ಹಾರಂಗಿಗೆ ಸಿಎಂ ಬಾಗಿನ
Team Udayavani, Jul 20, 2018, 10:24 AM IST
ಮಡಿಕೇರಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಪತ್ನಿ ಅನಿತಾ ಅವರೊಂದಿಗೆ ಗುರುವಾರ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಅವರೊಂದಿಗೆ ಬೃಹತ್ ಮತ್ತು ಮಧ್ಯಮ ನೀರಾವರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್, ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ, ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ. ಮಹೇಶ್ ಇದ್ದರು. ಪಿರಿಯಾಪಟ್ಟಣದಿಂದ ರಸ್ತೆ ಮೂಲಕ ಹಾರಂಗಿಗೆ ಆಗಮಿಸಿದ ಅವರು ಜಲಾಶಯದ ಬಳಿ ಇರುವ ಕಾವೇರಿ ಮಾತೆಗೆ ಮೊದಲು ಪೂಜೆ ಸಲ್ಲಿಸಿದರು.
ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಅವರು, 35 ವರ್ಷಗಳ ಬಳಿಕ ಕೊಡಗಿನಲ್ಲಿ ಉತ್ತಮ ಮಳೆಯಾಗಿದೆ. ರಾಜ್ಯದ ಎಲ್ಲ ಅಣೆಕಟ್ಟುಗಳು, ಕೆರೆಗಳು ಸಂಪೂರ್ಣ ತುಂಬಿವೆ, ಈ ಮಳೆ ಕೊಡಗು ಜಿಲ್ಲೆಯ ಮಟ್ಟಿಗೆ ಸಾಕಷ್ಟು ನಷ್ಟವನ್ನೂ ಉಂಟು ಮಾಡಿದೆ. ಜನರ ಕಷ್ಟಗಳಿಗೆ ಸರಕಾರ ಸ್ಪಂದಿಸಲಿದೆ ಎಂದರು. ಮಳೆಯಿಂದಾದ ನಷ್ಟಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳ ಜೊತೆ ಚರ್ಚಿಸಿ ಸೂಕ್ತ ಪರಿಹಾರ ನೀಡಲಾಗುವುದು ಎಂದರು. ಮಾತ್ರವಲ್ಲದೆ ಹಾಸನ, ಮೈಸೂರು, ಮಂಗಳೂರು ಮುಂತಾದ ಜಿಲ್ಲೆಗಳಲ್ಲೂ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುವುದರೊಂದಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