ಗೌರಿ ಹತ್ಯೆ ಕೇಸ್:ಇನ್ನೋರ್ವ ವಶಕ್ಕೆ; ಬಂಧಿತರ ಸಂಖ್ಯೆ 8 ಕ್ಕೆ
Team Udayavani, Jul 20, 2018, 12:29 PM IST
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ಇನ್ನೋರ್ವನನ್ನು ವಶಕ್ಕೆ ಪಡೆದಿದ್ದು, ಬಂಧಿತ ಆರೋಪಿಗಳ ಸಂಖ್ಯೆ 8ಕ್ಕೇರಿದೆ.
ಗೌರಿ ಮೇಲೆ ಗುಂಡು ಹಾರಿಸಿದವನೆಂದು ಎಸ್ಐಟಿ ಹೇಳಿರುವ ಪ್ರಮುಖ ಆರೋಪಿ ಪರಶುರಾಮ ವಾಗ್ಮೋರೆಗೆ ಸಹಾಯ ಮಾಡಿದ ಆರೋಪದಲ್ಲಿ ಸಂಪಾಜೆ ಗ್ರಾಮದ ಮುಂಡಡ್ಕ ನಿವಾಸಿ ಮೋಹನ್ ನಾಯಕ್ ಎನ್ನುವವನನ್ನು ಬಂಧಿಸಿದ್ದಾರೆ.
ಬಂಧಿತ ಮೋಹನ್ ವಾಗ್ಮೋರೆಗೆ ಕಾರು, ಬೈಕ್ ಮತ್ತು ಮನೆ ಮಾಡಿ ಕೊಟ್ಟು ಸಹಕಾರ ನೀಡಿದ್ದ ಎಂದು ತಿಳಿದು ಬಂದಿದೆ.
ಮೋಹನ್ ನಾಯಕ್ನನ್ನು ಶುಕ್ರವಾರ ಬೆಳಗ್ಗೆ ಎಸಿಎಮ್ಎಮ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು 14 ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಲಾಗಿದೆ.
ಮಡಿಕೇರಿಯಲ್ಲಿ ಶಸ್ತ್ರಾಸ್ತ್ರ ವ್ಯಾಪಾರಿಯಾಗಿರುವ ಮೋಹನ್ ನಾಯಕ್ ಸನಾತನ ಸಂಸ್ಥೆಯ ಸಕ್ರೀಯ ಕಾರ್ಯಕರ್ತ ಎಂದು ತಿಳಿದು ಬಂದಿದೆ. ನಾಯಕ್ ನಿವಾಸಕ್ಕೆ ಮನೆಗೆ ಇತ್ತೀಚಿನ ಕೆಲ ದಿನಗಳಿಂದ ಆಗಾಗ ಕಾರುಗಳಲ್ಲಿ ಹೊರಗಿನಿಂದ ಜನ ಬಂದು ಹೋಗುತ್ತಿದ್ದರು ಎನ್ನಲಾಗಿದೆ. ಮೋಹನ್ ನಾಯಕ್ ನಾಟಿ ಜೌಷಧಿ ಕೂಡ ನೀಡುತ್ತಿದ್ದು, ಜೌಷಧಿಗಾಗಿ ಜನ ಹೊರಗಿನಿಂದ ಬರುತ್ತಿರಬಹುದು ಎಂದು ಸ್ಥಳೀಯರು ಭಾವಿಸಿದ್ದರು ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು