ಅಂಚೆ ಕಚೇರಿಗಳಲ್ಲಿ ಆಧಾರ್‌: ಸೇವೆ ಲಭ್ಯತೆ ಸುಲಭವಾಗಬೇಕು


Team Udayavani, Jul 17, 2018, 6:00 AM IST

34.jpg

ಆಧಾರ್‌ ಸೇವೆಯನ್ನು ಇನ್ನಷ್ಟು ಸುಲಭಗೊಳಿಸುವ ಸರಕಾರದ ಪ್ರಯತ್ನ ಸ್ವಾಗತಾರ್ಹ. ಗ್ಯಾಸ್‌ ಸಬ್ಸಿಡಿಯಿಂದ ಹಿಡಿದು ಆದಾಯ ಕರ ಪಾವತಿ ಸುವಲ್ಲಿಯ ತನಕ ಈಗ ಪ್ರತಿಯೊಂದು ಸರಕಾರಿ ಸೌಲಭ್ಯಕ್ಕೆ ಆಧಾರ್‌ ಕಡ್ಡಾಯಗೊಳಿಸಿರುವಾಗ ಅದಕ್ಕೆ ಸಂಬಂಧಿಸಿದ ದೂರುದುಮ್ಮಾನಗಳ ಪರಿಹಾರವೂ ಜನರ ಕೈಗೆಟುಕಿನಲ್ಲಿ ಇರಬೇಕಾದುದು ಅಪೇಕ್ಷಣೀಯ. ಈ ನಿಟ್ಟಿನಲ್ಲಿ ಎಲ್ಲ ಅಂಚೆ ಕಚೇರಿಗಳಲ್ಲಿ, ತಾಲೂಕು ಕಚೇರಿಗಳಲ್ಲಿ ಮತ್ತು ಪಂಚಾಯತ್‌ ಕಚೇರಿಗಳಲ್ಲಿ ಆಧಾರ್‌ ಸೇರ್ಪಡೆ, ತಿದ್ದುಪಡಿ ಇತ್ಯಾದಿ ಸೌಲಭ್ಯಗಳನ್ನು ಒದಗಿಸಿರುವುದರಿಂದ ಜನರ ದೊಡ್ಡದೊಂದು ಸಮಸ್ಯೆ ನಿವಾರಣೆಯಾದಂತಾಗಿದೆ. 

ಆಧಾರ್‌ ಪ್ರಾರಂಭವಾಗಿ 10 ವರ್ಷವಾಗುತ್ತಾ ಬಂದರೂ ಅದರ ಗೊಂದಲವಿನ್ನೂ ಪೂರ್ತಿಯಾಗಿ ಬಗೆಹರಿದಿಲ್ಲ. ಆರಂಭದಿಂದಲೇ ಆಧಾರ್‌ ಕಾರ್ಡ್‌ ಮಾಡಿಸುವ ಕಾರ್ಯ ಅಧ್ವಾನಗಳಿಂದ ಕೂಡಿತ್ತು. ಅಂತೂ ಇಂತೂ ಬಹುತೇಕ ಜನರಿಗೆ ಆಧಾರ್‌ ಹಂಚಿಕೆಯಾಗಿದೆ. ಆದರೆ ಅದರಲ್ಲಿ ನೂರಾರು ತಪ್ಪುಗಳಿರುವ ಕುರಿತು ಪುಂಖಾನುಪುಂಖವಾಗಿ ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ತಾಲೂಕು ಕಚೇರಿಗಳಲ್ಲಿ ಮತ್ತು ಅಂಚೆ ಕಚೇರಿಗಳಲ್ಲಿ ಆಧಾರ್‌ ತಿದ್ದುಪಡಿ ಸೌಲಭ್ಯವನ್ನು ಕಳೆದ ವರ್ಷವೇ ಪ್ರಾರಂಭಿಸಿದ್ದರೂ ಅದು ಇನ್ನಷ್ಟು ಗೊಂದಲಕ್ಕೆ ಕಾರಣವಾಗಿತ್ತು. 

