಿರುವ ಕೇಂದ್ರದ ವಿರುದ್ಧ ಮಂಡಿ ಸಲಿರುವ ಅವಿಶ್ವಾಸ ಗೊತ್ತುವಳಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ರಾಹುಲ್‌ ಪತ್ರ
ಹಾಲಿ ಅಧಿವೇಶನದಲ್ಲಿಯೇ ಮಹಿಳಾ ಮೀಸಲು ಮಸೂದೆ ಅಂಗೀಕರಿ ಸುವಂತೆ ಪ್ರಧಾನಿ ಮೋದಿ ಯವರನ್ನು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ. ಅದಕ್ಕಾಗಿ ಪಕ್ಷ ಷರತ್ತಿಲ್ಲದೆ ಬೆಂಬಲ ನೀಡುವುದಾಗಿ ಹೇಳಿ ಪ್ರಧಾನಿಗೆ ಪತ್ರ ಬರೆದಿದ್ದಾರೆ. ವಿಧಾನಸಭೆಗಳಲ್ಲಿ, ಸಂಸತ್‌ನಲ್ಲಿ ಮಹಿಳೆಯರಿಗೆ ಹೆಚ್ಚಿನ ಸ್ಥಾನ ನೀಡುವ ಸಮಯ ಬಂದಿದೆ ಎಂದಿದ್ದಾರೆ. 

ಟಾಪ್ ನ್ಯೂಸ್

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.