‘ಇಂದಿರಾ ಕ್ಯಾಂಟೀನ್‌ ಜನಪ್ರಿಯ ಯೋಜನೆ’


Team Udayavani, Jul 18, 2018, 11:08 AM IST

18-july-3.jpg

ಮಹಾನಗರ : ಮಾಜಿ ಸಿಎಂ ಸಿದ್ದರಾಮಯ್ಯ ಸರಕಾರ ಅನುಷ್ಠಾನ ಗೊಳಿಸಿದ ಇಂದಿರಾ ಕ್ಯಾಂಟೀನ್‌ ಯೋಜನೆ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ನೆಮ್ಮದಿ ಹಾಗೂ ಸ್ವಾಭಿಮಾನದಿಂದ ಬದುಕಲು ಅವಕಾಶ ಮಾಡಿಕೊಟ್ಟಿದೆ. ಈ ಯೋಜನೆ ಜನರು ಶಾಶ್ವತವಾಗಿ ನೆನಪಿನಲ್ಲಿಡುವ ಕಾರ್ಯಕ್ರಮ ಎಂದು ನಗರಾಭಿವೃದ್ಧಿ ಮತ್ತು ವಸತಿ ಖಾತೆ ಸಚಿವ ಯು.ಟಿ. ಖಾದರ್‌ ಹೇಳಿದರು.

ಮಹಾನಗರ ಪಾಲಿಕೆ ವ್ಯಾಪ್ತಿಯ 5ನೇ ಇಂದಿರಾ ಕ್ಯಾಂಟಿನ್‌ ಉದ್ಘಾಟಿಸಿ ಅವರು ಮಾತನಾಡಿ, ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ತಮಿಳುನಾಡಿನ ಅಮ್ಮ ಕ್ಯಾಂಟೀನ್‌ ಮಾದರಿ ಅಧ್ಯಯನ ನಡೆಸಿ ಸಚಿವ ಕೆ.ಜೆ. ಜಾರ್ಜ್‌, ಬೆಂಗಳೂರು ಮೇಯರ್‌ ಪದ್ಮಾವತಿ ಮತ್ತು ನಾನು ರೂಪರೇಖೆ ತಯಾರಿಸಿದೆವು. ದುಡಿಯುವ ಕೈಗಳು ಹಸಿವಿನಿಂದ ಬಳಲಬಾರದು ಎನ್ನುವ ಉದ್ದೇಶದಿಂದ ಆರಂಭಿಸಿದ ಯೋಜನೆ ಇಂದು ರಾಜ್ಯಾದ್ಯಂತ ಉತ್ತಮ ಯಶಸ್ವಿ ಪಡೆದುಕೊಂಡಿದೆ ಎಂದರು.

ನಿಯಮ ಸಡಿಲಿಕೆ
ಬಿಪಿಎಲ್‌ ಪಡಿತರದಾರರ ನಿಯಮ ಸಡಿಲಿಕೆ ಮಾಡಲಾಗಿದ್ದು, 1,20,000 ದೊಳಗೆ ಆದಾಯವಿರುವ ಯಾರೂ ಕೂಡ ಪಡೆಯಬಹುದು. ಪಂಪ್‌ವೆಲ್‌ನಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ಬಗ್ಗೆ ಈಗಾಗಲೇ ಸಂಸದ ನಳಿನ್‌ ಕುಮಾರ್‌ ಅವರ ಜತೆ ಮಾತನಾಡಿದ್ದು, ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಕೇಂದ್ರ ಸಚಿವ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದೆ ಎಂದರು.

ದಾಖಲೆಯಿಟ್ಟು ಆರೋಪಿಸಲಿ
ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಮಾತನಾಡಿ, ಇಂದಿರಾ ಕ್ಯಾಂಟೀನ್‌ನಂತಹ ಜನಪರ ಕಾರ್ಯಕ್ರಮದ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಿದೆ. ಯಾವುದೇ ಯೋಜನೆಯ ಬಗ್ಗೆ ಅವ್ಯವಹಾರ ಆರೋಪ ಮಾಡುವ ಬಿಜೆಪಿ ಅದಕ್ಕೆ ಪೂರಕ ದಾಖಲೆಯಿಟ್ಟು ಆರೋಪಿಸಲಿ ಎಂದರು. ಮನಪಾ ಕಮಿಷನರ್‌ ಮೊಹಮ್ಮದ್‌ ನಝೀರ್‌ ಪ್ರಸ್ತಾವಿಸಿ, ಉರ್ವಸ್ಟೋರ್‌, ಲೇಡಿಗೋಷನ್‌, ಕಾವೂರು, ಸುರತ್ಕಲ್‌ ಮಾರ್ಕೆಟ್‌ ಬಳಿ ಇಂದಿರಾ ಕ್ಯಾಂಟೀನ್‌ ಆರಂಭಿಸಲಾಗಿದ್ದು, ಪಂಪ್‌ವೆಲ್‌ 5ನೇ ಕ್ಯಾಂಟೀನ್‌. ವರ್ಷಕ್ಕೆ ಶೇ.70ರಷ್ಟು (2.20ಕೋಟಿ ರೂ.) ಅನುದಾನ ಮನಪಾ ಆಡಳಿತ ನೀಡುತ್ತಿದೆ ಎಂದರು.

ಪಂಶುಸಂಗೋಪನೆ ಮತ್ತು ಮೀನುಗಾರಿಕಾ ಸಚಿವ ವೆಂಕಟರಾವ್‌ ನಾಡ ಗೌಡ ಉದ್ಘಾಟನೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಉಪಮಹಾಪೌರ ಕೆ. ಮಹಮ್ಮದ್‌, ಮಾಜಿ ಮೇಯರ್‌ಗಳಾದ ಕವಿತಾ ಸನಿಲ್‌, ಶಶಿಧರ್‌ ಹೆಗ್ಡೆ, ಕಾರ್ಪೊರೇಟರ್‌ ಗಳಾದ ಪ್ರವೀಣ್‌ಚಂದ್ರ ಆಳ್ವ, ನವೀನ್‌ ಡಿಸೋಜಾ, ಲತಾ ಸಾಲ್ಯಾನ್‌, ಆಶಾ ಡಿ’ಸಿಲ್ವಾ, ಅಬ್ದುಲ್‌ ರವೂಫ್‌, ಅಶೋಕ್‌ ಟಿ.ಕೆ. ನಾಗವೇಣಿ, ಅಪ್ಪಿ, ಕೆಪಿಸಿಸಿ ಸದಸ್ಯ ಕೇಶವ್‌, ಜಿಲ್ಲಾ ಧಾರ್ಮಿಕ ಪರಿಷತ್‌ ಸದಸ್ಯ ಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಒಳ್ಳೆಯ ಪ್ರತಿಕ್ರಿಯೆ
ಅಧ್ಯಕ್ಷತೆ ವಹಿಸಿದ್ದ ಮೇಯರ್‌ ಭಾಸ್ಕರ್‌ ಕೆ. ಮಾತನಾಡಿ, ಬಡವರ ಪರ ಕಾಳಜಿಯಿಂದ ರಾಜ್ಯ ಸರಕಾ ಇಂದಿರಾ ಕ್ಯಾಂಟೀನ್‌ ಆರಂಭಿಸಿದ್ದು, ಇದಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಹಸಿದ ಜನಸಾಮಾನ್ಯನಿಗೆ ಅನ್ನ ನೀಡುವ ಕೆಲಸವಾಗುತ್ತಿದೆ ಎಂದರು. 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.