ಎಲ್ಲಿಯೂ ಸಮರ್ಪಕ ಆಧಾರ್‌ ಸೇವೆ ದೊರಕದೆ ಜನರು ಕಂಗಾಲಾಗಿದ್ದರು. ತಾಲೂಕಿನ ಒಂದು ಅಥವಾ ಎರಡು ಅಂಚೆ ಕಚೇರಿಗಳಲ್ಲಿ ಮಾತ್ರ ಆಧಾರ್‌ ಸೇವೆ ಲಭಿಸುತ್ತಿತ್ತು. ಇದು ಕೂಡಾ ಅಂಚೆ ಸಿಬಂದಿಗಳ ಮರ್ಜಿಯನ್ನು ಹೊಂದಿಕೊಂಡಿತ್ತು.ಮೊದಲು ಬಂದ ಐದು ಅಥವಾ ಹತ್ತು ಜನರಿಗೆ ಮಾತ್ರ ಸೇವೆ ಸಿಗುತ್ತಿದ್ದ ಕಾರಣ ಜನರು ಮುಂಜಾನೆಯೇ ಎದ್ದು ಅಂಚೆ ಕಚೇರಿ ಮುಂದೆ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದರು. ಕಚೇರಿ ಮತ್ತಿತರ ನಿತ್ಯ ಕಾರ್ಯಗಳಿಗೆ ಹೋಗುವವರಿಗೆ, ಹಿರಿಯರಿಗೆ ಇದರಿಂದ ತೊಂದರೆಯಾಗಿತ್ತು. ಇದೀಗ ಎಲ್ಲ ಅಂಚೆ ಕಚೇರಿಗಳಲ್ಲಿ ಈ ಸೌಲಭ್ಯ ಬಂದರೆ ದೊಡ್ಡದೊಂದು ಸಮಸ್ಯೆ ಬಗೆಹರಿದಂತಾಗುತ್ತದೆ. ಬ್ಯಾಂಕುಗಳಲ್ಲೂ ಆಧಾರ್‌ ಸೌಲಭ್ಯ ಪ್ರಾರಂಭಿಸಬೇಕೆಂದು ಹೇಳಲಾಗಿತ್ತು. ಆದರೆ ಈ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಎಲ್ಲ ಬ್ಯಾಂಕ್‌ಗಳು ಮುಂದಾಗಿರಲಿಲ್ಲ. 

ಇದಕ್ಕೂ ಮಿಗಿಲಾಗಿ ಆಧಾರ್‌ ನೋಂದಣಿ ಸರಕಾರಿ ವ್ಯವಸ್ಥೆಯಡಿಗೆ ಬಂದಿರುವುದು ಅದರ ಸುರಕ್ಷತೆಯ ಕುರಿತಾಗಿದ್ದ ಆತಂಕವನ್ನು ದೂರ ಮಾಡಿದೆ. ಹಿಂದೆ ಆಧಾರ್‌ ನೋಂದಣಿ ಮಾಡುವ ಹೊಣೆಯನ್ನು ಖಾಸಗಿಯವರಿಗೆ ಹೊರಗುತ್ತಿಗೆ ವಹಿಸಿದ ಪರಿಣಾಮವಾಗಿ ಹಲವು ಅವ್ಯವಹಾರಗಳಿಗೆ ರಹದಾರಿ ಮಾಡಿಕೊಟ್ಟಂತಾಗಿತ್ತು. ಆಧಾರ್‌ ನೋಂದಣಿ ಸಿಬಂದಿ ಲಂಚ ಪಡೆದುಕೊಂಡು ಅನರ್ಹ ವ್ಯಕ್ತಿಗಳಿಗೂ ಆಧಾರ್‌ ನೀಡಿರುವ ಕುರಿತು ಹಲವಾರು ದೂರುಗಳು ಬಂದಿದ್ದವು. 

