ತಿರುಪತಿ ತಿರುಮಲ ದೇವಸ್ಥಾನ ಆರು ದಿನ ಮುಚ್ಚುವ ನಿರ್ಧಾರ ಹಿಂದಕ್ಕೆ
Team Udayavani, Jul 17, 2018, 3:39 PM IST
ತಿರುಪತಿ : ವಿಶ್ವ ವಿಖ್ಯಾತ ತಿರುಪತಿ ತಿರುಮಲ ದೇವಸ್ಥಾನವನ್ನು ಮುಂದಿನ ಆಗಸ್ಟ್ ತಿಂಗಳಲ್ಲಿ ಆರು ದಿನಗಳ ಕಾಲ ಸಂಪೂರ್ಣವಾಗಿ ಮುಚ್ಚುವ ನಿರ್ಧಾರವನ್ನು ದೇವಸ್ಥಾನದ ಆಡಳಿತ ಮಂಡಳಿ (TTD) ಹಿಂದೆಗೆದುಕೊಂಡಿದೆ.
ತಿರುಪತಿ ತಿರುಮಲ ದೇವಸ್ಥಾನವನ್ನು ಆರು ದಿನಗಳ ಕಾಲ ಮುಚ್ಚುವ ನಿರ್ಧಾರಕ್ಕೆ ವ್ಯಾಪಕ ಆಕ್ಷೇಪ, ಅಸಮಾಧಾನ ವ್ಯಕ್ತವಾದ ಕಾರಣ ನಿರ್ಧಾರವನ್ನು ಹಿಂಪಡೆಯಲಾಗಿದೆ ಎಂದು ದೇವಳದ ಮೂಲಗಳು ತಿಳಿಸಿವೆ.
ದೇವಸ್ಥಾನಕ್ಕೆ ಭೇಟಿ ನೀಡುವವರು ಈಗಿನ್ನು ಆಗಸ್ಟ್ 11 ಮತ್ತು 12ರಂದು ಸಣ್ಣ ಸಣ್ಣ ತಂಡಗಳಲ್ಲಿ ದೇವಳವನ್ನು ಸಂದರ್ಶಿಸಬಹುದಾಗಿದೆ ಎಂದು ತಿಳಿದುಬಂದಿದೆ.
ಈ ಮೊದಲು ದೇವಸ್ಥಾನದ ಆವರಣವನ್ನು ಧಾರ್ಮಿಕವಾಗಿ ಶುದ್ಧೀಕರಿಸುವ ಮಹಾ ಸಂಪ್ರೋಕ್ಷಣ ವಿಧಿಯನ್ನು ನೆರವೇರಿಸುವುದಕ್ಕಾಗಿ ಆರು ದಿನಗಳ ಆಗಸ್ಟ್ನಲ್ಲಿ ದೇವಳ ಸಂಕೀರ್ಣವನ್ನು ಸಂಪೂರ್ಣವಾಗಿ ಮುಚ್ಚುವ ನಿರ್ಧಾರವನ್ನು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ವಿಶ್ವಸ್ಥ ಮಂಡಳಿ ತೆಗೆದುಕೊಂಡಿತ್ತು. ಹಾಗೆ ಮಾಡಿದಲ್ಲಿ ಅದು ಇದೇ ಮೊದಲ ಬಾರಿಗೆ ದೇವಳವನ್ನು ಆರು ದಿನಗಳ ಕಾಲ ಮುಚ್ಚಿದಂತಾಗುತ್ತಿತ್ತು.
ಆದರೆ ಟಿಟಿಡಿ ಯ ಈ ನಿರ್ಧಾರಕ್ಕೆ ಭಕ್ತಾದಿಗಳಿಂದ ಭಾರೀ ಆಕ್ಷೇಪ, ಅಸಮಾಧಾನ ವ್ಯಕ್ತವಾಗಿತ್ತು. ಮಾತ್ರವಲ್ಲದೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಕೂಡ ಟಿಟಿಡಿ ತನ್ನ ಈ ನಿರ್ಧಾರವನ್ನು ಪುನರ್ ಚಿಂತಿಸುವಂತೆ ಆಗ್ರಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ
Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