ಯಮನಿಂದ ನಿಯಮದ ಅರಿವು
Team Udayavani, Jul 17, 2018, 11:18 AM IST
ಬೆಂಗಳೂರು: ಸಂಚಾರ ನಿಯಮ ಪಾಲನೆಯ ಅರಿವು ಮೂಡಿಸಲು ಇತ್ತೀಚೆಗೆ ಹಲಸೂರು ಗೇಟ್ ಠಾಣೆ ವ್ಯಾಪ್ತಿಯಲ್ಲಿ ಯಮ ಧರ್ಮರಾಯನ ವೇಷ ಧರಿಸಿ ಅರಿವು ಮೂಡಿಸಿದ್ದ ರಂಗಭೂಮಿ ಕಲಾವಿದ ವೀರೇಶ್ ಸೋಮವಾರ ಹೈಗ್ರೌಂಡ್ಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೂಮ್ಮೆ ಯಮ ಧರ್ಮರಾಯನ ವೇಷಧರಿಸಿ ಜಾಗೃತಿ ಮೂಡಿಸಿದರು.
ಚಾಲುಕ್ಯ ವೃತ್ತ ಸುತ್ತ-ಮುತ್ತ ಸಂಚಾರ ನಿಯಮ ಉಲ್ಲಂ ಸುವ ಸವಾರರನ್ನು ತಡೆದು, ಶಿರಾಸ್ತ್ರಾಣ ಧರಿಸದೆ ವಾಹನ ಚಲಾಯಿಸಿದರೆ ನಿಮ್ಮ ಬೆನ್ನು ಬೀಳುತ್ತೇನೆ ಎಂದು ಎಚ್ಚರಿಸುವ ಮೂಲಕ ಅರಿವು ಮೂಡಿಸಿದರು.
ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಯಮ ಧರ್ಮರಾಯ ವೇಷಧಾರಿ ವೀರೇಶ್, ಕಳೆದ ವರ್ಷ ಜೂನ್ 23ರಂದು ಗಂಗಾವತಿಯಿಂದ ಕೊಪ್ಪಳಕ್ಕೆ ಬೈಕ್ನಲ್ಲಿ ಹೋಗುವಾಗ ನನ್ನ ಸಹೋದರ ರಸ್ತೆ ಅಪಘಾತವಾಗಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಮೂರು ದಿನಗಳ ಕೋಮಸ್ಥಿತಿಯಲ್ಲಿದ್ದು, ಬಳಿಕ ಮೃತಪಟ್ಟಿದ್ದ. ಘಟನೆ ವೇಳೆ ಆತ ಹೆಲ್ಮೆಟ್ ಧರಿಸಿರಲಿಲ್ಲ. ಹೀಗಾಗಿ ಹಲಸೂರು ಗೇಟ್ ಠಾಣೆ ಇನ್ಸ್ಪೆಕ್ಟರ್ ಮೊಹಮ್ಮದ್ ಅಲಿ ಕಾರ್ಯಕ್ರಮವೊಂದರಲ್ಲಿ ಅರಿವು ಮೂಡಿಸುವ ಆಂದೋಲನಕ್ಕೆ ಮನವಿ ಮಾಡಿದ ಕೂಡಲೇ ಒಪ್ಪಿಕೊಂಡೆ ಎಂದು ಹೇಳಿದರು. ವೀರೇಶ್, ಶ್ರೀ ವಿವೇಕಾನಂದ ಕಲಾಕೇಂದ್ರದ ಸಂಯೋಜಕರಾಗಿ ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್