ಇದೀಗ ಸರಕಾರದಡಿಯಲ್ಲಿರುವ ಕಚೇರಿಯಲ್ಲೇ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಆಗುತ್ತದೆ ಉತ್ತರದಾಯಿ ವ್ಯವಸ್ಥೆಯೊಂದರ ಸುಪರ್ದಿಯಲ್ಲಿ ತಮ್ಮ ರಹಸ್ಯ ಮಾಹಿತಿಗಳು ಇವೆ ಎಂಬ ಭರವಸೆಯಾದರೂ ಇರುತ್ತದೆ. ಆದರೆ ಅಂಚೆ ಕಚೇರಿಗಳು ಅಥವ ಪಂಚಾಯತ್‌ ಕಚೇರಿಗಳ ಮೇಲೆ ಆಧಾರ್‌ ಸೇವೆ ಹೊಣೆ ವಹಿಸುವ ಮೊದಲು ಸಮರ್ಪಕ ಮೂಲಸೌಕರ್ಯ ಮತ್ತು ತರಬೇತಿ ನೀಡಬೇಕು.ಆಧಾರ್‌ಗಾಗಿ ಪ್ರತ್ಯೇಕ ಕಂಪ್ಯೂಟರ್‌ ಹಾಗೂ ಇನ್ನಿತರ ಉಪಕರಣಗಳನ್ನು ಒದಗಿಸುವುದರ ಜತೆಗೆ ವಿದ್ಯುತ್‌ ಕೈಕೊಟ್ಟರೆ ಮಾಹಿತಿ ದಾಖಲೀಕರಣ ಮುಂದುವರಿಸಲು ಅನುಕೂಲವಾಗುವಂತೆ ವಿದ್ಯುತ್‌ ಬ್ಯಾಕ್‌ಅಪ್‌ ವ್ಯವಸ್ಥೆಯನ್ನು ಮಾಡಿಕೊಡಬೇಕು. 

ಹಳ್ಳಿಗಳಲ್ಲಿ ವಿದ್ಯುತ್‌ ಮತ್ತು ಅಂತರ್ಜಾಲ ಆಗಾಗ ಕೈಕೊಡುವ ಸಮಸ್ಯೆಯಿರುತ್ತದೆ. ಈಗಾಗಲೇ ಪಡಿತರ ಅಂಗಡಿಯಲ್ಲಿ ಬಯೋ ಮೆಟ್ರಿಕ್‌ ವ್ಯವಸ್ಥೆ ಅಳವಡಿಸಿದ ಬಳಿಕ ಜನರು ಅನುಭವಿಸುತ್ತಿರುವ ಬವಣೆಯೇ ಸಾಕಷ್ಟಿದೆ. ಸರ್ವರ್‌ ಸಮಸ್ಯೆ ಸಾಮಾನ್ಯವಾಗಿದ್ದು ಒಂದು ತಿಂಗಳ ಪಡಿತರ ಒಯ್ಯಲಿಕ್ಕಾಗಿ ಜನರು ಐದಾರು ಸಲ ಬಂದು ಹೋಗುತ್ತಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಇನ್ನು ಆಧಾರ್‌ ಸೇವೆಯೂ ಇದೇ ರೀತಿ ಆಗದಂತೆ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಡುವುದು ಸರಕಾರದ ಹೊಣೆ.  ಆಧಾರ್‌ಗೆ ಇನ್ನೂ ಸಾಂವಿಧಾನಿಕ ಮಾನ್ಯತೆ ದೊರಕಿಲ್ಲ. ಲೋಕಸಭೆಯಲ್ಲಿ ಹಣಕಾಸು ಮಸೂದೆ ರೂಪದಲ್ಲಿ ಆಧಾರ್‌ ಮಸೂದೆಯನ್ನು ಮಂಡಿಸಲಾಗಿದೆ. ಈ ನಡುವೆ ಬೃಹತ್‌ ಪ್ರಮಾಣದಲ್ಲಿ ಆಧಾರ್‌ ಮಾಹಿತಿ ಸೋರಿಕೆಯಾಗುತ್ತಿರುವ ಕುರಿತು ಹಾಹಾಕಾರ ಉಂಟಾಗಿತ್ತು. 

ಆಧಾರ್‌ನ ಕಾನೂನು ಮಾನ್ಯತೆಯನ್ನು ಪ್ರಶ್ನಿಸಿದ 30ಕ್ಕೂ ಹೆಚ್ಚು ದೂರುಗಳು ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿಯಿವೆ. ಆಧಾರ್‌ನಿಂದ ಖಾಸಗಿತನದ ಹಕ್ಕು ಉಲ್ಲಂಘನೆಯಾಗುತ್ತಿದೆಯೇ ಎಂಬ ಪ್ರಶ್ನೆಗೂ ಇನ್ನೂ ಸಮರ್ಪಕ ಉತ್ತರ ಸಿಕ್ಕಿಲ್ಲ. ಈ ಎಲ್ಲ ಗೊಂದಲಗಳು ಬಗೆಹರಿದರೆ ಮಾತ್ರ ಆಧಾರ್‌ ನಂಬಿಕಾರ್ಹವಾಗಬಹುದು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.